ETV Bharat / state

ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಕೆಗೆ ನಿರ್ಲಕ್ಷ್ಯ : ಆಕ್ರೋಶ - Infant Development officer

ಬಾಕಿ ಉಳಿದ ವೇತನ ಮತ್ತು ಮೊಟ್ಟೆ ಖರೀದಿ ಹಣ ಪಾವತಿ, ನಿಗದಿತ ಅವಧಿಯಲ್ಲಿ ಪಡಿತರ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

Protest against neglect of fulfillment of demands of Anganwadi Employees
ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಕೆಗೆ ನಿರ್ಲಕ್ಷ್ಯ ವಿರೋಧಿಸಿ ಪ್ರತಿಭಟನೆ
author img

By

Published : Aug 13, 2020, 8:32 AM IST

ಲಿಂಗಸುಗೂರು(ರಾಯಚೂರು): ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ವಿರೋಧಿಸಿ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಪ್ರತಿಭಟನೆ ನಡೆಸಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡ್ರಗೆ ಮನವಿ ಸಲ್ಲಿಸಿದ ನೌಕರರು ಬಾಕಿ ಉಳಿದ ವೇತನ ಮತ್ತು ಮೊಟ್ಟೆ ಖರೀದಿ ಹಣ ಪಾವತಿಸಬೇಕು. ನಿಗದಿತ ಅವಧಿಯಲ್ಲಿ ಪಡಿತರ ಹಂಚಿಕೆ ಮಾಡಬೇಕು ಎಂದು ಆಗ್ರಹ ಪಡಿಸಿದರು.

ಇನ್ನು ನಿವೃತ್ತಿ ಹೊಂದಿದ ನೌಕರರಿಗೆ ನೀಡಬೇಕಾದ ಇಡಿಗಂಟು ಹಣ, ಮೃತ ಕುಟುಂಬಕ್ಕೆ ಅಂದಿನ ದಿನವೇ ಶವ ಸಂಸ್ಕಾರದ ಹಣ ಪಾವತಿಸುವುದು ಸೇರಿದಂತೆ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಹಾಗೂ ನೌಕರರಿಗೆ ಸೇವಾಭದ್ರತೆ, ವೇತನ ಇತರ ಬೇಡಿಕೆಗಳ ಕುರಿತು ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಿಂಗಸುಗೂರು(ರಾಯಚೂರು): ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ವಿರೋಧಿಸಿ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಪ್ರತಿಭಟನೆ ನಡೆಸಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡ್ರಗೆ ಮನವಿ ಸಲ್ಲಿಸಿದ ನೌಕರರು ಬಾಕಿ ಉಳಿದ ವೇತನ ಮತ್ತು ಮೊಟ್ಟೆ ಖರೀದಿ ಹಣ ಪಾವತಿಸಬೇಕು. ನಿಗದಿತ ಅವಧಿಯಲ್ಲಿ ಪಡಿತರ ಹಂಚಿಕೆ ಮಾಡಬೇಕು ಎಂದು ಆಗ್ರಹ ಪಡಿಸಿದರು.

ಇನ್ನು ನಿವೃತ್ತಿ ಹೊಂದಿದ ನೌಕರರಿಗೆ ನೀಡಬೇಕಾದ ಇಡಿಗಂಟು ಹಣ, ಮೃತ ಕುಟುಂಬಕ್ಕೆ ಅಂದಿನ ದಿನವೇ ಶವ ಸಂಸ್ಕಾರದ ಹಣ ಪಾವತಿಸುವುದು ಸೇರಿದಂತೆ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಹಾಗೂ ನೌಕರರಿಗೆ ಸೇವಾಭದ್ರತೆ, ವೇತನ ಇತರ ಬೇಡಿಕೆಗಳ ಕುರಿತು ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.