ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವೈಭವದಿಂದ ರಥಸಪ್ತಮಿ ಆಚರಿಸಲಾಯಿತು. ರಥಸಪ್ತಮಿ ಅಂಗವಾಗಿ ಶ್ರೀಮಠದಲ್ಲಿ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ನಡೆಸಲಾಯಿತು. ನಂತರ ಮಠದ ಪ್ರಾಂಗಣದಲ್ಲಿ ಪೀಠಾಧಿಪತಿ ಶ್ರೀಸುಭುದೇಂಧ್ರ ತೀರ್ಥರು ಮಂಗಳಾರತಿ ಮಾಡುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ರಥಸಪ್ತಮಿ ಪ್ರಯುಕ್ತವಾಗಿ ರಥೋತ್ಸವ, ಪಲಕ್ಕಿ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ರಾಜ್ಯದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿದರು. ಭಕ್ತರ ಜಯ ಘೋಷಣೆಗಳೊಂದಿಗೆ ರಥೋತ್ಸವ ನಡೆಯಿತು.
ಇದನ್ನೂ ಓದಿ : ಲತಾ ಮಂಗೇಶ್ಕರ್ ದೇವಸ್ಥಾನ ಕಟ್ಟಲು ಮುಂದಾದ ಗಾಯಕ : 6 ತಿಂಗಳೊಳಗೆ ದೇವಾಲಯ ನಿರ್ಮಾಣ