ರಾಯಚೂರು: ಮರಳು ತುಂಬಿದ ಟಿಪ್ಪರ್ ಹರಿದು 10 ಕುರಿಗಳು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಕರಡಿಗುಡ್ಡ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಕುರಿಗಾಹಿ ಮರಿಗೆಪ್ಪ ಎಂಬವರಿಗೆ ಸೇರಿದ 10 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ
ಮರಳು ಸಾಗಿಸುತ್ತಿದ್ದ ಟಿಪ್ಪರ್ ಯಮರೂಪಿಯಂತೆ ವೇಗವಾಗಿ ಬಂದು ಕುರಿಗಳ ಹಿಂಡಿನ ಮೇಲೆ ಎರಗಿ ಪರಾರಿಯಾಗಲು ಯತ್ನಿಸಿದೆ. ತಕ್ಷಣ ಎಚ್ಚೆತ್ತ ಗ್ರಾಮಸ್ಥರು ಟಿಪ್ಪರ್ ಚೇಸ್ ಮಾಡಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪರಿಶೀಲಿಸಿದಾಗ ಟಿಪ್ಪರ್ಗೆ ನಂಬರ್ ಇಲ್ಲದಿರುವುದು ಪತ್ತೆಯಾಗಿದೆ. ಘಟನೆಯಿಂದ ಕುರಿಗಾಹಿ ಮರಿಗೆಪ್ಪಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಈ ಬಗ್ಗೆ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.