ETV Bharat / state

ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ನೇಮಕ ಅನರ್ಹ: ಸೂಕ್ತ ಕ್ರಮಕ್ಕೆ ಕೆಎಟಿ‌ ಆದೇಶ

author img

By

Published : Jul 8, 2022, 11:48 AM IST

ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಗೆ ನೂರ್ ಜಹರಾ ಖಾನಂ ಅವರನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಜಿ.ಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಕೆಎಟಿಗೆ ಅರ್ಜಿ ಸಲ್ಲಿಸಿದ್ದರು.

ನೂರ್ ಜಹರಾ ಖಾನಂ
ನೂರ್ ಜಹರಾ ಖಾನಂ

ರಾಯಚೂರು: ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ(ಸಿಇಒ) ಹುದ್ದೆಗೆ ನಿಯಮ ಉಲ್ಲಂಘಿಸಿ ನೂರ್ ಜಹರಾ​ ಖಾನಂ ವರ್ಗಾವಣೆ ಮಾಡಲಾಗಿದೆ ಎಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಪೀಠ ಹೇಳಿದೆ. ನೂರ್ ಜಹರಾ ಖಾನಂ ಕೆಎಎಸ್‌ ಅಧಿಕಾರಿಯಾಗಿದ್ದರೂ ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕ ಮಾಡಲಾಗಿತ್ತು. ಐಎಎಸ್ ಕೇಡರ್​​ನ ಜಿ.ಪಂ ಸಿಇಒ ಹುದ್ದೆಗೆ ಕೆಎಎಸ್‌ ಅಧಿಕಾರಿಯನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಜಿ.ಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಕೆಎಟಿ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೆಎಟಿ,‌ ವರ್ಗಾವಣೆ ನಿಯಮ ಉಲ್ಲಂಘನೆಯಾಗಿದೆ ಎಂದು ಮಂಗಳವಾರ ತಿಳಿಸುವ ಮೂಲಕ ಸೂಕ್ತ ಕ್ರಮಕ್ಕೆ‌ ಆದೇಶಿಸಿದೆ.

ರಾಯಚೂರು: ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ(ಸಿಇಒ) ಹುದ್ದೆಗೆ ನಿಯಮ ಉಲ್ಲಂಘಿಸಿ ನೂರ್ ಜಹರಾ​ ಖಾನಂ ವರ್ಗಾವಣೆ ಮಾಡಲಾಗಿದೆ ಎಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಪೀಠ ಹೇಳಿದೆ. ನೂರ್ ಜಹರಾ ಖಾನಂ ಕೆಎಎಸ್‌ ಅಧಿಕಾರಿಯಾಗಿದ್ದರೂ ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕ ಮಾಡಲಾಗಿತ್ತು. ಐಎಎಸ್ ಕೇಡರ್​​ನ ಜಿ.ಪಂ ಸಿಇಒ ಹುದ್ದೆಗೆ ಕೆಎಎಸ್‌ ಅಧಿಕಾರಿಯನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಜಿ.ಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಕೆಎಟಿ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೆಎಟಿ,‌ ವರ್ಗಾವಣೆ ನಿಯಮ ಉಲ್ಲಂಘನೆಯಾಗಿದೆ ಎಂದು ಮಂಗಳವಾರ ತಿಳಿಸುವ ಮೂಲಕ ಸೂಕ್ತ ಕ್ರಮಕ್ಕೆ‌ ಆದೇಶಿಸಿದೆ.

ಇದನ್ನೂ ಓದಿ: ಮನಃಶಾಸ್ತ್ರ ಪ್ರಾಧ್ಯಾಪಕ ಹುದ್ದೆಗಳನ್ನು ಪರಿವರ್ತಿಸಿದ ಸರ್ಕಾರ: ತಡೆಯಾಜ್ಞೆ ನೀಡಿದ ಕೆಎಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.