ರಾಯಚೂರು: ಹೋಮ್ ಕ್ವಾರಂಟೈನಲ್ಲಿದ್ದ ವ್ಯಕ್ತಿಯೋರ್ವ ಮನೆಯಿಂದ ತಪ್ಪಿಸಿಕೊಂಡು ಹೋಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಸ್ಕಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಶಂಕಿತ ಕೊರೊನಾ ವ್ಯಕ್ತಿಯನ್ನ ಹೋಮ್ ಕ್ವಾರಂಟೈನ್ನಲ್ಲಿ ಇರಿಸುವ ಮೂಲಕ ನಿಗಾ ವಹಿಸಲಾಗಿತ್ತು. ಆದ್ರೆ ಈ ಶಂಕಿತ ವ್ಯಕ್ತಿ ಮನೆಯ ಬೀಗ ಹಾಕಿ ಮನೆಯಿಂದ ತಪ್ಪಿಸಿಕೊಂಡು ಹೋಗಿದ್ದು, ಇವನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಈ ವ್ಯಕ್ತಿ ದೆಹಲಿಯ ನಿಜಾಮುದ್ದೀನ್ ಸಭೆಗೆ ಹೋಗಿ ಬಂದಿದ್ದ. ಈ ಹಿನ್ನೆಲೆ ಜಿಲ್ಲಾಡಳಿತದಿಂದ ವ್ಯಕ್ತಿಯ ಆರೋಗ್ಯ ತಪಾಸಣೆ ಮಾಡುವ ಮೂಲಕ ಹೋಮ್ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಈಗ ವ್ಯಕ್ತಿ ನಾಪತ್ತೆಯಾಗಿರುವುದು ಜಿಲ್ಲೆಯ ಜನತೆಗೆ ಆತಂಕ ಮೂಡಿಸಿದೆ.