ETV Bharat / state

ಶ್ರೀ ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ: ತಿರುಪತಿ ತಿರುಮಲ ದೇವಾಲಯದಿಂದ ಶೇಷ ವಸ್ತ್ರ

author img

By ETV Bharat Karnataka Team

Published : Sep 1, 2023, 12:49 PM IST

Worship of Sri Raghavendra Swami: ಶ್ರೀ ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ನಿಮಿತ್ತ ತಿರುಪತಿ ತಿರುಮಲ ದೇವಸ್ಥಾನದಿಂದ ಶೇಷ ವಸ್ತ್ರ ಆಗಮಿಸಿದ್ದು, ಸ್ವಾಗತಿಸಲಾಗಿದೆ.

ತಿರುಪತಿ ತಿರುಮಲ ದೇವಾಲಯದಿಂದ ಶೇಷ ವಸ್ತ್ರ
ತಿರುಪತಿ ತಿರುಮಲ ದೇವಾಲಯದಿಂದ ಶೇಷ ವಸ್ತ್ರ
ಶ್ರೀ ರಾಘವೇಂದ್ರ ಸ್ವಾಮಿಗಳ ಮಂತ್ರಾಲಯಕ್ಕೆ ತಿರುಪತಿ ತಿರುಮಲ ದೇವಾಲಯದಿಂದ ಶೇಷ ವಸ್ತ್ರ

ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ನಿಮಿತ್ತ ತಿರುಪತಿ ತಿರುಮಲ ದೇವಸ್ಥಾನದಿಂದ ಮಂತ್ರಾಲಯಕ್ಕೆ ಆಗಮಿಸಿದ ಶೇಷ ವಸ್ತ್ರವನ್ನು ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಅಧಿಕಾರಿಗಳು, ಸಿಬ್ಬಂದಿಗಳು ಸ್ವಾಗತಿಸಿದರು.

ಶ್ರೀ ಮಠದ ಆವರಣದಿಂದ ಸಕಲ ವಾದ್ಯಗಳ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶೇಷ ವಸ್ತ್ರವನ್ನು ಸ್ವೀಕರಿಸಿ ತಲೆಯ ಮೇಲೆ ಹೊತ್ತು ಮೂಲ ಬೃಂದಾವನ ಪ್ರದಕ್ಷಿಣೆ ಮಾಡುವ ಮೂಲಕ ರಾಯರಿಗೆ ಸಮರ್ಪಿಸಿದರು.

ನಂತರ ಶ್ರೀಗಳು ಮಾತನಾಡಿ, ಇಂದು ಭೂ ಲೋಕದ ಒಡೆಯ ಶ್ರೀನಿವಾಸ ಶೇಷ ವಸ್ತ್ರದ ಮೂಲಕ ಗುರುರಾಯರ ಸನ್ನಿಧಾನಕ್ಕೆ ಬಂದಿದ್ದಾನೆ. ಕಳೆದ ಅನೇಕ ವರ್ಷಗಳಿಂದ ಗುರುರಾಯರ ಆರಾಧನೆ ಸಮಯದಲ್ಲಿ ಪ್ರತಿ ವರ್ಷ ತಿರುಪತಿಯ ಶ್ರೀನಿವಾಸನ ಸನ್ನಿಧಿಯಿಂದ ಶೇಷ ವಸ್ತ್ರವನ್ನು ಅಲ್ಲಿನ ದೇವಸ್ಥಾನ ಆಡಳಿತ ಮಂಡಳಿ ತಪ್ಪದೇ ವಾಡಿಕೆಯನ್ನು ಪಾಲಿಸುತ್ತ ಬಂದಿದೆ. ನಾಡ ನುಡಿಯಂತೆ ದೇವರು ಎಂದರೆ ತಿರುಪತಿ ತಿಮ್ಮಪ್ಪ. ಗುರುಗಳು ಎಂದರೆ ಮಂತ್ರಾಲಯ ರಾಗಪ್ಪ ಎನ್ನುವ ಹಾಗೆ ತಿರುಪತಿ ಮಂತ್ರಾಲಯ ನಡುವೆ ಅವಿನಾವ ಸಂಬಂಧ ಹೊಂದಿದೆ ಎಂದರು.

