ರಾಯಚೂರು: ಜಿಲ್ಲೆಯ ಲಿಂಗಸುಗೂರು ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣ ಬಳಿಯ ಹೆದ್ದಾರಿಗಳ ಮೇಲೆಯೇ ಸಾರಿಗೆ ಸಂಸ್ಥೆ ಬಸ್ಗಳನ್ನು ನಿಲ್ಲಿಸುತ್ತಿದ್ದು, ಸಾರ್ವಜನಿಕರ ಪ್ರಯಾಣಕ್ಕೆ ಭಾರೀ ತೊಂದರೆಯನ್ನುಂಟು ಮಾಡಿದೆ.
ಬಸ್ ನಿಲ್ದಾಣದ ನೂರು ಮೀಟರ್ ವರೆಗೆ ವಾಹನ ನಿಲುಗಡೆಗೆ ನಿಷೇಧವಿದೆ. ಕಾರು, ಜೀಪ್ ಸೇರಿ ಇತರೆ ವಾಹನಗಳು ನಿಂತಾಗ ದಂಡ ವಿಧಿಸುತ್ತಿದ್ದ ಪೊಲೀಸರು ಹಾಗೂ ಬೀದಿ ಬದಿಯಲ್ಲಿರುವ ಗೂಡಂಗಡಿಗಳನ್ನು ತೆರವುಗೊಳಿಸುವ ಪುರಸಭೆ ಅಧಿಕಾರಿಗಳು ಎರಡು ಮುಖ್ಯ ರಸ್ತೆಗಳು ಸಂಪೂರ್ಣ ಅತಿಕ್ರಮಣಗೊಂಡಿದ್ದರೂ ಮೌನಕ್ಕೆ ಶರಣಾಗಿದ್ದಾರೆ. ಟ್ರಾಫಿಕ್ ಜಾಮ್ಗೆ ಸಂಬಂಧಿಸಿ ಸಾರಿಗೆ ಸಂಸ್ಥೆ ಬಸ್ಗಳಿಗೊಂದು ಕಾನೂನು, ಇತರೆ ವಾಹನಗಳಿಗೊಂದು ಕಾನೂನಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಸಾರ್ವಜನಿಕರ ಹಿತಾಸಕ್ತಿ ಕಾಪಾಡಲು ಮುಂದಾಗದಿದ್ದರೆ, ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟಿಸುವುದಾಗಿ ಕೆಲ ಸಂಘಟನೆ ಮುಖಂಡರು ತಿಳಿಸಿದ್ದಾರೆ.