ETV Bharat / state

ಮಸ್ಕಿ ಬೈ ಎಲೆಕ್ಷನ್: ಬಹಿರಂಗ ಪ್ರಚಾರಕ್ಕೆ ತೆರೆ, ಇಂದು ಮನೆ ಮನೆ ಕ್ಯಾಂಪೇನ್

author img

By

Published : Apr 16, 2021, 7:17 AM IST

Updated : Apr 16, 2021, 7:35 AM IST

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕಿತ 18 ಜನರ ವರದಿ ಬರಬೇಕಾಗಿದೆ. ಪ್ರಾಥಮಿಕ ಸಂಪರ್ಕಿತರು ಸಂಜೆ 6 ರಿಂದ 7 ಕ್ಕೆ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

ಮಸ್ಕಿ ವಿಧಾನಸಭಾ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ
ಮಸ್ಕಿ ವಿಧಾನಸಭಾ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆಗೆ ಬಹಿರಂಗ ಪ್ರಚಾರ ಏಪ್ರಿಲ್ 15ರಂದು ಮುಕ್ತಾಯವಾಗಿದೆ. ಇನ್ನು ಕೋವಿಡ್ ನಿಯಮಗಳ ಪ್ರಕಾರ ಮನೆ ಮನೆ ಪ್ರಚಾರ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಹೇಳಿದ್ದಾರೆ.

ಮಸ್ಕಿ ವಿಧಾನಸಭಾ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.15 ಸಂಜೆ 7 ಗಂಟೆಯ ಬಳಿಕ ಕ್ಷೇತ್ರದವರಲ್ಲದವರು ಕ್ಷೇತ್ರ ಬಿಟ್ಟು ಹೋಗಬೇಕು. ಚುನಾವಣೆ ನೀತಿ ಸಂಹಿತೆ ಜಾರಿ ಬಳಿಕ ಇದುವರೆಗೆ 60 ದೂರು ದಾಖಲಾಗಿವೆ. 46 ಕೋವಿಡ್ ಪ್ರಕರಣ, 14 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಾಗಿವೆ. ಇದರಲ್ಲಿ 7 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದುವರೆಗೆ 3.50 ಲಕ್ಷ ಮೌಲ್ಯದ ವಸ್ತು ಹಾಗೂ 1.33 ಲಕ್ಷ ಮೌಲ್ಯದ 355 ಲೀ. ಮದ್ಯ ಜಪ್ತಿ ಮಾಡಲಾಗಿದೆ. ಕೋವಿಡ್ ಸೋಂಕಿತರು ಮತ್ತು ಸಂಪರ್ಕಿತರು ಸಂಜೆ 6 ರಿಂದ 7 ಗಂಟೆ ವರೆಗೆ ಮತದಾನ ಮಾಡಲು ಸಮಯ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಸೋಂಕು ಬಾಧಿಸಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕಿತ 18 ಜನರ ವರದಿ ಇನ್ನಷ್ಟೇ ಬರಬೇಕಾಗಿದೆ. ಪ್ರಾಥಮಿಕ ಸಂಪರ್ಕಿತರು ಸಂಜೆ 6 ರಿಂದ 7 ಕ್ಕೆ ಮತದಾನ ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್ ಮಾತನಾಡಿ, ಕ್ಷೇತ್ರದಲ್ಲಿ ಒಟ್ಟು 62 ಸೂಕ್ಷ್ಮ, 07 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ 739 ಪೊಲೀಸ್ ಕಾನ್​​ಸ್ಟೇಬಲ್​, 71 ಎಎಸ್​​ಐ, 25 ಪಿಎಸ್​​ಐ, 07 ಸಿಪಿಐ, 03 ಡಿಎಸ್​ಪಿ, 1 ಸಿಆರ್​ಪಿಎಫ್​​ ಮತ್ತು ಒಂದು ಕೆಎಸ್​​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಇದುವರೆಗೂ 7 ಐಪಿಸಿ ಪ್ರಕರಣ ದಾಖಲಾಗಿದ್ದು, 18 ಜನರನ್ನು ಬಂಧಿಸಲಾಗಿದೆ. ಹಣ ಹಂಚಿಕೆ ವೈರಲ್ ಆದ ಬಗ್ಗೆ ವಿಡಿಯೋದಲ್ಲಿ ಕಂಡು ಬಂದ ಎಲ್ಲ ವ್ಯಕ್ತಿಗಳನ್ನು ಬಂಧಿಸಲಾಗಿದೆ‌ ಎಂದು ತಿಳಿಸಿದರು.

