ETV Bharat / state

ಅಬ್ದುಲ್​ ಕಲಾಂ ಹುಟ್ಟುಹಬ್ಬ ಹಿನ್ನೆಲೆ ರಾಯಚೂರಲ್ಲಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಜಾಥಾ

author img

By

Published : Oct 15, 2019, 4:17 PM IST

ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಜನ್ಮದಿನದ ಪ್ರಯುಕ್ತ ರಾಯಚೂರು ಪೊಲೀಸ್​ ಇಲಾಖೆ ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಜಾಥಾ ನಡೆಸಿತು.

ಸಂಚಾರಿ ನಿಯಮಗಳ ಪಾಲನೆ ಜಾಗೃತಿ ಜಾಥಾ

ರಾಯಚೂರು: ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಪ್ರಯುಕ್ತ ರಾಯಚೂರಿನಲ್ಲಿ ಇಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಹಾಗೂ ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಜಾಥಾ ನಡೆಯಿತು.

ಜಾಥಾ ಮೂಲಕ ಟ್ರಾಫಿಕ್ ನಿಯಮಗಳ ಬಗ್ಗೆ ಪಾಠ ಹೇಳಲು ರಾಯಚೂರು ಪೊಲೀಸರು ಮುಂದಾಗಿದ್ದಾರೆ. ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಎಸ್ಪಿ ಸಿ.ಬಿ.ವೇದಮೂರ್ತಿ, ಮಿಸೈಲ್​ ಮ್ಯಾನ್ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಾಥಾಗೆ ಚಾಲನೆ ನೀಡಿದರು. ಅಂಬೇಡ್ಕರ್ ವೃತ್ತದ ಮೂಲಕ ಆರಂಭವಾದ ಜಾಥಾ ಏಕ್ ಮಿನಾರ್ ರಸ್ತೆ, ತಿನ್ ಖಂದಿಲ್, ಮಹಾವೀರ್ ಸರ್ಕಲ್, ಚಂದ್ರಮೌಲೇಶ್ವರ ವೃತ್ತ, ಗಂಜ್​​ ರಸ್ತೆ ಮೂಲಕ ಜಿಲ್ಲಾ ಪೊಲೀಸ್ ಕವಾಯತು ಮೈದಾನದವರೆಗೆ ನಡೆಯಿತು.

raichur
ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಜಾಥಾ
ವಿದ್ಯಾರ್ಥಿಗಳು ಸೇರಿದಂತೆ 250ಕ್ಕೂ ಹೆಚ್ಚು ಸಾರ್ವಜನಿಕರು ಸ್ವತಃ ತಮ್ಮದೇ ವಾಹನ ಹಾಗೂ ಹೆಲ್ಮೆಟ್ ಧರಿಸಿ ಬೈಕ್ ಮೂಲಕ ಜಾಗೃತಿ ಫಲಕ ಪ್ರದರ್ಶಿಸಿ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಿದರು. ಜಾಥಾದಲ್ಲಿ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಹೆಲ್ಮೆಟ್ ಹಾಕಿಕೊಂಡು ಬೈಕ್ ಏರಿ ರಸ್ತೆಯಲ್ಲಿ ಸಂಚರಿಸಿದರು. ಈ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿ ಯುವಕರನ್ನು ಹುರಿದುಂಬಿಸಿದರು. ಸಾರ್ವಜನಿಕರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.

ರಾಯಚೂರು: ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಪ್ರಯುಕ್ತ ರಾಯಚೂರಿನಲ್ಲಿ ಇಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಹಾಗೂ ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಜಾಥಾ ನಡೆಯಿತು.

