ETV Bharat / state

ಬಸವಸಾಗರ ಡ್ಯಾಂನಿಂದ 1.11 ಲಕ್ಷ ಕ್ಯೂಸೆಕ್‌ ನೀರು ಬಿಡುಗಡೆ; ಕೃಷ್ಣಾ ನದಿಪಾತ್ರಕ್ಕೆ ಪ್ರವಾಹ ‌ಭೀತಿ

author img

By

Published : Jul 13, 2022, 9:39 AM IST

ಕೃಷ್ಣಾ ನದಿಯಲ್ಲಿ ಲಕ್ಷಾಂತರ ಕ್ಯೂಸೆಕ್​​ ನೀರು ಹರಿದು ಬರುತ್ತಿರುವುದರಿಂದ ರಾಯಚೂರು ಜಿಲ್ಲೆಯ ಲಿಂಗಸೂಗೂರು, ದೇವದುರ್ಗ, ರಾಯಚೂರು ತಾಲೂಕುಗಳ ಗ್ರಾಮಗಳಿಗೆ ಮತ್ತು ನಡುಗಡ್ಡೆ ಪ್ರದೇಶಗಳಿಗೆ ಪ್ರವಾಹ ಭೀತಿ ಎದುರಾಗಿದೆ.

Flood fear in Krishna basin
ಕೃಷ್ಣಾ ನದಿಗೆ ನೀರು ಬಿಡುಗಡೆ

ರಾಯಚೂರು: ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಪ್ರದೇಶದಲ್ಲಿ ಪ್ರವಾಹ ‌ಭೀತಿ ಹೆಚ್ಚಾಗಿದೆ. ನಾರಾಯಣಪುರ(ಬಸವ ಸಾಗರ) ಜಲಾಶಯದಿಂದ ಇಂದು ಬೆಳಗ್ಗೆ 7 ಗಂಟೆ 1.11 ಲಕ್ಷ ಕ್ಯೂಸೆಕ್​​ ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ. ಜಲಾಶಯಕ್ಕೀಗ 90 ಸಾವಿರ ಕ್ಯೂಸೆಕ್​​ ‌ನೀರು ಹರಿದು(ಒಳ ಹರಿವು) ಬರುತ್ತಿದೆ.


ಕೃಷ್ಣಾ ನದಿಯಲ್ಲಿ ಲಕ್ಷಾಂತರ ಕ್ಯೂಸೆಕ್​​ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಲಿಂಗಸೂಗೂರು, ದೇವದುರ್ಗ, ರಾಯಚೂರು ತಾಲೂಕುಗಳ ಗ್ರಾಮಗಳು ಮತ್ತು ನಡುಗಡ್ಡೆ ಪ್ರದೇಶಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ‌ ಗ್ರಾಮ ಮುಳುಗಡೆ ಹಂತ ತಲುಪಿದೆ. ಇದರಿಂದ ನಡುಗಡ್ಡೆ ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಳುವ ಸಾಧ್ಯತೆಯಿದೆ. ನದಿ ತೀರದ ಹೊಲಗಳಿಗೆ ನೀರು ನುಗ್ಗಿದೆ.

ಪ್ರವಾಹ ಎದುರಿಸಲು ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ನದಿತೀರದ ನಡುಗಡ್ಡೆ ಪ್ರದೇಶದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆಯ ಸಂದೇಶ ಸಾರುವ ಮೂಲಕ‌ ನದಿತೀರಕ್ಕೆ ಜನ-ಜಾನುವಾರು ತೆರಳದಂತೆ ಸೂಚಿಸಲಾಗಿದೆ‌.

ಇದನ್ನೂ ಓದಿ: ಗುಜರಾತ್‌ನಲ್ಲಿ ಭಾರಿ ಮಳೆ, ಕೆಲ ಪ್ರದೇಶಗಳು ಜಲಾವೃತ; ಒಡಿಶಾದಲ್ಲಿ ವಿದ್ಯಾರ್ಥಿಗಳ ಸಂಕಷ್ಟ

ರಾಯಚೂರು: ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಪ್ರದೇಶದಲ್ಲಿ ಪ್ರವಾಹ ‌ಭೀತಿ ಹೆಚ್ಚಾಗಿದೆ. ನಾರಾಯಣಪುರ(ಬಸವ ಸಾಗರ) ಜಲಾಶಯದಿಂದ ಇಂದು ಬೆಳಗ್ಗೆ 7 ಗಂಟೆ 1.11 ಲಕ್ಷ ಕ್ಯೂಸೆಕ್​​ ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ. ಜಲಾಶಯಕ್ಕೀಗ 90 ಸಾವಿರ ಕ್ಯೂಸೆಕ್​​ ‌ನೀರು ಹರಿದು(ಒಳ ಹರಿವು) ಬರುತ್ತಿದೆ.


ಕೃಷ್ಣಾ ನದಿಯಲ್ಲಿ ಲಕ್ಷಾಂತರ ಕ್ಯೂಸೆಕ್​​ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಲಿಂಗಸೂಗೂರು, ದೇವದುರ್ಗ, ರಾಯಚೂರು ತಾಲೂಕುಗಳ ಗ್ರಾಮಗಳು ಮತ್ತು ನಡುಗಡ್ಡೆ ಪ್ರದೇಶಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ‌ ಗ್ರಾಮ ಮುಳುಗಡೆ ಹಂತ ತಲುಪಿದೆ. ಇದರಿಂದ ನಡುಗಡ್ಡೆ ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಳುವ ಸಾಧ್ಯತೆಯಿದೆ. ನದಿ ತೀರದ ಹೊಲಗಳಿಗೆ ನೀರು ನುಗ್ಗಿದೆ.

ಪ್ರವಾಹ ಎದುರಿಸಲು ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ನದಿತೀರದ ನಡುಗಡ್ಡೆ ಪ್ರದೇಶದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆಯ ಸಂದೇಶ ಸಾರುವ ಮೂಲಕ‌ ನದಿತೀರಕ್ಕೆ ಜನ-ಜಾನುವಾರು ತೆರಳದಂತೆ ಸೂಚಿಸಲಾಗಿದೆ‌.

ಇದನ್ನೂ ಓದಿ: ಗುಜರಾತ್‌ನಲ್ಲಿ ಭಾರಿ ಮಳೆ, ಕೆಲ ಪ್ರದೇಶಗಳು ಜಲಾವೃತ; ಒಡಿಶಾದಲ್ಲಿ ವಿದ್ಯಾರ್ಥಿಗಳ ಸಂಕಷ್ಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.