ETV Bharat / state

ರಾಯಚೂರಿನಲ್ಲಿ 225 ಕೋವಿಡ್ ಕೇಸ್; ಮಾಸ್ಕ್​ ಹಾಕದವರಿಗೆ ದಂಡ

ಬಿಸಿಲೂರು ರಾಯಚೂರಿನಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಮವಾರ ಜಿಲ್ಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ 200 ದಾಟಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಪೊಲೀಸರು ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಿ ಬಿಸಿ ಮುಟ್ಟಿಸುತ್ತಿದ್ದಾರೆ.

author img

By

Published : Apr 20, 2021, 7:57 AM IST

Raichur Covid update
ಮಾಸ್ಕ್ ಹಾಕವರಿಗೆ ದಂಡ ವಿಧಿಸಿದ ಪೊಲೀಸರು

ರಾಯಚೂರು : ಜಿಲ್ಲೆಯಲ್ಲಿ ಏಪ್ರಿಲ್ 19 ರಂದು 225 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 971 ಕ್ಕೆ ಏರಿಕೆಯಾಗಿದೆ. 21 ಮಂದಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಯಚೂರು ತಾಲೂಕಿನಲ್ಲಿ 143, ದೇವದುರ್ಗದಲ್ಲಿ 39, ಮಾನ್ವಿಯಲ್ಲಿ 21, ಲಿಂಗಸುಗೂರಿನಲ್ಲಿ 17, ಸಿಂಧನೂರಿನಲ್ಲಿ 5 ಜನರಿಗೆ ಕೋವಿಡ್ ದೃಢಪಟ್ಟಿದೆ.

ಒಪೆಕ್ ಆಸ್ಪತ್ರೆಯಲ್ಲಿ 92 ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 38 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 836 ಜನರು ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ. 2,257 ಜನರ ಪರೀಕ್ಷಾ ವರದಿ ಬರಲು ಬಾಕಿಯಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಸ್ಕ್ ಹಾಕವರಿಗೆ ದಂಡ ವಿಧಿಸಿದ ಪೊಲೀಸರು

ಇದನ್ನೂ ಓದಿ: ಕಲಬುರಗಿಯಲ್ಲಿ 513 ಕೋವಿಡ್ ಸೋಂಕಿತರು ಪತ್ತೆ, 6 ಜನ ಬಲಿ

ಇನ್ನು ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಸೋಮವಾರ ಸಂಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರಿಬಾಬು ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮುಂಜಾಗೃತೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ಕಡ್ಡಾಯವಾಗಿ ಮಾಸ್ಕ್​ ಧರಿಸುವಂತೆ ಸಾರ್ವಜನಿಕರಿಗೆ ಸೂಚಿಸಿದರು. ಸ್ಥಳದಲ್ಲೇ ಮಾಸ್ಕ್​ ಧರಿಸದ ಕೆಲವರಿಗೆ ದಂಡ ವಿಧಿಸಿದರು.

ರಾಯಚೂರು : ಜಿಲ್ಲೆಯಲ್ಲಿ ಏಪ್ರಿಲ್ 19 ರಂದು 225 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 971 ಕ್ಕೆ ಏರಿಕೆಯಾಗಿದೆ. 21 ಮಂದಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಯಚೂರು ತಾಲೂಕಿನಲ್ಲಿ 143, ದೇವದುರ್ಗದಲ್ಲಿ 39, ಮಾನ್ವಿಯಲ್ಲಿ 21, ಲಿಂಗಸುಗೂರಿನಲ್ಲಿ 17, ಸಿಂಧನೂರಿನಲ್ಲಿ 5 ಜನರಿಗೆ ಕೋವಿಡ್ ದೃಢಪಟ್ಟಿದೆ.

ಒಪೆಕ್ ಆಸ್ಪತ್ರೆಯಲ್ಲಿ 92 ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 38 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 836 ಜನರು ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ. 2,257 ಜನರ ಪರೀಕ್ಷಾ ವರದಿ ಬರಲು ಬಾಕಿಯಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಸ್ಕ್ ಹಾಕವರಿಗೆ ದಂಡ ವಿಧಿಸಿದ ಪೊಲೀಸರು

ಇದನ್ನೂ ಓದಿ: ಕಲಬುರಗಿಯಲ್ಲಿ 513 ಕೋವಿಡ್ ಸೋಂಕಿತರು ಪತ್ತೆ, 6 ಜನ ಬಲಿ

ಇನ್ನು ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಸೋಮವಾರ ಸಂಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರಿಬಾಬು ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮುಂಜಾಗೃತೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ಕಡ್ಡಾಯವಾಗಿ ಮಾಸ್ಕ್​ ಧರಿಸುವಂತೆ ಸಾರ್ವಜನಿಕರಿಗೆ ಸೂಚಿಸಿದರು. ಸ್ಥಳದಲ್ಲೇ ಮಾಸ್ಕ್​ ಧರಿಸದ ಕೆಲವರಿಗೆ ದಂಡ ವಿಧಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.