ETV Bharat / state

ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತ ಸಂತ್ರಸ್ತರಿಗೆ ಪರಿಹಾರ ಮಂಜೂರು.. ಇದು ಈಟಿವಿ ಭಾರತ ಇಂಪ್ಯಾಕ್ಟ್​​!! - ರಾಯಚೂರಲ್ಲ ಈಟಿವಿ ಭಾರತ ಇಂಪ್ಯಾಕ್ಟ್​​ ಸುದ್ದಿ

ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತ ಸಂತ್ರಸ್ತರಿಗೆ ಪರಿಹಾರ ಧನ ಮಂಜೂರು ಮಾಡಲು ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕ್ರಮ ಕೈಗೊಂಡಿದೆ. ಇದು ಈಟಿವಿ ಭಾರತ ಇಂಪ್ಯಾಕ್ಟ್​​..

impact
ಈಟಿವಿ ಭಾರತ ಇಂಪ್ಯಾಕ್ಟ್​​
author img

By

Published : Dec 21, 2019, 11:07 PM IST

ರಾಯಚೂರು: ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತ ಸಂತ್ರಸ್ತರಿಗೆ ತಕ್ಷಣವೇ ನೀಡಬೇಕಾದ ಪರಿಹಾರವನ್ನ ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಿಡುಗಡೆ ಮಾಡಲಾಗಿದೆ.

ಈಟಿವಿ ಭಾರತ ವರದಿ ಫಲಶ್ರುತಿ​​..

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ ಒಬ್ಬ ಸಂತ್ರಸ್ತರಿಗೆ 5 ಸಾವಿರ ರೂ. ಪರಿಹಾರ ನೀಡಲಾಗುತ್ತದೆ. ಆದರೆ, ರಾಯಚೂರು ಜಿಲ್ಲೆಯ ಕಳೆದ ಸುಮಾರು 8 ತಿಂಗಳಿನಿಂದ 22 ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ವಿಳಂಬವಾಗಿತ್ತು. ಈ ಬಗ್ಗೆ ಈಟಿವಿ ಭಾರತ್ "ನಾಚಿಕೆಗೇಡು,, ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತರಿಗೆ ಪರಿಹಾರ ನೀಡಲೂ ದುಡ್ಡಿಲ್ವಂತೆ!!" ಎನ್ನುವ ಶೀರ್ಷಿಕೆ ಅಡಿಯಲ್ಲಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತ ಸರ್ಕಾರ ಮಹಿಳಾ ಮತ್ತು ಕಲ್ಯಾಣ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಒಂದು ಲಕ್ಷ ರೂಪಾಯಿ ಹಣ ಬಿಡುಗಡೆ ಮಾಡಿದೆ.

ಕಳೆದ ಎಂಟು ತಿಂಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತರ ಪ್ರಕರಣ ಸಂತ್ರಸ್ತರಿಗೆ ತಕ್ಷಣ ನೀಡುವ ಪರಿಹಾರ ಹಣ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತಿತ್ತು. ಪ್ರಸ್ತಾವನೆ ಆಧಾರದ ಮೇಲೆ ಇದೀಗ ಒಂದು ಲಕ್ಷ ರೂ. ಜಮಾವಣೆಯಾಗಿದೆ. ಅದನ್ನ ಕೂಡಲೇ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗುವುದು ಎಂದು ರಾಯಚೂರು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಗುರುಪ್ರಸಾದ್ ತಿಳಿಸಿದ್ದಾರೆ.

ರಾಯಚೂರು: ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತ ಸಂತ್ರಸ್ತರಿಗೆ ತಕ್ಷಣವೇ ನೀಡಬೇಕಾದ ಪರಿಹಾರವನ್ನ ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಿಡುಗಡೆ ಮಾಡಲಾಗಿದೆ.

ಈಟಿವಿ ಭಾರತ ವರದಿ ಫಲಶ್ರುತಿ​​..

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ ಒಬ್ಬ ಸಂತ್ರಸ್ತರಿಗೆ 5 ಸಾವಿರ ರೂ. ಪರಿಹಾರ ನೀಡಲಾಗುತ್ತದೆ. ಆದರೆ, ರಾಯಚೂರು ಜಿಲ್ಲೆಯ ಕಳೆದ ಸುಮಾರು 8 ತಿಂಗಳಿನಿಂದ 22 ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ವಿಳಂಬವಾಗಿತ್ತು. ಈ ಬಗ್ಗೆ ಈಟಿವಿ ಭಾರತ್ "ನಾಚಿಕೆಗೇಡು,, ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತರಿಗೆ ಪರಿಹಾರ ನೀಡಲೂ ದುಡ್ಡಿಲ್ವಂತೆ!!" ಎನ್ನುವ ಶೀರ್ಷಿಕೆ ಅಡಿಯಲ್ಲಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತ ಸರ್ಕಾರ ಮಹಿಳಾ ಮತ್ತು ಕಲ್ಯಾಣ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಒಂದು ಲಕ್ಷ ರೂಪಾಯಿ ಹಣ ಬಿಡುಗಡೆ ಮಾಡಿದೆ.

