ETV Bharat / state

ಭೀಮಾ ನದಿಗೆ ನೀರಿನ ಹರಿವು ಕುರಿತಂತೆ ಮಹಾರಾಷ್ಟ್ರ ಸರ್ಕಾರದಿಂದ ತಪ್ಪು ಮಾಹಿತಿ: ಲಕ್ಷ್ಮಣ ಸವದಿ

author img

By

Published : Oct 19, 2020, 6:31 PM IST

ಭೀಮಾ ನದಿಗೆ ನೀರಿನ ಹರಿವು ಕುರಿತಂತೆ ಮಹಾರಾಷ್ಟ್ರದ ಸರ್ಕಾರದಿಂದ ತಪ್ಪು ಮಾಹಿತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

Raichur
ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್​ಗೆ ಭೇಟಿ ನೀಡಿದ ಲಕ್ಷ್ಮಣ ಸವದಿ

ರಾಯಚೂರು: ಭೀಮಾ ನದಿಗೆ ನೀರಿನ ಹರಿವು ಕುರಿತಂತೆ ಮಹಾರಾಷ್ಟ್ರ ಸರ್ಕಾರದಿಂದ ತಪ್ಪು ಮಾಹಿತಿ ನೀಡಲಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ.

ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮದ ಬಳಿ ಇರುವ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್​ಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮಳೆಯಿಂದಾಗಿ ಭೀಮಾ ನದಿಗೆ ಎಂಟು ಲಕ್ಷ ಕ್ಯೂಸೆಕ್​ ನೀರು ಹರಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಆದ್ರೆ ಆ ಎಂಟು ಲಕ್ಷ ಕ್ಯೂಸೆಕ್​​ ನೀರು ಎಲ್ಲಿಗೆ ಹೋಯಿತು?. ಅಧಿಕಾರಿಗಳು ಸರಿಯಾದ ಮಾಹಿತಿ ನೀಡಿದ್ದರೆ ಈಗಾಗಲೇ ಕೃಷ್ಣ ನದಿಗೆ ಬರಬೇಕಾಗಿತ್ತು. ಆದ್ರೆ ಸುಮಾರು ಮೂರುವರೆ ಲಕ್ಷ ಕ್ಯೂಸೆಕ್​​ವರೆಗೆ ಮಾತ್ರ ಹರಿದುಬಂದಿವೆ. 8 ಲಕ್ಷ ಕ್ಯೂಸೆಕ್​ ನೀರು ಬಿಡುತ್ತೇವೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದ್ರೆ ಇದುವರೆಗೆ ಅಷ್ಟೊಂದು ಪ್ರಮಾಣದಲ್ಲಿ ನೀರು ಹರಿದು ಬಂದಿಲ್ಲ. ಹೀಗಾಗಿ ಮಹಾರಾಷ್ಟ್ರ ಸರ್ಕಾರದಿಂದ ದಾರಿ ತಪ್ಪಿಸುವ ಕೆಲಸವಾಗಿದೆ. ಈ ಸಂಬಂಧ ಸಚಿವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಪ್ಪು ಮಾಹಿತಿ ನೀಡದಂತೆ ಮನವಿ ಮಾಡಲಾಗುವುದು ಎಂದರು.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ

ಮಳೆಯಿಂದಾಗಿ ಆಗಿರುವ ಹಾನಿ ಸಂಭವಿಸಿದ್ದು, ಅಧಿಕಾರಿಗಳೊಂದಿಗೆ ಸರ್ವೇ ನಡೆಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ನಂತರ ಬೆಳೆ ಹಾನಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಎಂದು ಭರವಸೆ ನೀಡಿದರು.

ಜಿಲ್ಲೆಗೆ ಪ್ರವಾಹ ಎದುರಾಗುವ ಗ್ರಾಮಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಗುರ್ಜಾಪುರ ಗ್ರಾಮ ಸ್ಥಳಾಂತರಿಸುವ ಕುರಿತಂತೆ ಗ್ರಾಮಸ್ಥರು ಗ್ರಾಮಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುವ ನಿಯಮಾನುಸಾರದಂತೆ ಸ್ಥಳವನ್ನು ಗುರುತಿಸುವ ಮೂಲಕ ಸ್ಥಳಾಂತರಕ್ಕೆ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದಾದ ಬಳಿಕ ಗುರ್ಜಾಪುರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಕೆಲವೇ ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಆದ್ರೆ ಗ್ರಾಮಸ್ಥರು ಸಚಿವರು, ಅಧಿಕಾರಿಗಳು ಕೇವಲ ಆಶ್ವಾಸನೆ ಕೊಟ್ಟು ಹೋಗುತ್ತಿದ್ದಾರೆ. ಆದ್ರೆ ಈ ಬಗ್ಗೆ ಇದುವರೆಗೆ ಕ್ರಮ ತೆಗೆದುಕೊಂಡಿಲ್ಲವೆಂದು ಗ್ರಾಮಸ್ಥರು ದೂರಿದರು.

