ETV Bharat / state

ನಾರಾಯಣಪುರ ಅಣೆಕಟ್ಟಿನಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಡುಗಡೆ: ಶೀಲಹಳ್ಳಿ ಸೇತುವೆ ಮುಳುಗಡೆ

author img

By

Published : Jul 23, 2021, 12:05 PM IST

ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಹರಿಬಿಟ್ಟ ಪರಿಣಾಮ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.

Sheelahalli Bridge
ಶೀಲಹಳ್ಳಿ ಸೇತುವೆ ಮುಳುಗಡೆ

ಲಿಂಗಸುಗೂರು (ರಾಯಚೂರು): ನಾರಾಯಣಪುರ ಅಣೆಕಟ್ಟಿನಿಂದ 29 ಕ್ರಸ್ಟ್​​​​​​​ ಗೇಟ್​​ಗಳ ಮೂಲಕ 1.98 ಲಕ್ಷ ಕ್ಯೂಸೆಕ್ ನೀರನ್ನು​ ಕೃಷ್ಣಾ ನದಿಗೆ ಹರಿಬಿಟ್ಟ ಪರಿಣಾಮ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.

ಶೀಲಹಳ್ಳಿ ಸೇತುವೆ ಮುಳುಗಡೆ

ಇದರಿಂದಾಗಿ ಕಡದರಗಡ್ಡಿ, ಯರಗೋಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ನಡುಗಡ್ಡೆ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಕೃಷಿ, ತೋಟಗಾರಿಕೆ ಕೆಲಸಕ್ಕೆ ತೆರಳುವ ಕೂಲಿ ಕಾರ್ಮಿಕರು ಸೇತುವೆ ಮುಳುಗಡೆಯಾಗಿದ್ದರಿಂದ ಮನೆಗೆ ವಾಪಸ್​ ಆಗಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಉಪವಿಭಾಗಾಧಿಕಾರಿ ರಾಹುಲ್ ಸಂಕನೂರು, ತಹಶೀಲ್ದಾರ್ ಚಾಮರಾಜ ಪಾಟೀಲ್ ನೇತೃತ್ವದ ಕಂದಾಯ ಅಧಿಕಾರಿಗಳ ತಂಡ, ನಡುಗಡ್ಡೆ ಗ್ರಾಮಗಳಿಗೆ ತೆರಳಿ ಪ್ರವಾಹದ ಕುರಿತು ಜನರಿಗೆ ಜಾಗೃತಿ ಮೂಡಿಸಿದ್ದಾರೆ.

ಇದನ್ನೂ ಓದಿ: Watch video: ನಿರಂತರ ಮಳೆಗೆ ಧಾರವಾಡ ತತ್ತರ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಜಾನುವಾರು

ಲಿಂಗಸುಗೂರು (ರಾಯಚೂರು): ನಾರಾಯಣಪುರ ಅಣೆಕಟ್ಟಿನಿಂದ 29 ಕ್ರಸ್ಟ್​​​​​​​ ಗೇಟ್​​ಗಳ ಮೂಲಕ 1.98 ಲಕ್ಷ ಕ್ಯೂಸೆಕ್ ನೀರನ್ನು​ ಕೃಷ್ಣಾ ನದಿಗೆ ಹರಿಬಿಟ್ಟ ಪರಿಣಾಮ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.

ಶೀಲಹಳ್ಳಿ ಸೇತುವೆ ಮುಳುಗಡೆ

ಇದರಿಂದಾಗಿ ಕಡದರಗಡ್ಡಿ, ಯರಗೋಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ನಡುಗಡ್ಡೆ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಕೃಷಿ, ತೋಟಗಾರಿಕೆ ಕೆಲಸಕ್ಕೆ ತೆರಳುವ ಕೂಲಿ ಕಾರ್ಮಿಕರು ಸೇತುವೆ ಮುಳುಗಡೆಯಾಗಿದ್ದರಿಂದ ಮನೆಗೆ ವಾಪಸ್​ ಆಗಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಉಪವಿಭಾಗಾಧಿಕಾರಿ ರಾಹುಲ್ ಸಂಕನೂರು, ತಹಶೀಲ್ದಾರ್ ಚಾಮರಾಜ ಪಾಟೀಲ್ ನೇತೃತ್ವದ ಕಂದಾಯ ಅಧಿಕಾರಿಗಳ ತಂಡ, ನಡುಗಡ್ಡೆ ಗ್ರಾಮಗಳಿಗೆ ತೆರಳಿ ಪ್ರವಾಹದ ಕುರಿತು ಜನರಿಗೆ ಜಾಗೃತಿ ಮೂಡಿಸಿದ್ದಾರೆ.

ಇದನ್ನೂ ಓದಿ: Watch video: ನಿರಂತರ ಮಳೆಗೆ ಧಾರವಾಡ ತತ್ತರ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಜಾನುವಾರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.