ಇದನ್ನೂ ಓದಿ : ಉಪಚುನಾವಣೆ ಮತದಾನದ ಬಳಿಕ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದೆ ಕಾಂಗ್ರೆಸ್!

ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆಗೆ ಬಹಿರಂಗ ಪ್ರಚಾರ ಏಪ್ರಿಲ್ 15ರಂದು ಮುಕ್ತಾಯವಾಗಿದೆ. ಇನ್ನು ಕೋವಿಡ್ ನಿಯಮಗಳ ಪ್ರಕಾರ ಮನೆ ಮನೆ ಪ್ರಚಾರ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಹೇಳಿದ್ದಾರೆ.

ಮಸ್ಕಿ ವಿಧಾನಸಭಾ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.15 ಸಂಜೆ 7 ಗಂಟೆಯ ಬಳಿಕ ಕ್ಷೇತ್ರದವರಲ್ಲದವರು ಕ್ಷೇತ್ರ ಬಿಟ್ಟು ಹೋಗಬೇಕು. ಚುನಾವಣೆ ನೀತಿ ಸಂಹಿತೆ ಜಾರಿ ಬಳಿಕ ಇದುವರೆಗೆ 60 ದೂರು ದಾಖಲಾಗಿವೆ. 46 ಕೋವಿಡ್ ಪ್ರಕರಣ, 14 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಾಗಿವೆ. ಇದರಲ್ಲಿ 7 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದುವರೆಗೆ 3.50 ಲಕ್ಷ ಮೌಲ್ಯದ ವಸ್ತು ಹಾಗೂ 1.33 ಲಕ್ಷ ಮೌಲ್ಯದ 355 ಲೀ. ಮದ್ಯ ಜಪ್ತಿ ಮಾಡಲಾಗಿದೆ. ಕೋವಿಡ್ ಸೋಂಕಿತರು ಮತ್ತು ಸಂಪರ್ಕಿತರು ಸಂಜೆ 6 ರಿಂದ 7 ಗಂಟೆ ವರೆಗೆ ಮತದಾನ ಮಾಡಲು ಸಮಯ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಸೋಂಕು ಬಾಧಿಸಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕಿತ 18 ಜನರ ವರದಿ ಇನ್ನಷ್ಟೇ ಬರಬೇಕಾಗಿದೆ. ಪ್ರಾಥಮಿಕ ಸಂಪರ್ಕಿತರು ಸಂಜೆ 6 ರಿಂದ 7 ಕ್ಕೆ ಮತದಾನ ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್ ಮಾತನಾಡಿ, ಕ್ಷೇತ್ರದಲ್ಲಿ ಒಟ್ಟು 62 ಸೂಕ್ಷ್ಮ, 07 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ 739 ಪೊಲೀಸ್ ಕಾನ್​​ಸ್ಟೇಬಲ್​, 71 ಎಎಸ್​​ಐ, 25 ಪಿಎಸ್​​ಐ, 07 ಸಿಪಿಐ, 03 ಡಿಎಸ್​ಪಿ, 1 ಸಿಆರ್​ಪಿಎಫ್​​ ಮತ್ತು ಒಂದು ಕೆಎಸ್​​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಇದುವರೆಗೂ 7 ಐಪಿಸಿ ಪ್ರಕರಣ ದಾಖಲಾಗಿದ್ದು, 18 ಜನರನ್ನು ಬಂಧಿಸಲಾಗಿದೆ. ಹಣ ಹಂಚಿಕೆ ವೈರಲ್ ಆದ ಬಗ್ಗೆ ವಿಡಿಯೋದಲ್ಲಿ ಕಂಡು ಬಂದ ಎಲ್ಲ ವ್ಯಕ್ತಿಗಳನ್ನು ಬಂಧಿಸಲಾಗಿದೆ‌ ಎಂದು ತಿಳಿಸಿದರು.

ಇದನ್ನೂ ಓದಿ : ಉಪಚುನಾವಣೆ ಮತದಾನದ ಬಳಿಕ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದೆ ಕಾಂಗ್ರೆಸ್!

Last Updated : Apr 16, 2021, 7:35 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.