ETV Bharat / state

ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಗೋವಿಂದ ಕಾರಜೋಳ

author img

By

Published : Sep 17, 2019, 12:33 PM IST

ರಾಯಚೂರು ಜಿಲ್ಲೆಯಾದ್ಯಂತ ಕಲ್ಯಾಣ ಕರ್ನಾಟಕ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ರಾಯಚೂರು: ಜಿಲ್ಲೆಯಾದ್ಯಂತ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಯಿತು.

ನಗರದ ಜಿಲ್ಲಾ ಪೊಲೀಸ್ ಡಿ.ಆರ್. ಮೈದಾನದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಗೌರವ ವಂದನೆ ಸ್ವೀಕರಿಸಿದರು. ಪೊಲೀಸರ ಸಶಸ್ತ್ರ ಮೀಸಲು ಪಡೆ, ಹೋಮ್‌ಗಾರ್ಡ್, ನಾನಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಕಲ್ಯಾಣ ಕರ್ನಾಟಕ ಉತ್ಸವ

ಇನ್ನು ಇದುವರೆಗೆ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಬದಲಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. ಈ ವೇಳೆ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಬಸವನಗೌಡ ದದ್ದಲ್, ಬಸವರಾಜ್ ಪಾಟೀಲ್ ಇಟಗಿ, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿ.ಪಂ. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದರು.

ಇದಕ್ಕೂ ಮುನ್ನ ಪಟೇಲ್ ಸರ್ಕಲ್​​ಗೆ ತೆರಳಿ ಉಕ್ಕಿನ ಮನುಷ್ಯ ಸರ್ದಾರ್​​ ವಲ್ಲಭಭಾಯಿ ಪಟೇಲ್ ಭಾವಚಿತ್ರಕ್ಕೆ ಪೂಜೆ ಮಾಡಿ, ಬಳಿಕ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಸಾಥ್ ನೀಡಿದರು.

ರಾಯಚೂರು: ಜಿಲ್ಲೆಯಾದ್ಯಂತ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಯಿತು.

ನಗರದ ಜಿಲ್ಲಾ ಪೊಲೀಸ್ ಡಿ.ಆರ್. ಮೈದಾನದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಗೌರವ ವಂದನೆ ಸ್ವೀಕರಿಸಿದರು. ಪೊಲೀಸರ ಸಶಸ್ತ್ರ ಮೀಸಲು ಪಡೆ, ಹೋಮ್‌ಗಾರ್ಡ್, ನಾನಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಕಲ್ಯಾಣ ಕರ್ನಾಟಕ ಉತ್ಸವ

ಇನ್ನು ಇದುವರೆಗೆ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಬದಲಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. ಈ ವೇಳೆ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಬಸವನಗೌಡ ದದ್ದಲ್, ಬಸವರಾಜ್ ಪಾಟೀಲ್ ಇಟಗಿ, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿ.ಪಂ. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದರು.

ಇದಕ್ಕೂ ಮುನ್ನ ಪಟೇಲ್ ಸರ್ಕಲ್​​ಗೆ ತೆರಳಿ ಉಕ್ಕಿನ ಮನುಷ್ಯ ಸರ್ದಾರ್​​ ವಲ್ಲಭಭಾಯಿ ಪಟೇಲ್ ಭಾವಚಿತ್ರಕ್ಕೆ ಪೂಜೆ ಮಾಡಿ, ಬಳಿಕ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಸಾಥ್ ನೀಡಿದರು.

Intro:ಸ್ಲಗ್: ಡಿಸಿಎಂರಿಂದ ರಾಷ್ಟ್ರ ಧ್ವಜಾರೋಹಣ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೭-೦೯-೨೦೧೯
ಸ್ಥಳ: ರಾಯಚೂರು

ಆಂಕರ್: ರಾಯಚೂರು ಜಿಲ್ಲೆಯಾದ್ಯಂತ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು. Body:ನಗರದ ಜಿಲ್ಲಾ ಪೊಲೀಸ್ ಡಿ.ಆರ್. ಮೈದಾನದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ ಕಲ್ಯಾಣ ಕರ್ನಾಟಕ ಉತ್ಸವದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಷ್ಟ್ರ‌ಧ್ವಜಾರೋಹಣ ನೇರವೇರಿಸಿದ್ರು. ಬಳಿಕ ಗೌರವ ವಂದನೆ ಸ್ವೀಕರಿಸಿದ್ರು. ಪೊಲೀಸ್‌ರ, ಸಶಸ್ತ್ರ ಮೀಸಲು ಪಡೆ, ಹೋಮ್‌ಗಾರ್ಡ್, ನಾನಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಂಥ ಸಂಚಲನ ನಡೆಯಿತು. ಇನ್ನೂ ಇದುವರೆಗೆ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಬದಲಾಗಿ ಕಲ್ಯಾಟ ಕರ್ನಾಟಕ ಉತ್ಸವ ಆಚರಿಸಲಾಯಿತು. ಈ ವೇಳೆ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಬಸವನಗೌಡ ದದ್ದಲ್, ಬಸವರಾಜ್ ಪಾಟೀಲ್ ಇಟಗಿ, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿ.ಪಂ. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದರು. Conclusion:ಇದಕ್ಕೂ ಮುನ್ನ ಪಟೇಲ್ ಸರ್ಕಲ್‌ ತೆರಳಿ, ಉಕ್ಕಿನ ಮುನುಷ್ಯ ಸರದಾರ್ ವಲ್ಲಭಭಾಯಿ ಪಟೇಲ್ ಭಾವಚಿತ್ರಕ್ಕೆ ಪೂಜೆ ಮಾಡಿ, ಬಳಿಕ ಪುತ್ಥಳಿಗೆ ಮಾರ್ಪಣೆ ನೇರವೇರಿಸಿ ಗೌರವ ಸಲ್ಲಿಸಿದ್ರು. ಈ ವೇಳೆ ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸಾಥ್ ನೀಡಿದ್ರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.