ETV Bharat / state

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್‌ ಪ್ರಕರಣಗಳ ಹೆಚ್ಚಳ : ರಾಯಚೂರು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರತಿಯೊಬ್ಬ ಪ್ರಯಾಣಿಕರ ತಪಾಸಣೆ ಮಾಡಿ, ಆರ್​ಟಿಪಿಸಿಆರ್​ ನೆಗೆಟಿವ್ ರಿಪೋರ್ಟ್ ಇದ್ದರೆ ಮಾತ್ರ ಜಿಲ್ಲೆಗೆ ಬರಲು ಅವಕಾಶ ನೀಡಲಾಗುತ್ತಿದೆ. ಒಂದು ಡೋಸ್ ವ್ಯಾಕ್ಸಿನ್ ಪಡೆದ ಪ್ರಮಾಣ ಪತ್ರ ಕಡ್ಡಾಯಗೊಳಿಸುವ ಮೂಲಕ ಡೆಲ್ಟಾ ಪ್ಲಸ್ ತಡೆಗೆ ಜಿಲ್ಲಾಡಳಿತ ಸಜ್ಜಾಗಿದೆ..

author img

By

Published : Jul 2, 2021, 1:10 PM IST

raichur
ರಾಯಚೂರು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ರಾಯಚೂರು : ಮಹಾರಾಷ್ಟ್ರದಲ್ಲಿ ಕೊರೊನಾ ವೈರಾಣುವಿನ ರೂಪಾಂತರವಾಗಿರುವ ಡೆಲ್ಟಾ ಪ್ಲಸ್‌ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿರುವುದರಿಂದ ರಾಯಚೂರು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದೆ.

ಜಿಲ್ಲೆಯ ಗಡಿ ಭಾಗದಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸಿ, ಒಟ್ಟು 22 ನೋಡಲ್ ಅಧಿಕಾರಿಗಳನ್ನು ‌ನೇಮಿಸಲಾಗಿದೆ. ಒಟ್ಟು 11 ಚೆಕ್ ​ಪೋಸ್ಟ್​ಗಳಲ್ಲಿ 24 ಗಂಟೆಗಳ ಕಾಲ ಕಡ್ಡಾಯ ತಪಾಸಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ರೈಲು ನಿಲ್ದಾಣ, ಬಸ್ ನಿಲ್ದಾಣದಲ್ಲೂ ಚೆಕ್​ಪೋಸ್ಟ್​ ನಿರ್ಮಿಸಲಾಗಿದೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರತಿಯೊಬ್ಬ ಪ್ರಯಾಣಿಕರ ತಪಾಸಣೆ ಮಾಡಿ, ಆರ್​ಟಿಪಿಸಿಆರ್​ ನೆಗೆಟಿವ್ ರಿಪೋರ್ಟ್ ಇದ್ದರೆ ಮಾತ್ರ ಜಿಲ್ಲೆಗೆ ಬರಲು ಅವಕಾಶ ನೀಡಲಾಗುತ್ತಿದೆ. ಒಂದು ಡೋಸ್ ವ್ಯಾಕ್ಸಿನ್ ಪಡೆದ ಪ್ರಮಾಣ ಪತ್ರ ಕಡ್ಡಾಯಗೊಳಿಸುವ ಮೂಲಕ ಡೆಲ್ಟಾ ಪ್ಲಸ್ ತಡೆಗೆ ಜಿಲ್ಲಾಡಳಿತ ಸಜ್ಜಾಗಿದೆ.

ಇದನ್ನೂ ಓದಿ: ಬಾಲಕಿ ಮೇಲೆ ನಿರಂತರ ಅತ್ಯಾಚಾರ ಆರೋಪ : 7 ಜನರ ವಿರುದ್ದ ದೂರು ದಾಖಲು



ರಾಯಚೂರು : ಮಹಾರಾಷ್ಟ್ರದಲ್ಲಿ ಕೊರೊನಾ ವೈರಾಣುವಿನ ರೂಪಾಂತರವಾಗಿರುವ ಡೆಲ್ಟಾ ಪ್ಲಸ್‌ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿರುವುದರಿಂದ ರಾಯಚೂರು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದೆ.

ಜಿಲ್ಲೆಯ ಗಡಿ ಭಾಗದಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸಿ, ಒಟ್ಟು 22 ನೋಡಲ್ ಅಧಿಕಾರಿಗಳನ್ನು ‌ನೇಮಿಸಲಾಗಿದೆ. ಒಟ್ಟು 11 ಚೆಕ್ ​ಪೋಸ್ಟ್​ಗಳಲ್ಲಿ 24 ಗಂಟೆಗಳ ಕಾಲ ಕಡ್ಡಾಯ ತಪಾಸಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ರೈಲು ನಿಲ್ದಾಣ, ಬಸ್ ನಿಲ್ದಾಣದಲ್ಲೂ ಚೆಕ್​ಪೋಸ್ಟ್​ ನಿರ್ಮಿಸಲಾಗಿದೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರತಿಯೊಬ್ಬ ಪ್ರಯಾಣಿಕರ ತಪಾಸಣೆ ಮಾಡಿ, ಆರ್​ಟಿಪಿಸಿಆರ್​ ನೆಗೆಟಿವ್ ರಿಪೋರ್ಟ್ ಇದ್ದರೆ ಮಾತ್ರ ಜಿಲ್ಲೆಗೆ ಬರಲು ಅವಕಾಶ ನೀಡಲಾಗುತ್ತಿದೆ. ಒಂದು ಡೋಸ್ ವ್ಯಾಕ್ಸಿನ್ ಪಡೆದ ಪ್ರಮಾಣ ಪತ್ರ ಕಡ್ಡಾಯಗೊಳಿಸುವ ಮೂಲಕ ಡೆಲ್ಟಾ ಪ್ಲಸ್ ತಡೆಗೆ ಜಿಲ್ಲಾಡಳಿತ ಸಜ್ಜಾಗಿದೆ.

ಇದನ್ನೂ ಓದಿ: ಬಾಲಕಿ ಮೇಲೆ ನಿರಂತರ ಅತ್ಯಾಚಾರ ಆರೋಪ : 7 ಜನರ ವಿರುದ್ದ ದೂರು ದಾಖಲು



ETV Bharat Logo

Copyright © 2024 Ushodaya Enterprises Pvt. Ltd., All Rights Reserved.