ETV Bharat / state

ರೌಡಿಶೀಟರ್​​ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ - undefined

ನಿನ್ನೆ ರಾತ್ರಿ ನಗರದ ರೈಲ್ವೆ ನಿಲ್ದಾಣದಲ್ಲಿ ಹತ್ಯೆಗೀಡಾಗಿದ್ದ ರೌಡಿಶೀಟರ್​ ಲಕ್ಷ್ಮಣ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಹುಡುಕಲು ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ.

ಡಾ.ಸಿ.ಬಿ.ವೇದಮೂರ್ತಿ
author img

By

Published : Jul 6, 2019, 5:15 PM IST

ರಾಯಚೂರು: ನಿನ್ನೆ ನಗರದಲ್ಲಿ ನಡೆದ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಆರು ಜನರ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ ಎಂದು ನಗರದ ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ

ನಗರದ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಡಿ. ನೇತೃತ್ವದಲ್ಲಿ 6 ಜನರ ತಂಡವನ್ನು ರಚನೆ ಮಾಡಿ ಹಂತಕರನ್ನ ಬಂಧಿಸಲು ಬಲೆ ಬೀಸಲಾಗಿದೆ. ಮೂವರು ಶಂಕಿತ ಆರೋಪಿಗಳನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಹಳೆ ವೈಷಮ್ಯ ಮತ್ತು ಹಣದ ವಿಚಾರ ಸೇರಿದಂತೆ ಕೆಲ ವಿಚಾರದಲ್ಲಿನ ಮನಸ್ತಾಪದಿಂದಾಗಿ ಹತ್ಯೆ ನಡೆದಿರಬಹುದೆಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸತ್ಯ ಹೊರ ಬರಲಿದೆ. ಇನ್ನು ಹತ್ಯೆಗೀಡಾದ ಗೇಟ್ ಲಕ್ಷ್ಮಣ ಮೇಲೆ 20 ವಿವಿಧ ಪ್ರಕರಣಗಳು ದಾಖಲಾಗಿದ್ದವು. ನಿನ್ನೆ ರಾತ್ರಿ 8:30ರ ಸುಮಾರಿಗೆ ರೈಲ್ವೆ ನಿಲ್ದಾಣ ಬಳಿ ಅಪರಿಚಿತರು ಮಾರಕಾಸ್ತ್ರಗಳಿಂದ ಗೇಟ್ ಲಕ್ಷ್ಮಣ(45)ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಘಟನೆಗೆ ಸಂಬಂಧಪಟ್ಟಂತೆ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ನಿನ್ನೆ ನಗರದಲ್ಲಿ ನಡೆದ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಆರು ಜನರ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ ಎಂದು ನಗರದ ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ

ನಗರದ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಡಿ. ನೇತೃತ್ವದಲ್ಲಿ 6 ಜನರ ತಂಡವನ್ನು ರಚನೆ ಮಾಡಿ ಹಂತಕರನ್ನ ಬಂಧಿಸಲು ಬಲೆ ಬೀಸಲಾಗಿದೆ. ಮೂವರು ಶಂಕಿತ ಆರೋಪಿಗಳನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಹಳೆ ವೈಷಮ್ಯ ಮತ್ತು ಹಣದ ವಿಚಾರ ಸೇರಿದಂತೆ ಕೆಲ ವಿಚಾರದಲ್ಲಿನ ಮನಸ್ತಾಪದಿಂದಾಗಿ ಹತ್ಯೆ ನಡೆದಿರಬಹುದೆಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸತ್ಯ ಹೊರ ಬರಲಿದೆ. ಇನ್ನು ಹತ್ಯೆಗೀಡಾದ ಗೇಟ್ ಲಕ್ಷ್ಮಣ ಮೇಲೆ 20 ವಿವಿಧ ಪ್ರಕರಣಗಳು ದಾಖಲಾಗಿದ್ದವು. ನಿನ್ನೆ ರಾತ್ರಿ 8:30ರ ಸುಮಾರಿಗೆ ರೈಲ್ವೆ ನಿಲ್ದಾಣ ಬಳಿ ಅಪರಿಚಿತರು ಮಾರಕಾಸ್ತ್ರಗಳಿಂದ ಗೇಟ್ ಲಕ್ಷ್ಮಣ(45)ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಘಟನೆಗೆ ಸಂಬಂಧಪಟ್ಟಂತೆ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸ್ಲಗ್: ಮರ್ಡರ್ ಕೇಸ್, ಕೊಲೆಗಾರರ ಸೆರೆ ೬ ತಂಡಗಳ ರಚನೆ.
ಫಾರ್ಮೇಟ್: ಎವಿಬಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ
ದಿನಾಂಕ: ೦೬-೦೭-೨೦೧೯
ಸ್ಥಳ: ರಾಯಚೂರು

ಆಂಕರ್: ರೌಡಿಶೀಟರ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಕೊಲೆಗಾರರನ್ನು ಬಂಧಿಸಲು ೬ ಜನ ತಂಡ ರಚನೆ ಮಾಡಲಾಗಿದೆ ಎಂದು ಎಸ್ಪಿ ಡಾ.ವೇದಮೂರ್ತಿ ಹೇಳಿದ್ದಾರೆ.Body:ನಗರ ಎಸ್ಪಿಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬುಡಿ ನೇತೃತ್ವದಲ್ಲಿ ೬ ಜನ ತಂಡ ರಚನೆ ಮಾಡಿ ಹಂತಕರನ್ನ ಬಂಧಿಸಲು ಬಲೆ ಬೀಸಲಾಗಿದ್ದು, ಮೂವರು ಶಂಕಿತರ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಹಳೆ ವೈಷ್ಯಮ ಮತ್ತು ಹಣದ ವಿಚಾರ ಸೇರಿದಂತೆ ಕೆಲ ವಿಚಾರದಲ್ಲಿ ಮನಸ್ತಾಪದಿಂದಾಗಿ ಹತ್ಯೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸತ್ಯ ಹೊರ ಬರಲಿದೆ. ಇನ್ನು ಹತ್ಯೆಗೀಡಾದ ಗೇಟ್ ಲಕ್ಷ್ಮಣ ಮೇಲೆ ೨೦ ವಿವಿಧ ಪ್ರಕರಣಗಳು ದಾಖಲಾಗಿದ್ದವು. ನಿನ್ನೆ ರಾತ್ರಿ ೮:೩೦ವರೆ ಸುಮಾರಿಗೆ ರೈಲ್ವೆ ನಿಲ್ದಾಣ ಬಳಿ ಅಪರಿಚಿತರು ಮಾರಕಾಸ್ತ್ರಗಳಿಂದ ಗೇಟ್ ಲಕ್ಷ್ಮಣ(೪೫)ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲು‌ ಆಗಿದೆ.
Conclusion:ಬೈಟ್.೧: ಡಾ.ಸಿ.ಬಿ.ವೇದಮೂರ್ತಿ, ಎಸ್ಪಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.