ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸಂತೆಕಲ್ಲೂರು ಗ್ರಾಮದ ಬಳಿ ಗಡ್ಡಿಹಳ್ಳದಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ ಸೇತುವೆ ನಿನ್ನೆ ಸುರಿದ ಮಳೆಯಿಂದಾಗಿ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದೆ.
ಲಿಂಗಸೂಗೂರು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಬೆಂಗಳೂರು, ಬಳ್ಳಾರಿ, ಗಂಗಾವತಿ ಸೇರಿದಂತೆ ಪ್ರಮುಖ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ನಿತ್ಯ ಹಲವು ವಾಹನಗಳು ಸಂಚಾರಿಸುತ್ತವೆ. ಈಗ ಸೇತುವೆ ಸಾಧಾರಣ ಮಳೆಗೆ ಕೊಚ್ಚಿ ಹೋಗಿರುವುದರಿಂದ ಸಂಪರ್ಕ ಕಡಿತಗೊಂಡು ತೊಂದರೆ ಅನುಭವಿಸಬೇಕಾಗಿದೆ.
ಇನ್ನು ಹಳ್ಳಕ್ಕೆ ಹಳೆಯ ಕಾಲದ ಸೇತುವೆಯಿದ್ದರಿಂದಾಗಿ, ಶಿಥಿಲಗೊಂಡಿರುವ ಪರಿಣಾಮ ಕೆಲ ತಿಂಗಳ ಹಿಂದೆ ಹಳ್ಳಕ್ಕೆ ತಾತ್ಕಾಲಿಕವಾಗಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಈಗಾಗಲೇ ನಿರ್ಮಾಣ ಮಾಡಲಾಗಿರುವ ಸೇತುವೆ ಗುಣಮಟ್ಟ ಕಾಪಡಿಕೊಳ್ಳಬೇಕಾಗಿತ್ತು. ಆದರೆ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಸೇರಿಕೊಂಡು ಕಳಪೆ ಕಾಮಗಾರಿ ಮಾಡಿರುವ ಪರಿಣಾಮ ಸಾಧಾರಣ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಒಟ್ಟಿನಲ್ಲಿ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದರಿಂದ ಸಾವರ್ಜನಿಕರು ಇದೀಗ ತೊಂದರೆಯನ್ನು ಅನುಭವಿಸುತ್ತಿದ್ದಾರೆ.
.