ತಿರುಪತಿ ತಿರುಮಲ ದೇವಸ್ಥಾನ-ತಿರುಪತಿ ಜೆ.ಇ.ಒ.ಶ್ರೀ ವೀರ ಬ್ರಮಹೇಂದ್ರ ಮಾತನಾಡಿ ಇಂದು ಗುರುರಾಯರ ಮಧ್ಯಾರಾಧನೆ ಸಮಯದಲ್ಲಿ ತಿರುಪತಿಯಿಂದ ಶೇಷ ವಸ್ತ್ರ ನೀಡುವ ಪರಂಪರೆ ನಡೆದುಕೊಂಡು ಬಂದಿದ್ದು, ಇಂದು ನಾವು ತಿರುಪತಿಯಿಂದ ತಂದ ಶೇಷ ವಸ್ತ್ರವನ್ನು ಶ್ರೀಗಳ ಮೂಲಕ ಗುರುರಾಯರಿಗೆ ಅರ್ಪಿಸಿದ್ದೇವೆ ಎಂದರು.

ಇದೇ ವೇಳೆ ಶ್ರೀಗಳು ಶರತ ಕುಮಾರ, ವರ್ಣಬೇಧ, ಸಾಧನೆಯಲ್ಲಿ ಹಿಂದೆ, ನಾವೆಕೆ ಎಚ್ಚರವಿಲ್ಲ, ಯಾರು ಸಾಧಕರು, ನಮ್ಮಲ್ಲಿ ಇರಬೇಕಾದ ಗುಣಗಳ ಸಮೀಕ್ಷೆ, ನಮ್ಮಲ್ಲಿ ಇರುವ ದೋಷಗಳ ಸಮೀಕ್ಷೆ, ಬೃಹ್ಮ ತತ್ವ, ಬೃಹ್ಮ ಸೋತ್ರ ಭಾಷೆ, ಶ್ರೀ ಪಾದರ 11 ವರ್ಷದ ಸಾಧನೆ ಸೇರಿದಂತೆ ಇತರೆ ಕಿರು ಹೊತ್ತಿಗೆ ಬಿಡುಗಡೆಗೊಳಿಸಿದರು.

ನಿನ್ನೆ ಶ್ರೀರಂಗನಾಥ ಮತ್ತು ನರಸಿಂಹಸ್ವಾಮಿ ದೇವಸ್ಥಾನದಿಂದ ಶೇಷ ವಸ್ತ್ರ: ಗುರುವಾರ ಪೂರ್ವಾರಾಧನೆ ಅಂಗವಾಗಿ ತಮಿಳುನಾಡಿನ ಶ್ರೀ ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನ ಹಾಗೂ ಆಂಧ್ರಪ್ರದೇಶದ ಅಹೋಬಲ ನರಸಿಂಹಸ್ವಾಮಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ತರಲಾದ ಶೇಷ ವಸ್ತ್ರವನ್ನು ಶ್ರೀಮಠದ ಆವರಣದಿಂದ ಸಕಲ ವಾಧ್ಯಗಳ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಶೇಷ ವಸ್ತ್ರವನ್ನು ಸ್ವೀಕರಿಸಿ ರಾಯರಿಗೆ ಸಮರ್ಪಿಸಿದರು. ನಂತರ ಶ್ರೀಗಳು ಮಾತನಾಡಿ, ಶ್ರೀರಂಗಂ-ಅಹೋಬಲ ಕ್ಷೇತ್ರದಿಂದ ಶೇಷ ವಸ್ತ್ರ ಬಂದಿದ್ದು ಗುರುರಾಯರಿಗೆ ಸಮರ್ಪಣೆಯಾಗಿದೆ. ಶೇಷವಸ್ತ್ರದ ಮೂಲಕ ರಾಯರಿಗೆ ದೇವರು ಅನುಗ್ರಹಿಸಿದ್ದಾರೆ. ಅಹೋಬಲ ಕ್ಷೇತ್ರದ ನರಸಿಂಹಸ್ವಾಮಿ ಹಾಗೂ ಶ್ರೀರಂಗಂ ಕ್ಷೇತ್ರದಲ್ಲಿ ಶ್ರೀಮಠ ಅನನ್ಯ ಸಂಬಂಧ ಹೊಂದಿದೆ ಎಂದ್ದಿದ್ದರು.

