ETV Bharat / state

ಬರ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಚಿವ

ರಾಯಚೂರು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಬರ ಪರಿಹಾರ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಆವರಿಸಿರುವ ತೀವ್ರ ಬರಗಾಲ, ಕುಡಿಯುವ ನೀರಿನ ಸರಬರಾಜು, ನರೇಗಾ ಕಾಮಗಾರಿ, ಕೃಷಿ ಇಲಾಖೆ ಸೇರಿದಂತೆ ಮೇವು ಸಂಗ್ರಹಣೆ ಕುರಿತು ಚರ್ಚೆ ನಡೆಸಲಾಯಿತು.

author img

By

Published : May 16, 2019, 6:38 PM IST

ಬರ ಪರಿಹಾರ ಕಾಮಗಾರಿಗಳ ಪರಿಶೀಲನೆ ಸಭೆ

ರಾಯಚೂರು: ಜಿಲ್ಲಾ ಉಸ್ತುವರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ಬರ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ ನಡೆಯಿತು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಬರ ಪರಿಹಾರ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಆವರಿಸಿರುವ ತೀವ್ರ ಬರಗಾಲದ ಕುಡಿಯುವ ನೀರಿನ ಸರಬರಾಜು, ನರೇಗಾ ಕಾಮಗಾರಿ, ಕೃಷಿ ಇಲಾಖೆ ಸೇರಿದಂತೆ ಮೇವು ಸಂಗ್ರಹಣೆ ಕುರಿತಂತೆ ಚರ್ಚೆ ನಡೆಸಲಾಯಿತು.

ಬರ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ

ಸಭೆಯಲ್ಲಿ ಭಾಗವಹಿಸಿದ್ದ ಕೆಲ ಅಧಿಕಾರಿಗಳು ಸರಿಯಾದ ಮಾಹಿತಿ ಕೊಡದಿದ್ದಕ್ಕೆ ಕೋಪಗೊಂಡ ಸಚಿವ ವೆಂಕಟ್​ರಾವ್ ನಾಡಗೌಡ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಇದರಿಂದಾಗಿ ಸಭೆಯಲ್ಲಿ ಕೆಲ ಕಾಲ ನಿಶ್ಯಬ್ದ ವಾತಾವರಣ ನಿರ್ಮಾಣವಾಯಿತು. ಬಳಿಕ ಬರ ನಿರ್ವಹಣೆಗೆ ಯಾವುದೇ ಹಣದ ಕೊರತೆಯಿಲ್ಲ. ಮಾಡಬೇಕಾದ ಕಾಮಗಾರಿ ನಿರ್ವಹಿಸುತ್ತಿಲ್ಲ. ಸಭೆಗೆ ಸುಳ್ಳು ಮಾಹಿತಿ ನೀಡುತ್ತಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು.

ಇನ್ನು ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವೆಂಕಟರಾವ್ ನಾಡಗೌಡ, ಸರ್ಕಾರದಲ್ಲಿ ಬರಗಾಲ ನಿರ್ವಹಿಸುವುದಕ್ಕೆ ಹಣದ ಕೊರತೆಯಿಲ್ಲ. ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಪ್ರತಿ ತಾಲೂಕಿಗೆ ಒಂದೂವರೆ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ರಾಯಚೂರು: ಜಿಲ್ಲಾ ಉಸ್ತುವರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ಬರ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ ನಡೆಯಿತು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಬರ ಪರಿಹಾರ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಆವರಿಸಿರುವ ತೀವ್ರ ಬರಗಾಲದ ಕುಡಿಯುವ ನೀರಿನ ಸರಬರಾಜು, ನರೇಗಾ ಕಾಮಗಾರಿ, ಕೃಷಿ ಇಲಾಖೆ ಸೇರಿದಂತೆ ಮೇವು ಸಂಗ್ರಹಣೆ ಕುರಿತಂತೆ ಚರ್ಚೆ ನಡೆಸಲಾಯಿತು.

ಬರ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ

ಸಭೆಯಲ್ಲಿ ಭಾಗವಹಿಸಿದ್ದ ಕೆಲ ಅಧಿಕಾರಿಗಳು ಸರಿಯಾದ ಮಾಹಿತಿ ಕೊಡದಿದ್ದಕ್ಕೆ ಕೋಪಗೊಂಡ ಸಚಿವ ವೆಂಕಟ್​ರಾವ್ ನಾಡಗೌಡ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಇದರಿಂದಾಗಿ ಸಭೆಯಲ್ಲಿ ಕೆಲ ಕಾಲ ನಿಶ್ಯಬ್ದ ವಾತಾವರಣ ನಿರ್ಮಾಣವಾಯಿತು. ಬಳಿಕ ಬರ ನಿರ್ವಹಣೆಗೆ ಯಾವುದೇ ಹಣದ ಕೊರತೆಯಿಲ್ಲ. ಮಾಡಬೇಕಾದ ಕಾಮಗಾರಿ ನಿರ್ವಹಿಸುತ್ತಿಲ್ಲ. ಸಭೆಗೆ ಸುಳ್ಳು ಮಾಹಿತಿ ನೀಡುತ್ತಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು.