ರಾಯಚೂರು: ಭೀಮಾ ನದಿಗೆ ನೀರಿನ ಹರಿವು ಕುರಿತಂತೆ ಮಹಾರಾಷ್ಟ್ರ ಸರ್ಕಾರದಿಂದ ತಪ್ಪು ಮಾಹಿತಿ ನೀಡಲಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ.

ರಾಯಚೂರು ತಾಲೂಕಿನ ಗುರ್ಜಾಪುರ ಗ್ರಾಮದ ಬಳಿ ಇರುವ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್​ಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮಳೆಯಿಂದಾಗಿ ಭೀಮಾ ನದಿಗೆ ಎಂಟು ಲಕ್ಷ ಕ್ಯೂಸೆಕ್​ ನೀರು ಹರಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಆದ್ರೆ ಆ ಎಂಟು ಲಕ್ಷ ಕ್ಯೂಸೆಕ್​​ ನೀರು ಎಲ್ಲಿಗೆ ಹೋಯಿತು?. ಅಧಿಕಾರಿಗಳು ಸರಿಯಾದ ಮಾಹಿತಿ ನೀಡಿದ್ದರೆ ಈಗಾಗಲೇ ಕೃಷ್ಣ ನದಿಗೆ ಬರಬೇಕಾಗಿತ್ತು. ಆದ್ರೆ ಸುಮಾರು ಮೂರುವರೆ ಲಕ್ಷ ಕ್ಯೂಸೆಕ್​​ವರೆಗೆ ಮಾತ್ರ ಹರಿದುಬಂದಿವೆ. 8 ಲಕ್ಷ ಕ್ಯೂಸೆಕ್​ ನೀರು ಬಿಡುತ್ತೇವೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದ್ರೆ ಇದುವರೆಗೆ ಅಷ್ಟೊಂದು ಪ್ರಮಾಣದಲ್ಲಿ ನೀರು ಹರಿದು ಬಂದಿಲ್ಲ. ಹೀಗಾಗಿ ಮಹಾರಾಷ್ಟ್ರ ಸರ್ಕಾರದಿಂದ ದಾರಿ ತಪ್ಪಿಸುವ ಕೆಲಸವಾಗಿದೆ. ಈ ಸಂಬಂಧ ಸಚಿವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಪ್ಪು ಮಾಹಿತಿ ನೀಡದಂತೆ ಮನವಿ ಮಾಡಲಾಗುವುದು ಎಂದರು.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ

ಮಳೆಯಿಂದಾಗಿ ಆಗಿರುವ ಹಾನಿ ಸಂಭವಿಸಿದ್ದು, ಅಧಿಕಾರಿಗಳೊಂದಿಗೆ ಸರ್ವೇ ನಡೆಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ನಂತರ ಬೆಳೆ ಹಾನಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಎಂದು ಭರವಸೆ ನೀಡಿದರು.

ಜಿಲ್ಲೆಗೆ ಪ್ರವಾಹ ಎದುರಾಗುವ ಗ್ರಾಮಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಗುರ್ಜಾಪುರ ಗ್ರಾಮ ಸ್ಥಳಾಂತರಿಸುವ ಕುರಿತಂತೆ ಗ್ರಾಮಸ್ಥರು ಗ್ರಾಮಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುವ ನಿಯಮಾನುಸಾರದಂತೆ ಸ್ಥಳವನ್ನು ಗುರುತಿಸುವ ಮೂಲಕ ಸ್ಥಳಾಂತರಕ್ಕೆ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದಾದ ಬಳಿಕ ಗುರ್ಜಾಪುರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಕೆಲವೇ ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಆದ್ರೆ ಗ್ರಾಮಸ್ಥರು ಸಚಿವರು, ಅಧಿಕಾರಿಗಳು ಕೇವಲ ಆಶ್ವಾಸನೆ ಕೊಟ್ಟು ಹೋಗುತ್ತಿದ್ದಾರೆ. ಆದ್ರೆ ಈ ಬಗ್ಗೆ ಇದುವರೆಗೆ ಕ್ರಮ ತೆಗೆದುಕೊಂಡಿಲ್ಲವೆಂದು ಗ್ರಾಮಸ್ಥರು ದೂರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.