ರಾಯಚೂರು: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟರೆ, ಬಾಲಕಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಿ-ಕೋಳೂರು ಗ್ರಾಮದ ಮಧ್ಯ ಬರುವ ಹೊಲದಲ್ಲಿ ವಿಷ ಸೇವಿಸಿದ್ದಾರೆ. ಜಾಗೀರ ವೆಂಕಟಾಪುರ ಗ್ರಾಮದ 20 ವರ್ಷದ ಯುವಕ ಹಾಗೂ ಕೋಳೂರು ಗ್ರಾಮದ 16 ವರ್ಷದ ಬಾಲಕಿ ವಿಷ ಸೇವಿಸಿದವರು.
ಇದನ್ನೂ ಓದಿ: ಮಣ್ಣು ತೆಗೆಯುವಾಗ ಗುಡ್ಡ ಕುಸಿದು ಇಬ್ಬರು ಯುವಕರ ದುರ್ಮರಣ
ಬಾಲಕಿ ಚಿಂತಾಜನಕ ಸ್ಥಿತಿಯಲ್ಲಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಯುವಕ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಗಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇಬ್ಬರು ಪ್ರೇಮಿಗಳು ವರಸೆಯಲ್ಲಿ ಅಣ್ಣ-ತಂಗಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ.