ETV Bharat / state

ರಾಜ್ಯದ ನೆರೆ ಪರಿಹಾರಕ್ಕೆ ಇನ್ನಷ್ಟು ನೆರವು ನೀಡಲು ಆಗ್ರಹ

author img

By

Published : Aug 22, 2019, 8:52 AM IST

ರಾಜ್ಯದಲ್ಲಿ ಈ ಬಾರಿ ಬಂದಿರುವ ಭಾರೀ ಮಳೆಗೆ ಕೇಂದ್ರ ಸರ್ಕಾರ ಇನ್ನಷ್ಟು ನೆರವು ನೀಡಬೇಕು ಎಂದು ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್ ಹೇಳಿದ್ದಾರೆ.

ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್ ಮಾತನಾಡಿದರು.

ರಾಯಚೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿಯಿಂದಾಗಿ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದು, ಅಪಾರ ಪ್ರಮಾಣದ ಆಸ್ತಿ ನಾಶವಾಗಿದೆ. ಜನ-ಜಾನುವಾರುಗಳು ತತ್ತರಿಸುವಂತಾಗಿದೆ. ರಾಜ್ಯ ಸರ್ಕಾರ ಹಾನಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಇಷ್ಟು ಮಾತ್ರವಲ್ಲದೆ ಅಗತ್ಯ ನೆರವು ಕೋರಬೇಕು ಎಂದು ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್ ಹೇಳಿದರು.

ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್

ನಿರಂತರ ಬರದಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಈ ಬಾರಿಯ ಮಹಾಮಳೆ ಇಲ್ಲಿನ ಆಸ್ತಿ ಪಾಸ್ತಿ ನಾಶಗೊಳಿಸಿ ಸಂಕಷ್ಟಕ್ಕೆ ದೂಡಿದೆ. ಆದರೆ ಕೇಂದ್ರ ಸರ್ಕಾರ ಸಮೀಕ್ಷೆ ಮಾಡಿ ಅನುದಾನ ನೀಡಬೇಕಾಗಿತ್ತು. ಅದನ್ನು ಮಾಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ಕೇಂದ್ರ ಸಚಿವರಾದ ರಾಜ್ಯದ ಇಬ್ಬರು ಮಂತ್ರಿಗಳು ಕೇಂದ್ರದ ಮೇಲೆ ಒತ್ತಡ ಹೇರಬೇಕು ಹಾಗೂ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಲು ಒತ್ತಡ ಹೇರಬೇಕು. ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಕೂಡಲೇ ರಾಜ್ಯದ ಹಾನಿಯ ಕುರಿತು ಸಮೀಕ್ಷೆ ನಡೆಸಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿರುವುದು ಸರಿಯಲ್ಲ. ಕಾರ್ಮಿಕ ವಿರೋಧಿ ನೀತಿಯನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರಾಯಚೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿಯಿಂದಾಗಿ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದು, ಅಪಾರ ಪ್ರಮಾಣದ ಆಸ್ತಿ ನಾಶವಾಗಿದೆ. ಜನ-ಜಾನುವಾರುಗಳು ತತ್ತರಿಸುವಂತಾಗಿದೆ. ರಾಜ್ಯ ಸರ್ಕಾರ ಹಾನಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಇಷ್ಟು ಮಾತ್ರವಲ್ಲದೆ ಅಗತ್ಯ ನೆರವು ಕೋರಬೇಕು ಎಂದು ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್ ಹೇಳಿದರು.

ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್

ನಿರಂತರ ಬರದಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಈ ಬಾರಿಯ ಮಹಾಮಳೆ ಇಲ್ಲಿನ ಆಸ್ತಿ ಪಾಸ್ತಿ ನಾಶಗೊಳಿಸಿ ಸಂಕಷ್ಟಕ್ಕೆ ದೂಡಿದೆ. ಆದರೆ ಕೇಂದ್ರ ಸರ್ಕಾರ ಸಮೀಕ್ಷೆ ಮಾಡಿ ಅನುದಾನ ನೀಡಬೇಕಾಗಿತ್ತು. ಅದನ್ನು ಮಾಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ಕೇಂದ್ರ ಸಚಿವರಾದ ರಾಜ್ಯದ ಇಬ್ಬರು ಮಂತ್ರಿಗಳು ಕೇಂದ್ರದ ಮೇಲೆ ಒತ್ತಡ ಹೇರಬೇಕು ಹಾಗೂ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಲು ಒತ್ತಡ ಹೇರಬೇಕು. ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಕೂಡಲೇ ರಾಜ್ಯದ ಹಾನಿಯ ಕುರಿತು ಸಮೀಕ್ಷೆ ನಡೆಸಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿರುವುದು ಸರಿಯಲ್ಲ. ಕಾರ್ಮಿಕ ವಿರೋಧಿ ನೀತಿಯನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

Intro:ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿಯಿಂದಾಗಿ ಸಾಕಷ್ಟು ಸಂತ್ರಸ್ತರು ತಂದರೆ ಸಿಲುಕಿದ್ದು ಅಪಾರ ಪ್ರಮಾಣದ ಆಸ್ತಿ ನಾಶವಾಗಿತ್ತು ಜನ-ಜಾನುವಾರುಗಳು ತತ್ತರಿಸುವಂತಾಗಿದೆ ರಾಜ್ಯ ಸರ್ಕಾರ ಹಾನಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಇಷ್ಡು ಮಾತ್ರವಲ್ಲದೆ ರಿಂದ ಅಗತ್ಯ ನೆರವು ಕೋರಬೇಕು ಎಂದು ಎಐಟಿಯುಸಿ ರಾಜ್ಯ ಮುಖಂಡ ಭಾಸ್ಕರ್ ತಿಳಿಸಿದರು.


Body:ಅವರಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ನಿರಂತರ ಬರದಿಂದ ತತ್ತರಿಸಿರುವ ರಾಜ್ಯದ ಜನರಿಗೆ ರಾಷ್ಟ್ರದಲ್ಲಿ ಉಂಟಾಗಿರುವ ಮಹಾಮಳೆ ಇಲ್ಲಿನ ಆಸ್ತಿಪಾಸ್ತಿಯನ್ನು ನಾಶಗೊಳಿಸಿ ಸಂಕಷ್ಟಕ್ಕೆ ದೂಡಿದೆ ಆದರೆ ಕೇಂದ್ರ ಸರ್ಕಾರ ಸಮೀಕ್ಷೆ ಮಾಡಿ ಅನುದಾನ ನೀಡಬೇಕಾಗಿತ್ತು ಅದನ್ನು ಮಾಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.
ಕೇಂದ್ರ ಸಚಿವರಾದ ರಾಜ್ಯದ ಇಬ್ಬರು ಮಂತ್ರಿಗಳು ಕೇಂದ್ರದ ಮೇಲೆ ಒತ್ತಡ ಹೇರಬೇಕು ಹಾಗೂ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಲು ಒತ್ತಡ ಹೇರಬೇಕು.ಕೇಂದ್ರ ದಕ್ಷಿಣ ಭಾರತದ ರಾಜ್ಯಗಳನ್ನು ಕಡೆಗಣಿಸುತಿದ್ದು ಸರಿಯಲ್ಲ ಕೂಡಲೇ ರಾಜ್ಯದ ಹಾನಿಯ ಕುರಿತು ಸಮೀಕ್ಷೆ ನಡೆಸಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಖೆಂದರು.
ಬಿಜೆಪಿ ಸರಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದ್ದು ಸರಿಯಲ್ಲ ಕಾರ್ಮಿಕ ವಿರೋಧಿ ನೀತಿಯನ್ನು ಹಿಂಪಡೆಯಬೇಕು ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಇಳಿಯಲಾಗುವುದು ಎಂದು ಎಚ್ಚರಿಸಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.