ETV Bharat / state

ಮಹಿಳೆ ವಿಚಾರವಾಗಿ ವ್ಯಕ್ತಿ ಕೊಲೆ ಶಂಕೆ: ತುರುವಿಹಾಳ ಠಾಣೆ ಪೊಲೀಸರಿಂದ ಪರಿಶೀಲನೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಹಿಮಾಪುರ ಗ್ರಾಮದ ಬಳಿ ಮಹಿಳೆ ವಿಚಾರವಾಗಿ ವ್ಯಕ್ತಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ತುರುವಿಹಾಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

author img

By

Published : Jan 30, 2022, 2:56 PM IST

Thuruvihala police inspect the place
ರಾಯಚೂರು

ರಾಯಚೂರು: ಮಹಿಳೆ ವಿಚಾರವಾಗಿ ವ್ಯಕ್ತಿಯನ್ನ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮಹಿಮಾಪುರ ಗ್ರಾಮದ ಬಳಿ ನಡೆದಿದೆ.

ಯಮನೂರಪ್ಪ (38) ಕೊಲೆಯಾದ ವ್ಯಕ್ತಿ. ಯು.ಬೊಮ್ಮನಾಳ ಸೀಮಾಂತರದ ಅರಣ್ಯದ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯ ಕುತ್ತಿಗೆಯನ್ನು ಕೊಯ್ದು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನರಗುಂದ ಗಲಾಟೆ ಪ್ರಕರಣ‌.. ಸಿಪಿಐ ನಂದೇಶ್ವರ ಕುಂಬಾರ್ ಅಮಾನತು

ಘಟನಾ ಸ್ಥಳಕ್ಕೆ ತುರುವಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ. ಹತ್ಯೆಗೆ ಕಾರಣವೇನು ಎಂದು ಖಚಿತವಾಗಿ ತಿಳಿದಿಲ್ಲವಾದ್ರೂ, ಮಹಿಳೆ ವಿಚಾರವಾಗಿ ಈ ಘಟನೆ ನಡೆದಿರಬಹುದೆಂದು ಹೇಳಲಾಗುತ್ತಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ರಾಯಚೂರು: ಮಹಿಳೆ ವಿಚಾರವಾಗಿ ವ್ಯಕ್ತಿಯನ್ನ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮಹಿಮಾಪುರ ಗ್ರಾಮದ ಬಳಿ ನಡೆದಿದೆ.

ಯಮನೂರಪ್ಪ (38) ಕೊಲೆಯಾದ ವ್ಯಕ್ತಿ. ಯು.ಬೊಮ್ಮನಾಳ ಸೀಮಾಂತರದ ಅರಣ್ಯದ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯ ಕುತ್ತಿಗೆಯನ್ನು ಕೊಯ್ದು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನರಗುಂದ ಗಲಾಟೆ ಪ್ರಕರಣ‌.. ಸಿಪಿಐ ನಂದೇಶ್ವರ ಕುಂಬಾರ್ ಅಮಾನತು

ಘಟನಾ ಸ್ಥಳಕ್ಕೆ ತುರುವಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ. ಹತ್ಯೆಗೆ ಕಾರಣವೇನು ಎಂದು ಖಚಿತವಾಗಿ ತಿಳಿದಿಲ್ಲವಾದ್ರೂ, ಮಹಿಳೆ ವಿಚಾರವಾಗಿ ಈ ಘಟನೆ ನಡೆದಿರಬಹುದೆಂದು ಹೇಳಲಾಗುತ್ತಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.