ETV Bharat / state

ರಾಯಚೂರು: ತಲೆ ಮೇಲೆ ಇಟ್ಟಿಗೆ ಹೊತ್ತು ಅರೆಬೆತ್ತಲೆ ಪ್ರತಿಭಟನೆ

author img

By

Published : Dec 5, 2020, 3:02 PM IST

ಕನ್ನಡಪರ ಸಂಘಟನೆಗಳ ಸದಸ್ಯರು ರಾಯಚೂರು ನಗರದ ಅಂಬೇಡ್ಕರ್ ಸರ್ಕಲ್​ನಲ್ಲಿ, ರಾಜ್ಯ ಸರ್ಕಾರ ಸತ್ತು ಹೋಗಿದೆ ಎಂದು ಶ್ರದ್ಧಾಂಜಲಿ ಅರ್ಪಿಸುವ ಜೊತೆಗೆ ಸಮಾಧಿ ಕಟ್ಟಲು ಇಟ್ಟಿಗೆಗಳನ್ನು ತಲೆ ಮೇಲೆ ಹೊತ್ತುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಗಳು
ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಗಳು

ರಾಯಚೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ಜಿಲ್ಲೆಯಲ್ಲಿ 17 ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಂದ್​ಗೆ ಬೆಂಬಲ ವ್ಯಕ್ತಪಡಿಸಿದವು.

ಬಂದ್ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಸದಸ್ಯರು ನಗರದ ಅಂಬೇಡ್ಕರ್ ಸರ್ಕಲ್​ನಲ್ಲಿ, ರಾಜ್ಯ ಸರ್ಕಾರ ಸತ್ತು ಹೋಗಿದೆ ಎಂದು ಶ್ರದ್ಧಾಂಜಲಿ ಅರ್ಪಿಸುವ ಜೊತೆಗೆ ಸಮಾಧಿ ಕಟ್ಟಲು ಇಟ್ಟಿಗೆಗಳನ್ನು ತಲೆ ಮೇಲೆ ಹೊತ್ತುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಗಳು

ಸರ್ಕಾರ ಕೂಡಲೇ ಮರಾಠ ಅಭಿವೃದ್ಧಿ ನಿಗಮ ರದ್ದುಗೊಳಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಇದೇ ವೇಳೆ ಪ್ರತಿಭಟನಾಕಾರರು ಎಚ್ಚರಿಸಿದರು. ಬಂದ್ ಹಿನ್ನೆಲೆ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋ‌ಬಸ್ತ್ ಏರ್ಪಡಿಸಲಾಗಿತ್ತು.

ಇನ್ನು ಜಿಲ್ಲೆಯಾದ್ಯಂತ ಜನಜೀವನ, ಸಾರಿಗೆ ಬಸ್‌ಗಳು, ಆಟೋಗಳು, ಖಾಸಗಿ ವಾಹನಗಳು ಸಂಚರಿಸುತ್ತಿದ್ದ ದೃಶ್ಯ ಕಂಡುಬಂತು. ಅಂಗಡಿ ಮುಂಗಟ್ಟುಗಳು ಸಹ ಎಂದಿನಂತೆ ತೆರೆದಿದ್ದು, ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ರಾಯಚೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ಜಿಲ್ಲೆಯಲ್ಲಿ 17 ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಂದ್​ಗೆ ಬೆಂಬಲ ವ್ಯಕ್ತಪಡಿಸಿದವು.

ಬಂದ್ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಸದಸ್ಯರು ನಗರದ ಅಂಬೇಡ್ಕರ್ ಸರ್ಕಲ್​ನಲ್ಲಿ, ರಾಜ್ಯ ಸರ್ಕಾರ ಸತ್ತು ಹೋಗಿದೆ ಎಂದು ಶ್ರದ್ಧಾಂಜಲಿ ಅರ್ಪಿಸುವ ಜೊತೆಗೆ ಸಮಾಧಿ ಕಟ್ಟಲು ಇಟ್ಟಿಗೆಗಳನ್ನು ತಲೆ ಮೇಲೆ ಹೊತ್ತುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಗಳು

ಸರ್ಕಾರ ಕೂಡಲೇ ಮರಾಠ ಅಭಿವೃದ್ಧಿ ನಿಗಮ ರದ್ದುಗೊಳಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಇದೇ ವೇಳೆ ಪ್ರತಿಭಟನಾಕಾರರು ಎಚ್ಚರಿಸಿದರು. ಬಂದ್ ಹಿನ್ನೆಲೆ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋ‌ಬಸ್ತ್ ಏರ್ಪಡಿಸಲಾಗಿತ್ತು.

ಇನ್ನು ಜಿಲ್ಲೆಯಾದ್ಯಂತ ಜನಜೀವನ, ಸಾರಿಗೆ ಬಸ್‌ಗಳು, ಆಟೋಗಳು, ಖಾಸಗಿ ವಾಹನಗಳು ಸಂಚರಿಸುತ್ತಿದ್ದ ದೃಶ್ಯ ಕಂಡುಬಂತು. ಅಂಗಡಿ ಮುಂಗಟ್ಟುಗಳು ಸಹ ಎಂದಿನಂತೆ ತೆರೆದಿದ್ದು, ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.