ಜಾಥಾ ಮೂಲಕ ಟ್ರಾಫಿಕ್ ನಿಯಮಗಳ ಬಗ್ಗೆ ಪಾಠ ಹೇಳಲು ರಾಯಚೂರು ಪೊಲೀಸರು ಮುಂದಾಗಿದ್ದಾರೆ. ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಎಸ್ಪಿ ಸಿ.ಬಿ.ವೇದಮೂರ್ತಿ, ಮಿಸೈಲ್​ ಮ್ಯಾನ್ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಾಥಾಗೆ ಚಾಲನೆ ನೀಡಿದರು. ಅಂಬೇಡ್ಕರ್ ವೃತ್ತದ ಮೂಲಕ ಆರಂಭವಾದ ಜಾಥಾ ಏಕ್ ಮಿನಾರ್ ರಸ್ತೆ, ತಿನ್ ಖಂದಿಲ್, ಮಹಾವೀರ್ ಸರ್ಕಲ್, ಚಂದ್ರಮೌಲೇಶ್ವರ ವೃತ್ತ, ಗಂಜ್​​ ರಸ್ತೆ ಮೂಲಕ ಜಿಲ್ಲಾ ಪೊಲೀಸ್ ಕವಾಯತು ಮೈದಾನದವರೆಗೆ ನಡೆಯಿತು.

raichur
ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಜಾಥಾ
ವಿದ್ಯಾರ್ಥಿಗಳು ಸೇರಿದಂತೆ 250ಕ್ಕೂ ಹೆಚ್ಚು ಸಾರ್ವಜನಿಕರು ಸ್ವತಃ ತಮ್ಮದೇ ವಾಹನ ಹಾಗೂ ಹೆಲ್ಮೆಟ್ ಧರಿಸಿ ಬೈಕ್ ಮೂಲಕ ಜಾಗೃತಿ ಫಲಕ ಪ್ರದರ್ಶಿಸಿ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಿದರು. ಜಾಥಾದಲ್ಲಿ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಹೆಲ್ಮೆಟ್ ಹಾಕಿಕೊಂಡು ಬೈಕ್ ಏರಿ ರಸ್ತೆಯಲ್ಲಿ ಸಂಚರಿಸಿದರು. ಈ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿ ಯುವಕರನ್ನು ಹುರಿದುಂಬಿಸಿದರು. ಸಾರ್ವಜನಿಕರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.
Intro:ಮಾಜಿ ರಾಷ್ಟ್ರಪತಿ ಹಾಗೂ ಮಿಸೈಲ್ ಮ್ಯಾನ್ ಎಂದೇ ಪ್ರಖ್ಯಾತರಾಗಿದ್ದ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನ ದಿನದ ಪ್ರಯುಕ್ತ ರಾಯಚೂರಿನಲ್ಲಿ ಇಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಹಾಗೂ ಸಂಚಾರಿ ನಿಯಮಗಳ ಪಾಲನೆ ಜಾಗೃತಿ ಜಾಥ ನಡೆಯಿತು.