ಇದನ್ನೂ ಓದಿ: ರಾಯರ 352ನೇ ಆರಾಧನಾ ಮಹೋತ್ಸವ : ಅದ್ಧೂರಿಯಾಗಿ ನಡೆಯುತ್ತಿರುವ ಪೂರ್ವಾರಾಧನೆ

ಶ್ರೀ ರಾಘವೇಂದ್ರ ಸ್ವಾಮಿಗಳ ಮಂತ್ರಾಲಯಕ್ಕೆ ತಿರುಪತಿ ತಿರುಮಲ ದೇವಾಲಯದಿಂದ ಶೇಷ ವಸ್ತ್ರ

ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ನಿಮಿತ್ತ ತಿರುಪತಿ ತಿರುಮಲ ದೇವಸ್ಥಾನದಿಂದ ಮಂತ್ರಾಲಯಕ್ಕೆ ಆಗಮಿಸಿದ ಶೇಷ ವಸ್ತ್ರವನ್ನು ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಅಧಿಕಾರಿಗಳು, ಸಿಬ್ಬಂದಿಗಳು ಸ್ವಾಗತಿಸಿದರು.

ಶ್ರೀ ಮಠದ ಆವರಣದಿಂದ ಸಕಲ ವಾದ್ಯಗಳ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶೇಷ ವಸ್ತ್ರವನ್ನು ಸ್ವೀಕರಿಸಿ ತಲೆಯ ಮೇಲೆ ಹೊತ್ತು ಮೂಲ ಬೃಂದಾವನ ಪ್ರದಕ್ಷಿಣೆ ಮಾಡುವ ಮೂಲಕ ರಾಯರಿಗೆ ಸಮರ್ಪಿಸಿದರು.

ನಂತರ ಶ್ರೀಗಳು ಮಾತನಾಡಿ, ಇಂದು ಭೂ ಲೋಕದ ಒಡೆಯ ಶ್ರೀನಿವಾಸ ಶೇಷ ವಸ್ತ್ರದ ಮೂಲಕ ಗುರುರಾಯರ ಸನ್ನಿಧಾನಕ್ಕೆ ಬಂದಿದ್ದಾನೆ. ಕಳೆದ ಅನೇಕ ವರ್ಷಗಳಿಂದ ಗುರುರಾಯರ ಆರಾಧನೆ ಸಮಯದಲ್ಲಿ ಪ್ರತಿ ವರ್ಷ ತಿರುಪತಿಯ ಶ್ರೀನಿವಾಸನ ಸನ್ನಿಧಿಯಿಂದ ಶೇಷ ವಸ್ತ್ರವನ್ನು ಅಲ್ಲಿನ ದೇವಸ್ಥಾನ ಆಡಳಿತ ಮಂಡಳಿ ತಪ್ಪದೇ ವಾಡಿಕೆಯನ್ನು ಪಾಲಿಸುತ್ತ ಬಂದಿದೆ. ನಾಡ ನುಡಿಯಂತೆ ದೇವರು ಎಂದರೆ ತಿರುಪತಿ ತಿಮ್ಮಪ್ಪ. ಗುರುಗಳು ಎಂದರೆ ಮಂತ್ರಾಲಯ ರಾಗಪ್ಪ ಎನ್ನುವ ಹಾಗೆ ತಿರುಪತಿ ಮಂತ್ರಾಲಯ ನಡುವೆ ಅವಿನಾವ ಸಂಬಂಧ ಹೊಂದಿದೆ ಎಂದರು.

