ರಾಯಚೂರು: ಲಾಡ್ಜ್ವೊಂದರ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತ ದೇಹ ಪತ್ತೆಯಾಗಿರುವ ಘಟನೆ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.
ತುರುವಿಹಾಳ ಗ್ರಾಮದ ಅಭಿಷೇಕ (23) ಮೃತ ಯುವಕ. ಕಳೆದ 1ನೇ ತಾರೀಖಿನಂದು ಸಿಂಧನೂರು ಪಟ್ಟಣದ ಬಸ್ ನಿಲ್ದಾಣದ ಎದುರಿರುವ ಲಾಡ್ಜ್ವೊಂದರಲ್ಲಿ ತಂಗಿದ್ದಾನೆ. ಆದ್ರೆ ಕೊಠಡಿಯೊಳಗಡೆಯಿಂದ ಹೊರಗಡೆ ಬಂದಿಲ್ಲ. ಹೀಗಾಗಿ ಅನುಮಾನಗೊಂಡು ವಿಚಾರಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ.
ಈ ಸುದ್ದಿಯನ್ನೂ ಓದಿ: ನಿಷೇಧಾಜ್ಞೆ ಜಾರಿ ಮಾಡಿದ್ರೂ ನಮ್ಮನ್ನು ಏನು ಮಾಡೋಕಾಗಲ್ಲ: ವಾಟಾಳ್
ಇದಾದ ಬಳಿಕ ಪೊಷಕರ ಸಮ್ಮುಖದಲ್ಲಿ ಪೊಲೀಸರು ಶವವನ್ನ ತೆರವುಗೊಳಿಸಿದ್ದಾರೆ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗುತ್ತಿದೆ. ಸದ್ಯ ಘಟನೆಯ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.