ಕೊಪ್ಪಳ: ದುಷ್ಕರ್ಮಿಗಳು ಬಾಲಕನ ಕೈ ಕಾಲು ಕಟ್ಟಿ ತುಂಗಭದ್ರಾ ಎಡದಂಡೆ ನಾಲೆಗೆ ಎಸೆದಿರುವ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ.
ಬಾಲಕನ ಮೃತದೇಹ ರಾಯಚೂರು ಜಿಲ್ಲೆಯ ಸಿಂಧನೂರು ಬಳಿಯ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಪತ್ತೆಯಾಗಿದೆ. ಕಾರಟಗಿ ಪಟ್ಟಣದ ನಜೀರ್ ಕಾಲೋನಿ ನಿವಾಸಿಯಾಗಿರುವ ಹತ್ತು ವರ್ಷದ ಬಾಲಕ ಮಲ್ಲಿಕಾರ್ಜುನ ಎಂಬಾತನನ್ನು ದುಷ್ಕರ್ಮಿಗಳು ಕೈ-ಕಾಲು ಕಟ್ಟಿ ತುಂಗಭದ್ರಾ ಎಡದಂಡೆ ಕಾಲುವೆಗೆ ಎಸೆದಿದ್ದಾರೆ.
ಬಾಲಕನಿಗೆ ಈಜು ಬರುತ್ತೆ ಎಂಬುದು ಗೊತ್ತಿದ್ದೇ ಆತನ ಕೈ ಕಾಲು ಕಟ್ಟಿ ಕಾಲುವೆಗೆ ಎಸೆದಿದ್ದಾರೆ. ಬಾಲಕ ಮಲ್ಲಿಕಾರ್ಜುನ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಈ ಕುರಿತಂತೆ ಬಾಲಕನ ಪೋಷಕರು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.