ETV Bharat / state

ಏಮ್ಸ್​ ಸ್ಥಾಪನೆಗೆ ರಕ್ತದಿಂದ ಸಹಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯ - ಏಮ್ಸ್​ ಸ್ಥಾಪನೆಗೆ ಆಗ್ರಹ

ಕಳೆದ 50 ದಿನಗಳಿಂದ ಸತತ ಹೋರಾಟ ನಡೆಸುತ್ತಿರುವ ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಇಂದು ರಕ್ತದ ಸಹಿಯುಳ್ಳ ಪತ್ರಗಳನ್ನು ಕೇಂದ್ರಕ್ಕೆ ಕಳುಹಿಸುವ ಮೂಲಕ ಜಿಲ್ಲೆಯಲ್ಲಿ ಏಮ್ಸ್​ ಸ್ಥಾಪನೆಗೆ ಆಗ್ರಹಿಸಿದೆ.

Protest to Demanding the establishment of AIIMS
ಏಮ್ಸ್​ ಸ್ಥಾಪನೆಗೆ ಆಗ್ರಹಿಸಿ ರಕ್ತದಿಂದ ಸಹಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯ
author img

By

Published : Jul 1, 2022, 7:15 PM IST

ರಾಯಚೂರು: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ರಕ್ತದಿಂದ ಸಹಿ ಸಂಗ್ರಹಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು. ನಗರದ ಮಹಾತ್ಮ ಗಾಂಧೀಜಿ ಪುತ್ಥಳಿಯ ಹತ್ತಿರ ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಕಳೆದ 50 ದಿನದಿಂದ ಸತತ ಹೋರಾಟದ ನಡೆಸುತ್ತಿದೆ. ಇಂದು ಹೋರಾಟ 50ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ, ವಿಶೇಷವಾಗಿ ರಕ್ತದ ಸಹಿಯುಳ್ಳ ಪತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಮೂಲಕ ಹೋರಾಟ ತೀವ್ರಗೊಳಿಸಲಾಯಿತು.

ಕಳೆದ ಹಲವು ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ, ಇಲ್ಲಿವರೆಗೂ ಯಾವುದೇ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದ ಇಂದು 5 ಸಾವಿರಕ್ಕೂ ಅಧಿಕ ಜನರ ರಕ್ತದ ಸಹಿಯುಳ್ಳ ಪತ್ರಗಳನ್ನು, ಕೇಂದ್ರ ಸರ್ಕಾರಕ್ಕೆ ಕಳಿಸುವ ಮೂಲಕ ಚಳವಳಿಯನ್ನು ತೀವ್ರಗೊಳಿಸಿದ್ದಾರೆ. ರಕ್ತದ ಸಹಿ ಮಾಡಲು ಜಿಲ್ಲೆಯ ಹಿರಿಯ ನಾಗರಿಕರು, ವಿವಿಧ ಸಂಘಟನೆಯ ಮುಖಂಡರು, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಯುವಕರು ಭಾಗವಹಿಸಿದ್ದರು.


ನಂಜುಂಡಪ್ಪ ವರದಿಯಂತೆ ಐಐಟಿ ಜಾರಿಯಾಗಬೇಕಿತ್ತು. ಅದು ನಮ್ಮ ಕೈತಪ್ಪಿ ಹೋಗಿದೆ. ಈಗ ಏಮ್ಸ್ ಜಾರಿ ಮಾಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಹಕಾರ ಮಾಡಬೇಕು ಎಂದು ಹೋರಾಟಗಾರರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ : ಬೆಳಗಾವಿ: ಹೊರಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ

ರಾಯಚೂರು: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ರಕ್ತದಿಂದ ಸಹಿ ಸಂಗ್ರಹಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು. ನಗರದ ಮಹಾತ್ಮ ಗಾಂಧೀಜಿ ಪುತ್ಥಳಿಯ ಹತ್ತಿರ ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಕಳೆದ 50 ದಿನದಿಂದ ಸತತ ಹೋರಾಟದ ನಡೆಸುತ್ತಿದೆ. ಇಂದು ಹೋರಾಟ 50ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ, ವಿಶೇಷವಾಗಿ ರಕ್ತದ ಸಹಿಯುಳ್ಳ ಪತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಮೂಲಕ ಹೋರಾಟ ತೀವ್ರಗೊಳಿಸಲಾಯಿತು.

ಕಳೆದ ಹಲವು ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ, ಇಲ್ಲಿವರೆಗೂ ಯಾವುದೇ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದ ಇಂದು 5 ಸಾವಿರಕ್ಕೂ ಅಧಿಕ ಜನರ ರಕ್ತದ ಸಹಿಯುಳ್ಳ ಪತ್ರಗಳನ್ನು, ಕೇಂದ್ರ ಸರ್ಕಾರಕ್ಕೆ ಕಳಿಸುವ ಮೂಲಕ ಚಳವಳಿಯನ್ನು ತೀವ್ರಗೊಳಿಸಿದ್ದಾರೆ. ರಕ್ತದ ಸಹಿ ಮಾಡಲು ಜಿಲ್ಲೆಯ ಹಿರಿಯ ನಾಗರಿಕರು, ವಿವಿಧ ಸಂಘಟನೆಯ ಮುಖಂಡರು, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಯುವಕರು ಭಾಗವಹಿಸಿದ್ದರು.


ನಂಜುಂಡಪ್ಪ ವರದಿಯಂತೆ ಐಐಟಿ ಜಾರಿಯಾಗಬೇಕಿತ್ತು. ಅದು ನಮ್ಮ ಕೈತಪ್ಪಿ ಹೋಗಿದೆ. ಈಗ ಏಮ್ಸ್ ಜಾರಿ ಮಾಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಹಕಾರ ಮಾಡಬೇಕು ಎಂದು ಹೋರಾಟಗಾರರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ : ಬೆಳಗಾವಿ: ಹೊರಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.