ETV Bharat / state

ಪುನೀತ್​ ಸಾವಿನಿಂದ ಮಾನಸಿಕ ಆಘಾತ: ರಾಯಚೂರಲ್ಲಿ ಇಬ್ಬರು ಅಭಿಮಾನಿಗಳಿಂದ ಆತ್ಮಹತ್ಯೆ ಯತ್ನ

author img

By

Published : Oct 30, 2021, 11:38 AM IST

ಕನ್ನಡದ ಖ್ಯಾತ ನಟ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ.

Two punith rajkumar attempt to suicide in raichurTwo punith rajkumar attempt to suicide in raichur
ಪುನೀತ್​ ಸಾವಿನಿಂದ ನೊಂದು ಇಬ್ಬರು ಆತ್ಮಹತ್ಯೆಗೆ ಯತ್ನ

ರಾಯಚೂರು: ಸ್ಯಾಂಡಲ್​ವುಡ್ ನಟ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಪುನೀತ್​ ಸಾವಿನಿಂದ ನೊಂದು ಇಬ್ಬರು ಆತ್ಮಹತ್ಯೆಗೆ ಯತ್ನ

ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಹಾರಪೂರ ಗ್ರಾಮದ ಬಸವನಗೌಡ (28), ಯಪಲಪರ್ವಿ ಗ್ರಾಮದ ಮಹ್ಮದ್ ರಫಿ (28) ಆತ್ಮಹತ್ಯೆಗೆ ಯತ್ನಿಸಿದವರು.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ಈ ಇಬ್ಬರು ಯುವಕರನ್ನು ಸಿಂಧನೂರು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಇಬ್ಬರು ಚೇತರಿಸಿಕೊಳ್ಳುತ್ತಿದ್ದು, ಪೊಲೀಸರು ಸಹ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ನೆಚ್ಚಿನ ನಟನ ಸಾವಿನ ಸುದ್ದಿ ಕೇಳಿದ ಅಭಿಮಾನಿಗೆ ಹೃದಯಾಘಾತ..

ಇವರಿಬ್ಬರು ಪವರ್​ ಸ್ಟಾರ್​ ಅವರ ಅಪ್ಪಟ ಅಭಿಮಾನಿಗಳಾಗಿದ್ದು, ನಿನ್ನೆ ಪುನೀತ್​ ಅವರ ನಿಧನದ ಸುದ್ದಿಕೇಳಿ ಮಾನಸಿಕ ಆಘಾತಕ್ಕೊಳಗಾಗಿದ್ದಾರೆ.

ಇದನ್ನೂ ಓದಿ:ಬ್ಲೇಡ್​​ನಿಂದ ಕೈ, ಎದೆ ಕೊಯ್ದುಕೊಂಡು ಪುನೀತ್ ಅಭಿಮಾನಿ ಆತ್ಮಹತ್ಯೆ ಯತ್ನ

ರಾಯಚೂರು: ಸ್ಯಾಂಡಲ್​ವುಡ್ ನಟ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಪುನೀತ್​ ಸಾವಿನಿಂದ ನೊಂದು ಇಬ್ಬರು ಆತ್ಮಹತ್ಯೆಗೆ ಯತ್ನ

ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಹಾರಪೂರ ಗ್ರಾಮದ ಬಸವನಗೌಡ (28), ಯಪಲಪರ್ವಿ ಗ್ರಾಮದ ಮಹ್ಮದ್ ರಫಿ (28) ಆತ್ಮಹತ್ಯೆಗೆ ಯತ್ನಿಸಿದವರು.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ಈ ಇಬ್ಬರು ಯುವಕರನ್ನು ಸಿಂಧನೂರು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಇಬ್ಬರು ಚೇತರಿಸಿಕೊಳ್ಳುತ್ತಿದ್ದು, ಪೊಲೀಸರು ಸಹ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ನೆಚ್ಚಿನ ನಟನ ಸಾವಿನ ಸುದ್ದಿ ಕೇಳಿದ ಅಭಿಮಾನಿಗೆ ಹೃದಯಾಘಾತ..

ಇವರಿಬ್ಬರು ಪವರ್​ ಸ್ಟಾರ್​ ಅವರ ಅಪ್ಪಟ ಅಭಿಮಾನಿಗಳಾಗಿದ್ದು, ನಿನ್ನೆ ಪುನೀತ್​ ಅವರ ನಿಧನದ ಸುದ್ದಿಕೇಳಿ ಮಾನಸಿಕ ಆಘಾತಕ್ಕೊಳಗಾಗಿದ್ದಾರೆ.

ಇದನ್ನೂ ಓದಿ:ಬ್ಲೇಡ್​​ನಿಂದ ಕೈ, ಎದೆ ಕೊಯ್ದುಕೊಂಡು ಪುನೀತ್ ಅಭಿಮಾನಿ ಆತ್ಮಹತ್ಯೆ ಯತ್ನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.