ETV Bharat / state

ಕೇಂದ್ರ-ರಾಜ್ಯ ಸರ್ಕಾರದಿಂದ ಪರಿಶಿಷ್ಟ ವರ್ಗಗಳನ್ನು ಹತ್ತಿಕ್ಕುವ ಹುನ್ನಾರ : ಸತೀಶ್ ಜಾರಕಿಹೊಳಿ

author img

By

Published : Dec 25, 2020, 2:03 PM IST

ಸಂವಿಧಾನದ ಮೂಲ ಆಶಯಗಳಿಗೆ ತಿಲಾಂಜಲಿ ಹೇಳಲು ಧರ್ಮಾಧರಿತ ವಿಚಾರಗಳಿಂದ ಜನತೆಗೆ ವಂಚಿಸುತ್ತಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಜಾಗೃತಿ ಮೂಡಿಸುವ ಕೆಲಸ ಆರಂಭಿಸಿದೆ. ಕಾಲಘಟ್ಟದಲ್ಲಿ ಜನತೆ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ..

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಲಿಂಗಸುಗೂರು(ರಾಯಚೂರು): ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತವಾಗಿ ಎಸ್​ಸಿ,ಎಸ್​ಟಿಯವರನ್ನು ಹತ್ತಿಕ್ಕುವ ಹುನ್ನಾರ ನಡೆಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪರಿಶಿಷ್ಟ ವರ್ಗಕ್ಕೆ ವಿವಿಧ ಯೋಜನೆಗಳಡಿ ನೀಡುವ ಅನುದಾನ ಅನ್ಯ ಕಾರ್ಯಕ್ಕೆ ಬಳಸುತ್ತಿದ್ದಾರೆ. ಪರಿಶಿಷ್ಟರ ವಿದ್ಯಾರ್ಥಿ ವೇತನ ಕಡಿತಗೊಳಿಸಿದ್ದು ಬಿಜೆಪಿ ತನ್ನ ಸಿದ್ದಾಂತಕ್ಕೆ ವೇದಿಕೆ ನಿರ್ಮಿಸಿಕೊಳ್ಳುತ್ತಿದೆ" ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಸಂವಿಧಾನದ ಮೂಲ ಆಶಯಗಳಿಗೆ ತಿಲಾಂಜಲಿ ಹೇಳಲು ಧರ್ಮಾಧರಿತ ವಿಚಾರಗಳಿಂದ ಜನತೆಗೆ ವಂಚಿಸುತ್ತಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಜಾಗೃತಿ ಮೂಡಿಸುವ ಕೆಲಸ ಆರಂಭಿಸಿದೆ. ಕಾಲಘಟ್ಟದಲ್ಲಿ ಜನತೆ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ. ಪ್ರವಾಹ, ಕೋವಿಡ್​ನಂತಹ ಹಲವು ವಿಚಾರಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾನ್ಯ ಜನರ ನೋವುಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿವೆ ಎಂದರು.

ಲಿಂಗಸುಗೂರು(ರಾಯಚೂರು): ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತವಾಗಿ ಎಸ್​ಸಿ,ಎಸ್​ಟಿಯವರನ್ನು ಹತ್ತಿಕ್ಕುವ ಹುನ್ನಾರ ನಡೆಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪರಿಶಿಷ್ಟ ವರ್ಗಕ್ಕೆ ವಿವಿಧ ಯೋಜನೆಗಳಡಿ ನೀಡುವ ಅನುದಾನ ಅನ್ಯ ಕಾರ್ಯಕ್ಕೆ ಬಳಸುತ್ತಿದ್ದಾರೆ. ಪರಿಶಿಷ್ಟರ ವಿದ್ಯಾರ್ಥಿ ವೇತನ ಕಡಿತಗೊಳಿಸಿದ್ದು ಬಿಜೆಪಿ ತನ್ನ ಸಿದ್ದಾಂತಕ್ಕೆ ವೇದಿಕೆ ನಿರ್ಮಿಸಿಕೊಳ್ಳುತ್ತಿದೆ" ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಸಂವಿಧಾನದ ಮೂಲ ಆಶಯಗಳಿಗೆ ತಿಲಾಂಜಲಿ ಹೇಳಲು ಧರ್ಮಾಧರಿತ ವಿಚಾರಗಳಿಂದ ಜನತೆಗೆ ವಂಚಿಸುತ್ತಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಜಾಗೃತಿ ಮೂಡಿಸುವ ಕೆಲಸ ಆರಂಭಿಸಿದೆ. ಕಾಲಘಟ್ಟದಲ್ಲಿ ಜನತೆ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ. ಪ್ರವಾಹ, ಕೋವಿಡ್​ನಂತಹ ಹಲವು ವಿಚಾರಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾನ್ಯ ಜನರ ನೋವುಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.