ಕಳೆದ ಎಂಟು ತಿಂಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತರ ಪ್ರಕರಣ ಸಂತ್ರಸ್ತರಿಗೆ ತಕ್ಷಣ ನೀಡುವ ಪರಿಹಾರ ಹಣ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತಿತ್ತು. ಪ್ರಸ್ತಾವನೆ ಆಧಾರದ ಮೇಲೆ ಇದೀಗ ಒಂದು ಲಕ್ಷ ರೂ. ಜಮಾವಣೆಯಾಗಿದೆ. ಅದನ್ನ ಕೂಡಲೇ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗುವುದು ಎಂದು ರಾಯಚೂರು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಗುರುಪ್ರಸಾದ್ ತಿಳಿಸಿದ್ದಾರೆ.

Intro:ಸ್ಲಗ್: ಇಂಪ್ಯಾಕ್ಟ್
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೧-೧೨-೨೦೧೯
ಸ್ಥಳ: ರಾಯಚೂರು

ಆಂಕರ್: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ಸಂತ್ರಸ್ತರಿಗೆ ತತ್‌ಕ್ಷಣವಾಗಿ ನೀಡಬೇಕಾದ ಪರಿಹಾರವನ್ನ ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಿಡುಗಡೆ ಮಾಡಲಾಗಿದೆ. Body:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪ್ಸೋಕೊ ಕಾಯಿದೆಯಡಿ ದಾಖಲಾದ ಪ್ರಕರಣಗಳ ಸಂತ್ರಸ್ತರಿಗೆ ತುರ್ತು ಪರಿಹಾರ ಒಬ್ಬ ಸಂತ್ರಸ್ತರಿಗೆ ೫ ಸಾವಿರ ಪರಿಹಾರ ಹಣವನ್ನ ನೀಡಲಾಗುತ್ತದೆ. ಆದ್ರೆ ರಾಯಚೂರು ಜಿಲ್ಲೆಯ ಕಳೆದ ಸುಮಾರು ೮ ತಿಂಗಳಿನಿಂದ ೨೨ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ವಿಳಂಬವಾಗಿತ್ತು. ಈ ಬಗ್ಗೆ ಈಟಿವಿ ಭಾರತ್ "ನಾಚಿಕೆಗೇಡು,, ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತರಿಗೆ ಪರಿಹಾರ ನೀಡಲೂ ದುಡ್ಡಿಲ್ವಂತೆ!!" ಎನ್ನುವ ಶೀರ್ಷಿಕೆ ಅಡಿಯಲ್ಲಿ ವಿಸೃತ್ತ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೇತ್ತ ಸರಕಾರ ಮಹಿಳಾ ಮತ್ತು ಕಲ್ಯಾಣ ಇಲಾಖೆಯಿಂದ ಹಣ ಬಿಡುಗಡೆ ಮಾಡುವ ಮೂಲಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಒಂದು ಲಕ್ಷ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ.
Conclusion:ಕೋಟ್: ಜಿಲ್ಲೆ ೮ ಕಳೆದ ಎಂಟು ತಿಂಗಳನಿಂದ ಅಪ್ರಾಪ್ತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಪ್ರಕರಣ ಸಂತ್ರಸ್ತರಿಗೆ ತತ್‌ಕ್ಷಣ ನೀಡುವ ಪರಿಹಾರ ಹಣ ಅನುದಾನಕ್ಕಾಗಿ ಪ್ರಸ್ತಾವನೆಯನ್ನ ಸಲ್ಲಿಸಲಾಗುತ್ತಿತ್ತು. ಪ್ರಸ್ತಾವನೆ ಆಧಾರದ ಮೇಲೆ ಇದೀಗ ಹಣ ಇಲಾಖೆ ಒಂದು ಲಕ್ಷ ರೂಪಾಯಿ ಜಮಾವಣೆಯಾಗಿದ್ದು,ಅದನ್ನ ಕೂಡಲೇ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗುವುದು.- ಗುರುಪ್ರಸಾದ್, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ, ರಾಯಚೂರು

(ಈ ಲಿಂಕ್‌ನಲ್ಲಿ ವಿಡಿಯೋವನ್ನ ಬಳಸಿಕೊಳ್ಳಲು ವಿನಂತಿ)
https://www.etvbharat.com/kannada/karnataka/state/raichur/district-child-protection-unit-raichur/ka20191218231853505

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.