ETV Bharat / state

ಕೃಷ್ಣ ನದಿಗೆ 2.71 ಲಕ್ಷ ಕ್ಯೂಸೆಕ್ ನೀರು: ಕಲಬುರಗಿ- ದೇವದುರ್ಗ ಸಂಪರ್ಕ ಬಂದ್

author img

By

Published : Aug 5, 2019, 6:16 AM IST

ಜಿಲ್ಲೆಯ ನಾರಾಯಣಪುರ ಜಲಾಶಯ ಭರ್ತಿಯಾಗಿದ್ದು ಕೃಷ್ಣಾ ನದಿಗೆ ಹೆಚ್ಚುವರಿ ನೀರು ಹರಿಬಿಟ್ಟಿದ್ದರಿಂದ ದೇವದುರ್ಗ ತಾಲೂಕಿನ ಹುವಿನಹಡಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೇತುವೆ ಮೇಲಿನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಹುವಿನಹಡಗಿ ಬ್ರಿಜ್

ರಾಯಚೂರು : ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ 2.71 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಪರಿಣಾಮ ದೇವದುರ್ಗ ತಾಲೂಕಿನ ಹುವಿನಹಡಗಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಸೇತುವೆ ಮುಳುಗಡೆಯಿಂದ ಸಾರ್ವಜನಿಕರು ಸಂಪರ್ಕವಿಲ್ಲದೆ ಪರದಾಡುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಲಬುರಗಿ ಮತ್ತು ದೇವದುರ್ಗ ಸಂಪರ್ಕ ಕಲ್ಪಿಸುವ ಹುವಿನಹಡಗಿ ಸೇತುವೆಯ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದರಿಂದ ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ.

ನದಿಗೆ ಇನ್ನಷ್ಟು ನೀರು ಹರಿದು ಬರುವ ಸಾಧ್ಯತೆ ಇದ್ದು, ಜಿಲ್ಲೆಯ ಲಿಂಗಸುಗೂರು, ದೇವದುರ್ಗ, ರಾಯಚೂರು ಗ್ರಾಮೀಣ ಭಾಗದ ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಳುಗಡೆಯಾದ ಹುವಿನಹಡಗಿ ಸೇತುವೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ ನಡೆಸಿದರು.

ರಾಯಚೂರು : ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ 2.71 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಪರಿಣಾಮ ದೇವದುರ್ಗ ತಾಲೂಕಿನ ಹುವಿನಹಡಗಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಸೇತುವೆ ಮುಳುಗಡೆಯಿಂದ ಸಾರ್ವಜನಿಕರು ಸಂಪರ್ಕವಿಲ್ಲದೆ ಪರದಾಡುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಲಬುರಗಿ ಮತ್ತು ದೇವದುರ್ಗ ಸಂಪರ್ಕ ಕಲ್ಪಿಸುವ ಹುವಿನಹಡಗಿ ಸೇತುವೆಯ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದರಿಂದ ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ.

ನದಿಗೆ ಇನ್ನಷ್ಟು ನೀರು ಹರಿದು ಬರುವ ಸಾಧ್ಯತೆ ಇದ್ದು, ಜಿಲ್ಲೆಯ ಲಿಂಗಸುಗೂರು, ದೇವದುರ್ಗ, ರಾಯಚೂರು ಗ್ರಾಮೀಣ ಭಾಗದ ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಳುಗಡೆಯಾದ ಹುವಿನಹಡಗಿ ಸೇತುವೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ ನಡೆಸಿದರು.

Intro:ರಾಯಚೂರು.ಆ.4

ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ. ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ 2.71 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು ದೇವದುರ್ಗ ತಾಲೂಕಿನ ಹುವಿನಹಡಗಿ ಬ್ರಿಜ್ ಸಂಪೂರ್ಣ ಮುಳುಗಡೆ ಯಾಗಿದೆ.
ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಯಾಗುವ ಸಂಭವದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕಲಬುರಗಿ- ದೇವದುರ್ಗಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಬಂದ್ ಮಾಡಲಾಗಿದೆ.Body:ಅದೇ ರೀತಿ ರಾತ್ರಿ ವೇಳೆ ಇನ್ನಷ್ಟು ನೀರು ಕೃಷ್ಣಾ ನದಿಗೆ ಬಿಡುಗಡೆ ಸಾಧ್ಯತೆ ಯಿದ್ದು ಜಿಲ್ಲೆಯ ಲಿಂಗಸುಗೂರು, ದೇವದುರ್ಗ, ರಾಯಚೂರು ಗ್ರಾಮೀಣ ಭಾಗದ ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೇ ದೇವದುರ್ಗ ತಾಲೂಕಿನ ಹುವಿನಹಡಗಿ ಬ್ರಿಜ್ ಗೆ ಡಿಸಿ ಮತ್ತು ಎಸಿ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾತ್ರಿ ವೇಳೆಗೆ ಕೃಷ್ಣಾ ನದಿಗೆ ಇನ್ನಷ್ಟು ನೀರು ಹೆಚ್ಚಳ ಸಾಧ್ಯತೆಯಿದ್ದು ಈ ಪ್ರದೇಶದ ಜನರನ್ನು ಸಂಕಷ್ಟ ಎದುರಾಗಿದೆ.ತುರ್ತು ಕಾರ್ಯವನ್ನು ಜಿಲ್ಲಾಡಳಿತ ಕೈಗೊಂಡಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.