ರಾಯಚೂರು/ಮಂತ್ರಾಲಯ: ಕಾರ್ತಿಕ ಪೂರ್ಣಿಮಾ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದಿಂದ ತುಂಗಾರತಿ ಹಾಗೂ ತೆಪ್ಪೋತ್ಸವವನ್ನು ಅದ್ಧೂರಿಯಾಗಿ ನೇರವೇರಿಸಲಾಯಿತು.
ಶ್ರೀಮಠದ ವಿಧಿ-ವಿಧಾನದಂತೆ ಧಾರ್ಮಿಕ ಕಾರ್ಯಕ್ರಮಗಳನ್ನ ನೇರವೇರಿಸಿ, ಶ್ರೀಮಠದಿಂದ ತುಂಗಭದ್ರಾ ನದಿಯವರೆಗೆ ಶ್ರೀಪ್ರಹ್ಲಾದ್ ರಾಜ್ ಉತ್ಸವ ಮೂರ್ತಿಯ ಅಲಂಕರಿಸಿದ ಪಲ್ಲಕ್ಕಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಯಿತು. ಬಳಿಕ ತುಂಗಭದ್ರಾ ನದಿಗೆ ಆರತಿ ನೇರವೇರಿಸಿ, ತೆಪ್ಪೋತ್ಸವ ವಿಜೃಂಭಣೆಯಿಂದ ಭಕ್ತರ ಸಮ್ಮುಖದಲ್ಲಿ ಜರುಗಿತು.
ಓದಿ:ರಾಯಚೂರು ಜಿಲ್ಲೆಯಲ್ಲಿ ಹೆಚ್ಐವಿ ತಪಾಸಣೆ ಇಳಿಮುಖ: ಏಡ್ಸ್ ಪೀಡಿತರಿಗೆ ಶಾಪವಾದ ಕೊರೊನಾ
ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆರೆದ ಭಕ್ತ ಸಮೂಹಕ್ಕೆ ಅನುಗ್ರಹ ಸಂದೇಶ ನೀಡುವ ಮೂಲಕ ಆರ್ಶೀವದಿಸಿದರು.