ರಾಯಚೂರು: ಜಿಲ್ಲೆಯ ಲಿಂಗಸುಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ರೂಪದಲ್ಲಿ 5 ಲಕ್ಷ ನೀಡಿದ್ದು, ಸ್ಥಳೀಯವಾಗಿ ಸಹಾಯ, ಸಹಕಾರ ನೀಡುವುದಾಗಿ ತಿಳಿಸಿದರು.