ಇನ್ನು ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವೆಂಕಟರಾವ್ ನಾಡಗೌಡ, ಸರ್ಕಾರದಲ್ಲಿ ಬರಗಾಲ ನಿರ್ವಹಿಸುವುದಕ್ಕೆ ಹಣದ ಕೊರತೆಯಿಲ್ಲ. ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಪ್ರತಿ ತಾಲೂಕಿಗೆ ಒಂದೂವರೆ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದರು.

Intro:ಸ್ಲಗ್: ಬರ ಮೀನಿಸ್ಟರ್ ಮೀಟಿಂಗ್
ಫಾರ್ಮೇಟ್: ಎವಿಬಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 16-೦5-2019
ಸ್ಥಳ: ರಾಯಚೂರು
ಆಂಕರ್: ರಾಯಚೂರು ಜಿಲ್ಲಾ ಉಸ್ತುವರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ಬರ ಪರಿಹಾರ ಕಾಮಗಾರಿಗಳ ಪರಿಶೀಲನೆ ಸಭೆ ನಡೆಯಿತು.Body:ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಬರ ಪರಿಹಾರ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯನ್ನ ಏರ್ಪಡಿಸಲಾಗಿತ್ತು. ಜಿಲ್ಲೆಯಲ್ಲಿ ಆವರಿಸಿರುವ ತೀವ್ರ ಬರಗಾಲದ ಕುಡಿಯುವ ನೀರಿನ ಸರಬರಾಜು, ನರೇಗಾ ಕಾಮಗಾರಿ, ಕೃಷಿ ಇಲಾಖೆ ಸೇರಿದಂತೆ ಮೇವು ಸಂಗ್ರಹಣೆ ಕುರಿತಂತೆ ವಿಷಯವನ್ನ ಚರ್ಚೆಸಲಾಯಿತು. ಸಭೆಯಲ್ಲಿ ಭಾಗವಹಿಸಿದ ಕೆಲ ಅಧಿಕಾರಿಗಳು ಸರಿಯಾದ ಮಾಹಿತಿಕೊಂಡದಕ್ಕೆ ಕೋಪಗೊಂಡ ಸಚಿವ ವೆಂಕಟ್ ರಾವ್ ನಾಡಗೌಡ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಲ್ಯಾಂಡ್ ಆರ್ಮಿ ಇಲಾಖೆ ಅಧಿಕಾರಿ ಕೇಳಿದ ಮಾಹಿತಿ ಸರಿಯಾಗಿ ಉತ್ತರಿಸಿದ, ಸಭೆಯಲ್ಲಿ ತರಬೇಕಾದ ಮಾಹಿತಿ ತರದ ಹಿನ್ನಲೆಯಲ್ಲಿ ಯುಸ್ ಲೇಸ್ ಫೆಲೋ ಎಂದು ತೀವ್ರವಾಗಿ ತರಾಟೆ ತೆಗೆದುಕೊಂಡರು. ಈ ವೇಳೆ ಸಭೆಯಲ್ಲಿ ಕೆಲ ಕಾಲ ನಿಶ್ಯಬ್ದ ವಾತಾವರಣ ನಿರ್ಮಾಣವಾಯಿತು. ಬಳಿಕ ಬರ ನಿರ್ವಹಣೆಗೆ ಯಾವುದೇ ಹಣದ ಕೊರತೆಯಿಲ್ಲ. ಮಾಡಬೇಕಾದ ಕಾಮಗಾರಿ ನಿರ್ವಹಿಸುತ್ತಿಲ್ಲ. ಸಭೆಗೆ ಸುಳ್ಳು ಮಾಹಿತಿ ನೀಡುತ್ತೀಯಾ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಈ ವೇಳೆ ಅಧಿಕಾರಿ ತಬಿಬ್ಬು ಅದ್ರು. ಇನ್ನೂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವೆಂಕಟರಾವ್ ನಾಡಗೌಡ, ಸರಕಾರದಲ್ಲಿ ಬರಗಾಲ ನಿರ್ವಹಿಸುವುದಕ್ಕೆ ಹಣದ ಕೊರತೆಯಿಲ್ಲ. ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದ್ದು, ನಿರ್ಲಕ್ಷ್ಯವಹಿಸಿದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಜಿಲ್ಲಾ ಪಂಚಾಯಿತಿ ಪ್ರತಿ ತಾಲೂಕಿಗೆ ಒಂದುವರೆ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದರು. Conclusion:ಬೈಟ್.1: ವೆಂಕಟರಾವ್ ನಾಡಗೌಡ, ಜಿಲ್ಲಾ ಉಸ್ತುವರಿ ಸಚಿವ, ರಾಯಚೂರು
ಬೈಟ್.2: ವೆಂಕಟರಾವ್ ನಾಡಗೌಡ, ಜಿಲ್ಲಾ ಉಸ್ತುವರಿ ಸಚಿವ, ರಾಯಚೂರು

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.