ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ರಾಘವೇಂದ್ರ ಸ್ವಾಮಿ ಹಾಗೂ ಗ್ರಾಮ ದೇವತೆ ಮಂಚಾಲಮ್ಮ ದೇವಿ ದರ್ಶನ ಪಡೆದರು.
ಉಪ ಮುಖ್ಯಮಂತ್ರಿ ಮತ್ತು ಸಚಿವರು ಆಗಮಿಸುತ್ತಿದ್ದಂತೆ ಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿ ಪುಷ್ಪ ಮಾಲೆ ಹಾಕಿ ಬರಮಾಡಿಕೊಂಡರು.
ರಾಯರ ಮಠ ಭೇಟಿ ಬಳಿಕ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಪ್ರಭು ಚವ್ಹಾಣ್ ಭಾವಹಿಸಲಿದ್ದಾರೆ.