ETV Bharat / state

ಮಲ್ಲಿಕಾರ್ಜುನ ಬೆಟ್ಟದ ನಿಷೇಧಿತ ಪ್ರದೇಶದಲ್ಲಿ ಅಕ್ರಮ ರಸ್ತೆ ನಿರ್ಮಾಣ.. - ಮಲ್ಲಿಕಾರ್ಜುನ ಬೆಟ್ಟ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನವಿರುವ ಶಾಸನದ ಪಕ್ಕದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಒಂದು ಕಿಲೋ ಮೀಟರ್‌ವರೆಗೆ ರಸ್ತೆ ನಿರ್ಮಾಣ ಮಾಡುವ ಮೂಲಕ ವಿಶ್ವವಿಖ್ಯಾತಿಯ ಬೆಟ್ಟಕ್ಕೆ ದುಷ್ಕರ್ಮಿಗಳು ಕನ್ನ ಹಾಕುವ ಯತ್ನ ನಡೆಸಿದ್ದಾರೆ.

ಮಲ್ಲಿಕಾರ್ಜುನ ಬೆಟ್ಟದ ನಿಷೇಧಿತ ಪ್ರದೇಶದಲ್ಲಿ ಅಕ್ರಮ ರಸ್ತೆ ನಿರ್ಮಾಣ
author img

By

Published : Aug 24, 2019, 12:16 PM IST

ರಾಯಚೂರು: ಇತಿಹಾಸ ಪ್ರಸಿದ್ದ ರಾಯಚೂರು ಜಿಲ್ಲೆಯ ಮಲ್ಲಿಕಾರ್ಜುನ ಬೆಟ್ಟದ ನಿಷೇಧಿತ ಪ್ರದೇಶದಲ್ಲಿ ಅಕ್ರಮ ರಸ್ತೆ ನಿರ್ಮಾಣ ಪ್ರಕರಣ ಬೆಳಕಿಗೆ ಬಂದಿದೆ.

ಮಲ್ಲಿಕಾರ್ಜುನ ಬೆಟ್ಟದ ನಿಷೇಧಿತ ಪ್ರದೇಶದಲ್ಲಿ ಅಕ್ರಮ ರಸ್ತೆ ನಿರ್ಮಾಣ..

ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನವಿರುವ ಶಾಸನದ ಪಕ್ಕದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಒಂದು ಕಿಲೋಮೀಟರ್‌ವರೆಗೆ ರಸ್ತೆ ನಿರ್ಮಾಣ ಮಾಡುವ ಮೂಲಕ ವಿಶ್ವವಿಖ್ಯಾತಿಯ ಬೆಟ್ಟಕ್ಕೆ ದುಷ್ಕರ್ಮಿಗಳು ಕನ್ನ ಹಾಕುವ ಯತ್ನ ನಡೆಸಿದ್ದಾರೆ. ಇಲ್ಲಿ ಅಶೋಕ ಚಕ್ರವರ್ತಿ ದೇವನಂ ಪ್ರಿಯ ಎನ್ನುವ ಅಶೋಕ ಶಾಸನವಿದ್ದು, ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಗೆ ಬರುವ ಬೆಟ್ಟದಲ್ಲಿ ಯಾವುದೇ ಚಟುವಟಿಕೆ ನಡೆಸುವುದಕ್ಕೆ ಅವಕಾಶವಿಲ್ಲ. ಒಂದು ವೇಳೆ ಯಾವುದೇ ಚಟುವಟಿಕೆ ನಡೆಸಿದ್ರೆ ಕಾನೂನು ಬಾಹಿರವಾಗುತ್ತದೆ.

