ETV Bharat / state

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ: ಮಂತ್ರಾಲಯದ ಸ್ನಾನಘಟ್ಟಗಳು ಜಾಲಾವೃತ - Etv Bharat Kannada

ತುಂಗಾಭದ್ರ ನದಿಗೆ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಸಲಾಗಿದ್ದು ಮಂತ್ರಾಲಯದಲ್ಲಿ ಸ್ನಾನಘಟ್ಟಗಳು ಜಾಲಾವೃತವಾಗಿವೆ.

kn_rcr_02_mantaralya_river_ka10035
ಮುಳುಗಡೆಯಾದ ಸ್ನಾನಘಟ್ಟಗಳು
author img

By

Published : Aug 10, 2022, 9:31 PM IST

ರಾಯಚೂರು: ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದೆ. ಹೀಗಾಗಿ, ಮಂತ್ರಾಲಯದ ಸ್ನಾನ ಘಟ್ಟಗಳು ಮುಳುಗಡೆಯಾಗಿವೆ. ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್​ ನೀರನ್ನು ನದಿಗೆ ಬಿಡಲಾಗಿದೆ.

ಮುಳುಗಡೆಯಾದ ಸ್ನಾನಘಟ್ಟಗಳು

ರಾಯ 351ನೇ ಆರಾಧನೆಯ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಸ್ನಾನ ಘಟ್ಟದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಬಟ್ಟೆ ಬದಲಾಯಿಸುವ ಸ್ಥಳವೂ ನೀರಿನಿಂದ ಆವೃತವಾಗಿದೆ. ಗಂಗಾಮತ ದೇವಸ್ಥಾನ ಸುತ್ತಲೂ ನೀರು ತುಂಬಿಕೊಂಡಿದೆ.

ನೀರಿನ ಪ್ರಮಾಣ ಹೆಚ್ಚಾಗಿದ್ದು ಭಕ್ತರು ನೀರಿಗಿಳಿಯದಂತೆ ಎಚ್ಚರಿಸಿ ಮುಂಜಾಗೃತ ಕ್ರಮವಾಗಿ ನದಿಯ ದಡದಲ್ಲಿ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ. ಭಕ್ತರಿಗೆ ಸ್ನಾನಕ್ಕಾಗಿ ನದಿಯ ತೀರದಲ್ಲೇ ಶವರ್​ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು : ನಡುಗಡ್ಡೆಯಲ್ಲಿ ಸಿಲುಕಿದ್ದ ರೈತರ ರಕ್ಷಣೆ

ರಾಯಚೂರು: ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದೆ. ಹೀಗಾಗಿ, ಮಂತ್ರಾಲಯದ ಸ್ನಾನ ಘಟ್ಟಗಳು ಮುಳುಗಡೆಯಾಗಿವೆ. ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್​ ನೀರನ್ನು ನದಿಗೆ ಬಿಡಲಾಗಿದೆ.

ಮುಳುಗಡೆಯಾದ ಸ್ನಾನಘಟ್ಟಗಳು

ರಾಯ 351ನೇ ಆರಾಧನೆಯ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಸ್ನಾನ ಘಟ್ಟದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಬಟ್ಟೆ ಬದಲಾಯಿಸುವ ಸ್ಥಳವೂ ನೀರಿನಿಂದ ಆವೃತವಾಗಿದೆ. ಗಂಗಾಮತ ದೇವಸ್ಥಾನ ಸುತ್ತಲೂ ನೀರು ತುಂಬಿಕೊಂಡಿದೆ.

ನೀರಿನ ಪ್ರಮಾಣ ಹೆಚ್ಚಾಗಿದ್ದು ಭಕ್ತರು ನೀರಿಗಿಳಿಯದಂತೆ ಎಚ್ಚರಿಸಿ ಮುಂಜಾಗೃತ ಕ್ರಮವಾಗಿ ನದಿಯ ದಡದಲ್ಲಿ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ. ಭಕ್ತರಿಗೆ ಸ್ನಾನಕ್ಕಾಗಿ ನದಿಯ ತೀರದಲ್ಲೇ ಶವರ್​ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು : ನಡುಗಡ್ಡೆಯಲ್ಲಿ ಸಿಲುಕಿದ್ದ ರೈತರ ರಕ್ಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.