Body:ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಂಚಾರಿ ನಿಯಮಗಳ ಪಾಲನೆಗಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಜಾಗೃತಿ ಕಾರ್ಯಕ್ರಮ ಏರ್ಪಡಿಸುವ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ್ದಲ್ಲಿ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಿದ್ದು ಆದರೂ ಕೂಡ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಜಾತ ಏರ್ಪಡಿಸಿ ಟ್ರಾಫಿಕ್ ಪಾಟವನ್ನು ಹೇಳಲು ಮುಂದಾಗಿದೆ. ನಗರದ ಜಿಲ್ಲಾ ಮಹಾತ್ಮಾಗಾಂಧಿ ಕ್ರೀಡಾಗಣದಲ್ಲಿ ಇಂದು ಎಸ್ಪಿ ಸಿಬಿ ವೇದಮೂರ್ತಿ ಅವರು ಗಾಂಧೀಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಜಿ ರಾಷ್ಟ್ರ ಪತಿ ಮಿಸಾಯಿಲ್ ಮ್ಯಾನ್ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಸದರಿ ಜಾಥ ಡಾಕ್ಟರ್ ಬಿಆರ್ ಅಂಬೇಡ್ಕರ್ ವೃತ್ತದ ಮುಲಕ ಆರಂಭವಾಗಿ ಏಕ್ ಮಿನಾರ್ ರಸ್ತೆ, ತಿನ್ ಖಂದಿಲ್, ಮಹಾವೀರ್ ಸರ್ಕಲ್, ಚಂದ್ರಮೌಲೇಶ್ವರ ವೃತ, ಗಂಜ ರಸ್ತೆ ಮೂಲಕ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದವರೆಗೆ ನಡೆಯಿತು. ಸದರಿ ಜಾಥದಲ್ಲಿ ವಿವಿಧ ಸಂಘ ಸಂಸ್ಥೆಯ ಮುಖಂಡರು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಎನ್ಎಸ್ಎಸ್ ವಿದ್ಯಾರ್ಥಿಗಳು ಸೇರಿದಂತೆ 250ಕ್ಕೂ ಹೆಚ್ಚು ಜನರು ಸ್ವತಃ ತಮ್ಮದೇ ವಾಹನ ಹಾಗೂ ಹೆಲ್ಮೆಟ್ ಧರಿಸಿ ಬೈಕ್ ಮೂಲಕ ಜಾಗೃತಿ ಫಲಕ ಪ್ರದರ್ಶಿಸಿ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಿದರು. ಜಾಥಾದಲ್ಲಿ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಅವರು ಹೆಲ್ಮೆಟ್ ಹಾಕಿಕೊಂಡು ಬೈಕ್ ಏರಿ ರಸ್ತೆಯಲ್ಲಿ ಸಂಚರಿ ಎಲ್ಲರಿಗೂ ಅಚ್ಚರಿ ಮೂಡಿಸಿ ಯುವಕರನ್ನು ಹುರಿದುಂಬಿಸಿದರು. ಜೊತೆಗೆ ಹೆಲ್ಮೆಟ್ ಧರಿಸಿ ಬಾರದವರಿಗೆ ಜಿಲ್ಲಾ ಕ್ರಿಡಾಂಗಣದಲ್ಲಿ ಮಾರಾಟಕ್ಕೆ ಅನುಕೂಲ ಮಾಡಿ ಕಡ್ಡಾಯವಾಗಿ ಜೀವ ರಕ್ಷಕ ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿಕೊಳ್ಳಬೇಕು ಎಂದು ಸಂದೆಶ ನೀಡಿದರು. ಸಾರ್ವಜನಿಕರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು ಈಗಾಗಲೇ ಸಂಚಾರ ನಿಯಮಗಳ ಬಗ್ಗೆ ಹಲವರು ಕಾರ್ಯಕ್ರಮಕ್ಕೆ ಕೊಂಡಿದ್ದು ಈ ಜಾಥಾದ ಮೂಲಕ ಮತ್ತೊಮ್ಮೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುತ್ತಿದ್ದು ಯಾವುದೇ ಕಾರಣಕ್ಕೂ ತ್ರಿಬಲ್ ರೈಡಿಂಗ್ ಹೆಲ್ಮೆಟ್ ಇಲ್ಲದೆ ಬೈಕ್ ನಡೆಸುವುದು, ಪರವಾನಿಗೆ ರಹಿತ ವಾಹನ ಚಾಲನೆ, ಇತ್ಯಾದಿ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಭಾರಿ ಮೊತ್ತದ ದಂಡ ತೆರಬೇಕಾಗುತ್ತದೆ ಯಾವುದೇ ನೆಪ ಹೇಳದೆ ತಮ್ಮ ತಲೆಯನ್ನು ಹಾಗೂ ಜೀವ ರಕ್ಷಣೆ ಮಾಡಿಕೊಳ್ಳಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಎಸ್ಪಿ ವೇದಮೂರ್ತಿ ಅವರು ಸಾರ್ವಜನಿಕರಿಗೆ ಸಲಹೆ ನೀಡಿದರು. ಸರ್, ಇದಕ್ಕೆ ವಿಸ್ಯುವೆಲ್ ಇವೆ ಪ್ಲೆ ಆಗ್ತಿಲ್ಲ. ಅದಕ್ಕೆ ಫೋಟೋ ಹಾಕಿದಿನಿ. ಸ್ವಲ್ಪ ಹೊತ್ತಿನಲ್ಲಿ wrap app ಇಂದ ವಿಸ್ಯುವೆಲ್ ಕಳಿಸುವೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.