ರಾಯಚೂರು : ಬೃಹತ್ ಶಾಖೋತ್ಪನ್ನ ಕೇಂದ್ರದಲ್ಲಿ ಆಯತಪ್ಪಿ ಬಿದ್ದ ಪರಿಣಾಮ ಮೂವರು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಶಕ್ತಿನಗರದಲ್ಲಿರುವ ಆರ್ಟಿಪಿಎಸ್ ನಲ್ಲಿ ಕಲ್ಲಿದ್ದಲು ಬಂಕರ್ ಮೇಲೆ ಸ್ಕ್ರ್ಯಾಪ್ ನ್ನು ಕಟ್ ಮಾಡುವ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬಿಹಾರ ಮೂಲದ ಸೋನು ಕುಮಾರ್ ಪಾಸ್, ರಾಮ್ಪ್ರೀತ್, ಮಹಾದೇವ ಎಂಬವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮಹಾದೇವ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಆರ್ಟಿಪಿಎಸ್ನ ಒಂದು ಘಟಕದ ಬಂಕರ್ ಮೇಲೆ ಕಾರ್ಮಿಕರು ಸ್ಕ್ರ್ಯಾಪ್ ಕಟ್ ಮಾಡುತ್ತಿದ್ದರು. ಈ ವೇಳೆ ಕಾರ್ಮಿಕರು ಆಯತಪ್ಪಿ ಬಿದ್ದಿರುವುದಾಗಿ ತಿಳಿದುಬಂದಿದೆ. ಇನ್ನು ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಆರ್ ಟಿಪಿಎಸ್ ಇಡಿ ದಿವಾಕರ್, ಕಾರ್ಖಾನೆಯಲ್ಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಕಾಲು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳು ಆಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಪ್ರಕರಣ ಬೆಳಕಿಗೆ ಬಂದ 9 ತಿಂಗಳ ಬಳಿಕ ಚಾರ್ಮಾಡಿ ಘಾಟ್ನಲ್ಲಿ ಪೊಲೀಸರಿಂದ ಶವ ಹುಡುಕಾಟ