ಈ ಕುರಿತಂತೆ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ, ರಸ್ತೆ ನಿರ್ಮಾಣಕ್ಕೆ ಬಳಸುತ್ತಿದ್ದ ಹಿಟಾಚಿ ಹಾಗೂ ಅದರ ಡ್ರೈವರ್‌ನ ವಶಕ್ಕೆ ಪಡೆದು ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಈ ಕುರಿತಂತೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತಿಹಾಸ ಪ್ರಸಿದ್ಧಿ ಹೊಂದಿರುವ ಇಂತಹ ಸ್ಥಳದಲ್ಲಿ 1 ಕಿ.ಮೀವರೆಗೂ ರಸ್ತೆ ನಿರ್ಮಾಣ ಮಾಡುತ್ತಿರುವುದು ಎಂದರೆ ಭದ್ರತೆಯ ಕೊರತೆ ಮೇಲ್ನೂಟಕ್ಕೆ ಕಂಡು ಬಂದಿದ್ದು, ಸೂಕ್ತ ಭದ್ರತೆ ವಹಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಸೆಯಾಗಿದೆ.

ರಾಯಚೂರು: ಇತಿಹಾಸ ಪ್ರಸಿದ್ದ ರಾಯಚೂರು ಜಿಲ್ಲೆಯ ಮಲ್ಲಿಕಾರ್ಜುನ ಬೆಟ್ಟದ ನಿಷೇಧಿತ ಪ್ರದೇಶದಲ್ಲಿ ಅಕ್ರಮ ರಸ್ತೆ ನಿರ್ಮಾಣ ಪ್ರಕರಣ ಬೆಳಕಿಗೆ ಬಂದಿದೆ.

ಮಲ್ಲಿಕಾರ್ಜುನ ಬೆಟ್ಟದ ನಿಷೇಧಿತ ಪ್ರದೇಶದಲ್ಲಿ ಅಕ್ರಮ ರಸ್ತೆ ನಿರ್ಮಾಣ..

ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನವಿರುವ ಶಾಸನದ ಪಕ್ಕದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಒಂದು ಕಿಲೋಮೀಟರ್‌ವರೆಗೆ ರಸ್ತೆ ನಿರ್ಮಾಣ ಮಾಡುವ ಮೂಲಕ ವಿಶ್ವವಿಖ್ಯಾತಿಯ ಬೆಟ್ಟಕ್ಕೆ ದುಷ್ಕರ್ಮಿಗಳು ಕನ್ನ ಹಾಕುವ ಯತ್ನ ನಡೆಸಿದ್ದಾರೆ. ಇಲ್ಲಿ ಅಶೋಕ ಚಕ್ರವರ್ತಿ ದೇವನಂ ಪ್ರಿಯ ಎನ್ನುವ ಅಶೋಕ ಶಾಸನವಿದ್ದು, ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಗೆ ಬರುವ ಬೆಟ್ಟದಲ್ಲಿ ಯಾವುದೇ ಚಟುವಟಿಕೆ ನಡೆಸುವುದಕ್ಕೆ ಅವಕಾಶವಿಲ್ಲ. ಒಂದು ವೇಳೆ ಯಾವುದೇ ಚಟುವಟಿಕೆ ನಡೆಸಿದ್ರೆ ಕಾನೂನು ಬಾಹಿರವಾಗುತ್ತದೆ.

ಈ ಕುರಿತಂತೆ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ, ರಸ್ತೆ ನಿರ್ಮಾಣಕ್ಕೆ ಬಳಸುತ್ತಿದ್ದ ಹಿಟಾಚಿ ಹಾಗೂ ಅದರ ಡ್ರೈವರ್‌ನ ವಶಕ್ಕೆ ಪಡೆದು ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಈ ಕುರಿತಂತೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತಿಹಾಸ ಪ್ರಸಿದ್ಧಿ ಹೊಂದಿರುವ ಇಂತಹ ಸ್ಥಳದಲ್ಲಿ 1 ಕಿ.ಮೀವರೆಗೂ ರಸ್ತೆ ನಿರ್ಮಾಣ ಮಾಡುತ್ತಿರುವುದು ಎಂದರೆ ಭದ್ರತೆಯ ಕೊರತೆ ಮೇಲ್ನೂಟಕ್ಕೆ ಕಂಡು ಬಂದಿದ್ದು, ಸೂಕ್ತ ಭದ್ರತೆ ವಹಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಸೆಯಾಗಿದೆ.

