ETV Bharat / state

ವರಸೆಯಲ್ಲಿ ಅಣ್ಣ-ತಂಗಿ.! ಜಿಗುಪ್ಸೆಗೊಂಡು ಆತ್ಮಹತ್ಯೆ ಯತ್ನ: ಯುವಕ ಸಾವು, ಬಾಲಕಿ ಸ್ಥಿತಿ ಚಿಂತಾಜನಕ

ರಾಯಚೂರಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಜಾಗೀರ ವೆಂಕಟಾಪುರ ಗ್ರಾಮದ 20 ವರ್ಷದ ಯುವಕ ಮೃತಪಟ್ಟಿದ್ದು, 16 ವರ್ಷದ ಬಾಲಕಿ ಚಿಂತಾಜನಕ ಸ್ಥಿತಿಯಲ್ಲಿದ್ದಾಳೆ.

author img

By

Published : Mar 1, 2021, 2:03 PM IST

Updated : Mar 1, 2021, 7:50 PM IST

ರಾಯಚೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಸುದ್ದಿ  Lovers suicide in Raichuru
ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.?

ರಾಯಚೂರು: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟರೆ, ಬಾಲಕಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಿ-ಕೋಳೂರು ಗ್ರಾಮದ ಮಧ್ಯ ಬರುವ ಹೊಲದಲ್ಲಿ ವಿಷ ಸೇವಿಸಿದ್ದಾರೆ. ಜಾಗೀರ ವೆಂಕಟಾಪುರ ಗ್ರಾಮದ 20 ವರ್ಷದ ಯುವಕ ಹಾಗೂ ಕೋಳೂರು ಗ್ರಾಮದ 16 ವರ್ಷದ ಬಾಲಕಿ ವಿಷ ಸೇವಿಸಿದವರು.

ಇದನ್ನೂ ಓದಿ: ಮಣ್ಣು ತೆಗೆಯುವಾಗ ಗುಡ್ಡ ಕುಸಿದು ಇಬ್ಬರು ಯುವಕರ ದುರ್ಮರಣ

ಬಾಲಕಿ ಚಿಂತಾಜನಕ ಸ್ಥಿತಿಯಲ್ಲಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಯುವಕ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಗಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ಪ್ರೇಮಿಗಳು ವರಸೆಯಲ್ಲಿ ಅಣ್ಣ-ತಂಗಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ.

ರಾಯಚೂರು: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟರೆ, ಬಾಲಕಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಿ-ಕೋಳೂರು ಗ್ರಾಮದ ಮಧ್ಯ ಬರುವ ಹೊಲದಲ್ಲಿ ವಿಷ ಸೇವಿಸಿದ್ದಾರೆ. ಜಾಗೀರ ವೆಂಕಟಾಪುರ ಗ್ರಾಮದ 20 ವರ್ಷದ ಯುವಕ ಹಾಗೂ ಕೋಳೂರು ಗ್ರಾಮದ 16 ವರ್ಷದ ಬಾಲಕಿ ವಿಷ ಸೇವಿಸಿದವರು.

ಇದನ್ನೂ ಓದಿ: ಮಣ್ಣು ತೆಗೆಯುವಾಗ ಗುಡ್ಡ ಕುಸಿದು ಇಬ್ಬರು ಯುವಕರ ದುರ್ಮರಣ

ಬಾಲಕಿ ಚಿಂತಾಜನಕ ಸ್ಥಿತಿಯಲ್ಲಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಯುವಕ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಗಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ಪ್ರೇಮಿಗಳು ವರಸೆಯಲ್ಲಿ ಅಣ್ಣ-ತಂಗಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ.

Last Updated : Mar 1, 2021, 7:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.