ETV Bharat / state

ಕಡ್ಡಾಯವಾಗಿ ಮತದಾನ ಮಾಡಿ- ಜನತೆಗೆ ಕರೆ ನೀಡಿದ ಶ್ರೀ ಸುಭುದೇಂಧ್ರ ತೀರ್ಥರು - undefined

ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ರಾಯರ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಕರೆ ನೀಡಿದ್ದಾರೆ.

ಶ್ರೀಸುಭುದೇಂಧ್ರ ತೀರ್ಥರು
author img

By

Published : Apr 11, 2019, 5:50 PM IST

ರಾಯಚೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ರಾಯರ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜನತೆಗೆ ಕರೆ ಕೊಟ್ಟಿದ್ದಾರೆ.

ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಜೆೊತೆಜೊತೆಗೆ ನಡೆಯುತ್ತಿದೆ. ಈ ವೇಳೆ ಮಂತ್ರಾಲಯದ ಎಂಪಿಪಿ ಎಲಿಮೆಂಟ್ರಿ ಶಾಲೆಯ ಬೂತ್ ಸಂಖ್ಯೆ-67ರಲ್ಲಿ ಶ್ರೀ ಸುಭುದೇಂದ್ರ ತೀರ್ಥರು ಮತದಾನ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಂವಿಧಾನಬದ್ಧವಾಗಿ ಪ್ರತಿಯೊಬ್ಬರಿಗೆ ನೀಡಿರುವ ಮತದಾನ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದರು.

ಮತದಾನ ಮಾಡಿದ ಶ್ರೀ ಸುಭುದೇಂದ್ರ ತೀರ್ಥರು

ಜನರು ತಮ್ಮ ಅಮೂಲ್ಯವಾದ ಮತವನ್ನು ಯಾವುದೇ ಆಸೆ, ಆಮಿಷಕ್ಕೆ ಒಳಗಾಗಿ ಮಾರಾಟ ಮಾಡಬಾರದು. ಸೂಕ್ತ ಎನಿಸಿದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಜವಾಬ್ದಾರಿ ನಿಭಾಯಿಸಬೇಕೆಂದು ಸ್ವಾಮೀಜಿ ಹೇಳಿದರು.

ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಯಾಗಿ ಅಧಿಕಾರಿ ಸ್ವೀಕರಿಸಿದ ಬಳಿಕ, ಇದೇ ಮೊದಲ ಬಾರಿಗೆ ಮತ ಚಲಾಯಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಮತದಾನ ಮಾಡಲು ತೆರಳಿದ ವೇಳೆ ಶ್ರೀಗಳಿಗೆ ಮಠದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಥ್ ಕೊಟ್ಟರು.

ರಾಯಚೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ರಾಯರ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜನತೆಗೆ ಕರೆ ಕೊಟ್ಟಿದ್ದಾರೆ.

ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಜೆೊತೆಜೊತೆಗೆ ನಡೆಯುತ್ತಿದೆ. ಈ ವೇಳೆ ಮಂತ್ರಾಲಯದ ಎಂಪಿಪಿ ಎಲಿಮೆಂಟ್ರಿ ಶಾಲೆಯ ಬೂತ್ ಸಂಖ್ಯೆ-67ರಲ್ಲಿ ಶ್ರೀ ಸುಭುದೇಂದ್ರ ತೀರ್ಥರು ಮತದಾನ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಂವಿಧಾನಬದ್ಧವಾಗಿ ಪ್ರತಿಯೊಬ್ಬರಿಗೆ ನೀಡಿರುವ ಮತದಾನ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದರು.

ಮತದಾನ ಮಾಡಿದ ಶ್ರೀ ಸುಭುದೇಂದ್ರ ತೀರ್ಥರು

ಜನರು ತಮ್ಮ ಅಮೂಲ್ಯವಾದ ಮತವನ್ನು ಯಾವುದೇ ಆಸೆ, ಆಮಿಷಕ್ಕೆ ಒಳಗಾಗಿ ಮಾರಾಟ ಮಾಡಬಾರದು. ಸೂಕ್ತ ಎನಿಸಿದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಜವಾಬ್ದಾರಿ ನಿಭಾಯಿಸಬೇಕೆಂದು ಸ್ವಾಮೀಜಿ ಹೇಳಿದರು.

ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಯಾಗಿ ಅಧಿಕಾರಿ ಸ್ವೀಕರಿಸಿದ ಬಳಿಕ, ಇದೇ ಮೊದಲ ಬಾರಿಗೆ ಮತ ಚಲಾಯಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಮತದಾನ ಮಾಡಲು ತೆರಳಿದ ವೇಳೆ ಶ್ರೀಗಳಿಗೆ ಮಠದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಥ್ ಕೊಟ್ಟರು.

Intro:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ರಾಯರ ಮಠದ ಪೀಠಾಧಿಪತಿ ಶ್ರೀ ಸುಭುದೇಂಧ್ರ ತೀರ್ಥರು ಕರೆ ನೀಡಿದ್ದಾರೆ.


Body:ಮೊದಲ ಹಂತದಲ್ಲಿ ನಡೆಯುತ್ತಿರುವ ಲೋಕಸಭೆ ಮತ್ತು ವಿಧಾಮಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂತ್ರಾಲಯ ಎಂಪಿಪಿ ಎಲಿಮೆಂಟ್ರಿ ಶಾಲೆಯ ಬೂತ್ ಸಂಖ್ಯೆ-೬೭ರಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ರು. ಸಂವಿಧಾನ ಬದ್ದವಾಗಿ ಪ್ರತಿಯೊಬ್ಬರಿಗೆ ನೀಡಿರುವ ಮತದಾನ ಹಕ್ಕು ಎಲ್ಲಾರ ಕಡ್ಡಾಯವಾಗಿ ಚಲಾಯಿಸಬೇಕು. ಈ ಮೂಲಕ ನಿಮಗೆ ಸೂಕ್ತವಾದ ಅಭ್ಯರ್ಥಿಯನ್ನ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲದೇ ಮತವನ್ನ ಯಾವುದೇ ಆಸೆ, ಆಮೀಷೆಕ್ಕೆ ಒಳಗಾಗದೆ ಮತವನ್ನ ಮಾರಾಟ ಮಾಡಿಕೊಳ್ಳದೆ ನಿಮ್ಮಗೆ ಸೂಕ್ತ ಎನ್ನಿಸಿದ ಅಭ್ಯರ್ಥಿಗೆ ಆಯ್ಕೆ ಮಾಡಿಕೊಳ್ಳಿ ಎಂದು ಕರೆ ನೀಡಿದ್ರು.


Conclusion:ಇನ್ನು ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಯಾಗಿ ಅಧಿಕಾರಿ ಸ್ವೀಕರಿಸಿದ ಬಳಿಕ ಪೀಠಾಧಿಪತಿಯಾಗಿ ಮೊದಲ ಬಾರಿಗೆ ಮತ ಚಲಾಯಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ರು. ಮತದಾನ ಮಾಡಲು ತೆರಳಿದ ವೇಳೆ ಶ್ರೀಗಳಿಗೆ ಮಠದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾಥ್ ನೀಡಿದ್ರು.

ಬೈಟ್.೧: ಶ್ರೀಸುಭುದೇಂಧ್ರ ತೀರ್ಥರು, ಪೀಠಾಧಿಪತಿ, ಶ್ರೀರಾಘವೇಂದ್ರ ಸ್ವಾಮಿ ಮಠ, ಮಂತ್ರಾಲಯ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.