Intro:ಸ್ಲಗ್: ಅಶೋಕ ಶಿಲಾಶಾಸನವಿರುವ ಬೆಟ್ಟಕ್ಕೆ ಅಕ್ರಮ ಚಟುವಟಿಕೆ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 24-೦8-2019
ಸ್ಥಳ: ರಾಯಚೂರು
ಆಂಕರ್: ಇತಿಹಾಸ ಪ್ರಸಿದ್ದ ರಾಯಚೂರು ಜಿಲ್ಲೆಯ ಮಲ್ಲಿಕಾರ್ಜುನ ಬೆಟ್ಟದ ನಿಷೇಧಿತ ಪ್ರದೇಶದಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಪ್ರಕರಣ ಬೆಳಕಿಗೆ ಬಂದಿದೆ. Body:ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನವಿರುವ ಶಾಸನ ಪಕ್ಕದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಒಂದು ಕಿಲೋ ಮೀಟರ್ ವರೆಗೆ ರಸ್ತೆ ನಿರ್ಮಾಣ ಮಾಡುವ ಮೂಲಕ ವಿಶ್ವವಿಖ್ಯಾತಿಯ ಬೆಟ್ಟಕ್ಕೆ ದುಷ್ಕರ್ಮಿಗಳು ಕನ್ನ ಹಾಕಲು ಯತ್ನ ನಡೆಸಿದ್ದಾರೆ. ಅಶೋಕ ಚಕ್ರವರ್ತಿ ದೇವನಂ ಪ್ರಿಯ ಎನ್ನುವ ಅಶೋಕ ಶಾಸನವಿದ್ದು, ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಗೆ ಬರುವ ಬೆಟ್ಟದಲ್ಲಿ ಯಾವುದೇ ಚಟುವಟಿಕೆ ನಡೆಸುವುದಕ್ಕೆ ಅವಕಾಶವಿಲ್ಲ. ಒಂದು ವೇಳೆ ಯಾವುದೇ ಚಟುವಟಿಕೆ ನಡೆದಿಸಿದ್ರೆ ಕಾನೂನು ಬಾಹಿರವಾಗುತ್ತದೆ. ಮಲ್ಲಿಕಾರ್ಜುನ ಬೆಟ್ಟದಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಕುರಿತಂತೆ ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ, ರಸ್ತೆ ಮಾಡುತ್ತಿದ್ದ ಹಿಟಾಚಿ ಹಾಗೂ ಅದರ ಡ್ರೈವರ್ ನ್ನು ವಶಕ್ಕೆ ಪಡೆದು, ಪೊಲೀಸ್ ರಿಗೆ ಒಪ್ಪಿಸಿ, ತನಿಖೆ ನಡೆಸುವಂತೆ ಪೊಲೀಸ್ ರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. Conclusion:ಇತಿಹಾಸ ಪ್ರಸಿದ್ದ ಹೊಂದಿರುವ ಇಂತಹ ಸ್ಥಳದಲ್ಲಿ 1 ಕಿ.ಮೀ.ವರೆಗೂ ರಸ್ತೆ ನಿರ್ಮಾಣ ಮಾಡುತ್ತಿರುವುದು ಭದ್ರತೆ ವಹಿಸುವಲ್ಲಿ ವಿಫಲವಾಗಿರುವುದು ಮೇಲ್ನೂಟಕ್ಕೆ ಕಂಡು ಬಂದಿದ್ದು, ಸೂಕ್ತ ಭದ್ರತೆ ವಹಿಸಬೇಕು ಎನ್ನುವುದು ಪ್ರಜ್ಞಾನವಂತರ ಒತ್ತಾಸೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.