ETV Bharat / state

ವಾಚ್​ಮ್ಯಾನ್​​​​ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ - Kittur rani chennamma teacher's Hostel

ಕಿತ್ತೂರು ರಾಣಿ ಚೆನ್ನಮ್ಮ ಬೋಧಕರ ವಸತಿ ನಿಲಯದ ವಾಚ್‌ಮ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ವಾಚ್​ಮ್ಯಾನ್​ ನೇಣುಬಿಗಿದು ಆತ್ಮಹತ್ಯೆ
ವಾಚ್​ಮ್ಯಾನ್​ ನೇಣುಬಿಗಿದು ಆತ್ಮಹತ್ಯೆ
author img

By

Published : Aug 14, 2020, 1:56 PM IST

ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ಬೋಧಕರ ವಸತಿ ನಿಲಯದ ವಾಚ್‌ಮ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವನನ್ನು ಆಂಧ್ರ ಪ್ರದೇಶದ ಕಡಪ ಮೂಲದ ರೆಡ್ಡಿಯೆಂದು ಹೇಳಲಾಗುತ್ತಿದೆ. ನವಲಕಲ್ ಗ್ರಾಮದ ಹೊರವಲಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಆಂಧ್ರದಿಂದ ಬಂದ ಈ ವ್ಯಕ್ತಿ ವಾಚ್‌ಮ್ಯಾನ್ ಕೆಲಸ ಮಾಡುತ್ತಿದ್ದ. ಇದೀಗ ಆತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸದ್ಯ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ಬೋಧಕರ ವಸತಿ ನಿಲಯದ ವಾಚ್‌ಮ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವನನ್ನು ಆಂಧ್ರ ಪ್ರದೇಶದ ಕಡಪ ಮೂಲದ ರೆಡ್ಡಿಯೆಂದು ಹೇಳಲಾಗುತ್ತಿದೆ. ನವಲಕಲ್ ಗ್ರಾಮದ ಹೊರವಲಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಆಂಧ್ರದಿಂದ ಬಂದ ಈ ವ್ಯಕ್ತಿ ವಾಚ್‌ಮ್ಯಾನ್ ಕೆಲಸ ಮಾಡುತ್ತಿದ್ದ. ಇದೀಗ ಆತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸದ್ಯ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.