ತಿರುಪತಿ ತಿರುಮಲ ದೇವಸ್ಥಾನ-ತಿರುಪತಿ ಜೆ.ಇ.ಒ.ಶ್ರೀ ವೀರ ಬ್ರಮಹೇಂದ್ರ ಮಾತನಾಡಿ ಇಂದು ಗುರುರಾಯರ ಮಧ್ಯಾರಾಧನೆ ಸಮಯದಲ್ಲಿ ತಿರುಪತಿಯಿಂದ ಶೇಷ ವಸ್ತ್ರ ನೀಡುವ ಪರಂಪರೆ ನಡೆದುಕೊಂಡು ಬಂದಿದ್ದು, ಇಂದು ನಾವು ತಿರುಪತಿಯಿಂದ ತಂದ ಶೇಷ ವಸ್ತ್ರವನ್ನು ಶ್ರೀಗಳ ಮೂಲಕ ಗುರುರಾಯರಿಗೆ ಅರ್ಪಿಸಿದ್ದೇವೆ ಎಂದರು.

ಇದೇ ವೇಳೆ ಶ್ರೀಗಳು ಶರತ ಕುಮಾರ, ವರ್ಣಬೇಧ, ಸಾಧನೆಯಲ್ಲಿ ಹಿಂದೆ, ನಾವೆಕೆ ಎಚ್ಚರವಿಲ್ಲ, ಯಾರು ಸಾಧಕರು, ನಮ್ಮಲ್ಲಿ ಇರಬೇಕಾದ ಗುಣಗಳ ಸಮೀಕ್ಷೆ, ನಮ್ಮಲ್ಲಿ ಇರುವ ದೋಷಗಳ ಸಮೀಕ್ಷೆ, ಬೃಹ್ಮ ತತ್ವ, ಬೃಹ್ಮ ಸೋತ್ರ ಭಾಷೆ, ಶ್ರೀ ಪಾದರ 11 ವರ್ಷದ ಸಾಧನೆ ಸೇರಿದಂತೆ ಇತರೆ ಕಿರು ಹೊತ್ತಿಗೆ ಬಿಡುಗಡೆಗೊಳಿಸಿದರು.

ನಿನ್ನೆ ಶ್ರೀರಂಗನಾಥ ಮತ್ತು ನರಸಿಂಹಸ್ವಾಮಿ ದೇವಸ್ಥಾನದಿಂದ ಶೇಷ ವಸ್ತ್ರ: ಗುರುವಾರ ಪೂರ್ವಾರಾಧನೆ ಅಂಗವಾಗಿ ತಮಿಳುನಾಡಿನ ಶ್ರೀ ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನ ಹಾಗೂ ಆಂಧ್ರಪ್ರದೇಶದ ಅಹೋಬಲ ನರಸಿಂಹಸ್ವಾಮಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ತರಲಾದ ಶೇಷ ವಸ್ತ್ರವನ್ನು ಶ್ರೀಮಠದ ಆವರಣದಿಂದ ಸಕಲ ವಾಧ್ಯಗಳ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಶೇಷ ವಸ್ತ್ರವನ್ನು ಸ್ವೀಕರಿಸಿ ರಾಯರಿಗೆ ಸಮರ್ಪಿಸಿದರು. ನಂತರ ಶ್ರೀಗಳು ಮಾತನಾಡಿ, ಶ್ರೀರಂಗಂ-ಅಹೋಬಲ ಕ್ಷೇತ್ರದಿಂದ ಶೇಷ ವಸ್ತ್ರ ಬಂದಿದ್ದು ಗುರುರಾಯರಿಗೆ ಸಮರ್ಪಣೆಯಾಗಿದೆ. ಶೇಷವಸ್ತ್ರದ ಮೂಲಕ ರಾಯರಿಗೆ ದೇವರು ಅನುಗ್ರಹಿಸಿದ್ದಾರೆ. ಅಹೋಬಲ ಕ್ಷೇತ್ರದ ನರಸಿಂಹಸ್ವಾಮಿ ಹಾಗೂ ಶ್ರೀರಂಗಂ ಕ್ಷೇತ್ರದಲ್ಲಿ ಶ್ರೀಮಠ ಅನನ್ಯ ಸಂಬಂಧ ಹೊಂದಿದೆ ಎಂದ್ದಿದ್ದರು.

ಇದನ್ನೂ ಓದಿ: ರಾಯರ 352ನೇ ಆರಾಧನಾ ಮಹೋತ್ಸವ : ಅದ್ಧೂರಿಯಾಗಿ ನಡೆಯುತ್ತಿರುವ ಪೂರ್ವಾರಾಧನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.