ETV Bharat / state

ರಾಯಚೂರಿನಲ್ಲಿ ಇಲಾಖಾ ಪ್ರಗತಿ ಸಭೆ ನಡೆಸಿದ ಸಚಿವ ಸಿ.ಟಿ.ರವಿ: ಅಧಿಕಾರಿಗಳಿಂದ ನೋ ರೆಸ್ಪಾನ್ಸ್

author img

By

Published : Nov 6, 2019, 10:29 PM IST

ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಸಿ.ಟಿ. ರವಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಅಭಿವೃದ್ದಿ ಹಾಗೂ ಕೈಗೊಂಡ ಕಾಮಗಾರಿಯ ಕುರಿತಂತೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರು. ಆದರೆ ಅಧಿಕಾರಿಗಳು ಸಮರ್ಪಕವಾಗಿ ಸಚಿವರಿಗೆ ಮಾಹಿತಿಯನ್ನು ನೀಡಲಿಲ್ಲ.

ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿ.ಟಿ. ರವಿ

ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಸಿ.ಟಿ. ರವಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಅಭಿವೃದ್ದಿ ಹಾಗೂ ಕೈಗೊಂಡ ಕಾಮಗಾರಿಯ ಕುರಿತಂತೆ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದುಕೊಂಡರು. ಆದರೆ ಅಧಿಕಾರಿಗಳು ಸಮರ್ಪಕವಾಗಿ ಸಚಿವರಿಗೆ ಮಾಹಿತಿಯನ್ನು ನೀಡಲಿಲ್ಲ. ಇದರಿಂದ ಗರಂ ಆದ ಸಚಿವರು, ಅಸಡ್ಡೆ ತೋರಿದ ಅಧಿಕಾರಿಗಳ ವಿರುದ್ದ ಹರಿಹಾಯ್ದರು.

ಪ್ರವಾಸಿ ತಾಣಗಳ ಅತಿಕ್ರಮಣ, ಬಿಡುಗಡೆ ಮಾಡಿದ ಅನುದಾನ ಬಳಕೆ ಮಾಡದೇ ಇರುವುದು, ಪ್ರವಾಸಿ ತಾಣಗಳನ್ನು ಸೂಕ್ತ ರೀತಿಯಲ್ಲಿ ಗುರುತಿಸದಿರುವುದಕ್ಕೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದಾಗ್ಲೂ ಅಧಿಕಾರಿಗಳಿಂದ ಸರಿಯಾದ ಸ್ಪಂದನೆ ಸಿಗಲಿಲ್ಲ.

ರಾಯಚೂರಿನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ

ಈ ವೇಳೆ ಮಾತನಾಡಿದ ಸಚಿವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಬಿಡುಗಡೆಗೊಳಿಸಿದ ಅನುದಾನ ಸರಿಯಾಗಿ ಬಳಕೆಯಾಗಿಲ್ಲ. ಬಳಕೆ ಮಾಡದೆ ಇರುವ ಅನುದಾನವನ್ನು ವಾಪಾಸ್ ತೆಗೆದುಕೊಳ್ಳಲಾಗುವುದು ತಿಳಿಸಿದ ಅವರು, ಸದ್ಯ ಜಿಲ್ಲೆಯ ಇಲಾಖೆಯ ವ್ಯವಸ್ಥೆ ನೋಡಿದರೆ ಬೇಜವಾಬ್ದಾರಿ ಕಂಡು ಬರುತ್ತಿದೆ ಎಂದರು.

ಇನ್ನು ಸಭೆಗೂ ಮುನ್ನ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಡಿ, ಫಲಾನುಭವಿಗಳಿಗೆ ಟ್ಯಾಕ್ಸಿ ಹಸ್ತಾಂತರಿಸಲಾಯ್ತು. ಸಭೆಯಲ್ಲಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಬಸನಗೌಡ ದದ್ದಲ್, ಬಸವರಾಜ ಪಾಟೀಲ್ ಇಟಗಿ, ಸಂಸದ ರಾಜಾ ಅಮರೇಶ್ವರ ನಾಯಕ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಗೈರಾಗಿದ್ದರು.

ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಸಿ.ಟಿ. ರವಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಅಭಿವೃದ್ದಿ ಹಾಗೂ ಕೈಗೊಂಡ ಕಾಮಗಾರಿಯ ಕುರಿತಂತೆ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದುಕೊಂಡರು. ಆದರೆ ಅಧಿಕಾರಿಗಳು ಸಮರ್ಪಕವಾಗಿ ಸಚಿವರಿಗೆ ಮಾಹಿತಿಯನ್ನು ನೀಡಲಿಲ್ಲ. ಇದರಿಂದ ಗರಂ ಆದ ಸಚಿವರು, ಅಸಡ್ಡೆ ತೋರಿದ ಅಧಿಕಾರಿಗಳ ವಿರುದ್ದ ಹರಿಹಾಯ್ದರು.

ಪ್ರವಾಸಿ ತಾಣಗಳ ಅತಿಕ್ರಮಣ, ಬಿಡುಗಡೆ ಮಾಡಿದ ಅನುದಾನ ಬಳಕೆ ಮಾಡದೇ ಇರುವುದು, ಪ್ರವಾಸಿ ತಾಣಗಳನ್ನು ಸೂಕ್ತ ರೀತಿಯಲ್ಲಿ ಗುರುತಿಸದಿರುವುದಕ್ಕೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದಾಗ್ಲೂ ಅಧಿಕಾರಿಗಳಿಂದ ಸರಿಯಾದ ಸ್ಪಂದನೆ ಸಿಗಲಿಲ್ಲ.

ರಾಯಚೂರಿನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ

ಈ ವೇಳೆ ಮಾತನಾಡಿದ ಸಚಿವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಬಿಡುಗಡೆಗೊಳಿಸಿದ ಅನುದಾನ ಸರಿಯಾಗಿ ಬಳಕೆಯಾಗಿಲ್ಲ. ಬಳಕೆ ಮಾಡದೆ ಇರುವ ಅನುದಾನವನ್ನು ವಾಪಾಸ್ ತೆಗೆದುಕೊಳ್ಳಲಾಗುವುದು ತಿಳಿಸಿದ ಅವರು, ಸದ್ಯ ಜಿಲ್ಲೆಯ ಇಲಾಖೆಯ ವ್ಯವಸ್ಥೆ ನೋಡಿದರೆ ಬೇಜವಾಬ್ದಾರಿ ಕಂಡು ಬರುತ್ತಿದೆ ಎಂದರು.

ಇನ್ನು ಸಭೆಗೂ ಮುನ್ನ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಡಿ, ಫಲಾನುಭವಿಗಳಿಗೆ ಟ್ಯಾಕ್ಸಿ ಹಸ್ತಾಂತರಿಸಲಾಯ್ತು. ಸಭೆಯಲ್ಲಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಬಸನಗೌಡ ದದ್ದಲ್, ಬಸವರಾಜ ಪಾಟೀಲ್ ಇಟಗಿ, ಸಂಸದ ರಾಜಾ ಅಮರೇಶ್ವರ ನಾಯಕ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಗೈರಾಗಿದ್ದರು.

Intro:¬ಸ್ಲಗ್: ಮಿನಿಷ್ಟರ್ ಮೀಟಿಂಗ್
ಫಾರ್ಮೇಟ್: ಎವಿಬಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 06-11-2019
ಸ್ಥಳ: ರಾಯಚೂರು
ಆಂಕರ್: ರಾಯಚೂರಿನಲ್ಲಿ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ರು.Body: ನಗರದ ಜಿಲ್ಲಾಧಿಕಾರಿ ಸಂಭಾಣದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ್ರು. ಸಭೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಅಭಿವೃದ್ದಿ ಹಾಗೂ ಕೈಗೊಂಡ ಕಾಮಗಾರಿಯ ಕುರಿತಂತೆ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ಪಡೆಯಲು ಪ್ರಾರಂಭಿಸಿದ್ರು. ಆದ್ರೆ ಅಧಿಕಾರಿಗಳಿಂದ ಮಾತ್ರ ಸಮಪರ್ಕ ಸಚಿವರಿಗೆ ಮಾಹಿತಿ ನೀಡಿಲ್ಲ. ಇದಕ್ಕೆ ಗರಂ ಸಚಿವರು, ಸಚಿವರು ಮೀಟಿಂಗ್ ಬರುವ ಮುಂದೆ ಸೂಚನೆ ನೀಡಿದ್ರು, ಅಸಡ್ಡೆ ತೋರಿಸಿರುವುದು ಅಧಿಕಾರಿಗಳ ವಿರುದ್ದ ಹರಿಹಾಯ್ದರು. ಅಲ್ಲದೇ ಪ್ರವಾಸಿ ತಾಣ ಅತಿಕ್ರಮಣ, ಬಿಡುಗಡೆ ಮಾಡಿದ ಅನುದಾನ ಬಳಕೆ ಮಾಡದೆ ಇರುವುದು, ಪ್ರವಾಸಿ ತಾಣಗಳನ್ನ ಸಮರ್ಪಕವಾಗಿ ಗುರುತಿಸಿರುವುದಕ್ಕೆ ಅಧಿಕಾರಿಗಳು ತರಾಟೆ ತೆಗೆದುಕೊಂಡರು ಸೂಕ್ತ ಕ್ರಮದ ಎಚ್ಚರಿಕೆ ನೀಡಿದ್ರು. ಈ ವೇಳೆ ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳು ಗೈರಾದ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು. ಇನ್ನೂ ಇದಾದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಚರ್ಚೆಸಿ ಆರಂಭಿಸಿದಾಗ ಕೆಲವೊಂದು ಮಾಹಿತಿ ಕೇಳಿದಾಗ ಸಮರ್ಪಕ ಮಾಹಿತಿ ನೀಡದಿದ್ದಾಗ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಅಲ್ಲದೇ ಜಿಲ್ಲೆಯ ಜಯಂತಿಗಳು ಆಚರಣೆ ಎಲ್ಲಾ ಸಮುದಾಯಗಳು ಮುಖಂಡರು, ರಾಜಕೀಯ ಮುಖಂಡರು, ಪ್ರತಿನಿಧಿಗಳಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ರು. ಇನ್ನೂ ಪ್ರವಾಸೋದ್ಯಮ ಇಲಾಖೆಗೆ ಬಿಡುಗಡೆಯಾದ ಅನುದಾನವನ್ನ ಬಳಕೆ ಮಾಡದೆ ಇರುವ ಕೆಆರ್ ಡಿಎಲ್ ನ ಇರುವ ಅನುದಾನವನ್ನ ವಾಪಾಸ್ ತೆಗೆದುಕೊಳ್ಳಲಾಗುವುದು. ಅಲ್ಲದೇ ಸದ್ಯ ಜಿಲ್ಲೆಯ ಇಲಾಖೆಯ ವ್ಯವಸ್ಥೆ ನೋಡಿದ್ರೆ ಅಜಾರಕತೆ ಕಾಡು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು. ಸಭೆಗೂ ಮುನ್ನ ಪ್ರವಾಸೋದ್ಯಮಕ್ಕೂ ಇಲಾಖೆ ವ್ಯಾಪ್ತಿಯಡಿಯಲ್ಲಿ ಫಲಾನುಭವಿಗಳು ಟ್ಯಾಕ್ಸಿ ಹಸ್ತಾಂತರ ಮಾಡಿದ್ರು. ಸಭೆಯಲ್ಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಬಸವನಗೌಡ ದದ್ದಲ್, ಬಸವರಾಜ ಪಾಟೀಲ್ ಇಟಗಿ, ಸಂಸದ ರಾಜಾ ಅಮರೇಶ್ವರ ನಾಯಕ ಇದ್ದರು. Conclusion:ಸಭೆಯಲ್ಲಿ ಇರಬೇಕಾದ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಸೇರಿದಂತೆ ಇತರೆ ಅಧಿಕಾರಿ ಗೈರು ಇದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.