ETV Bharat / state

ರಾಮನಗರದ 5 ಕಿ.ಮೀ ವ್ಯಾಪ್ತಿ ಬಫರ್​ ಝೋನ್​: ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ - ರಾಮನಗರದ 5 ಕಿ.ಮೀ ವ್ಯಾಪ್ತಿ ಬಫರ್​ ಝೋನ್

ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಆರೋಪಿಗಳಲ್ಲಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ರಾಮನಗರದ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಝೋನ್​ ಎಂದು ಪರಿಗಣಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಪೂರೈಕೆ ಹೊರತು ಇತರೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

5 km Range of Ramanagar Buffer Zone
5 km Range of Ramanagar Buffer Zone
author img

By

Published : Apr 30, 2020, 7:49 AM IST

ರಾಮನಗರ: ಕೇಂದ್ರದ ನಿರ್ದೇಶನ ಅನುಸರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ ಜಿಲ್ಲೆಯಾದ್ಯಂತ ಯಾವುದೇ ಕೈಗಾರಿಕೆಗಳನ್ನು ಪುನರಾರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್ 19 ರಂದು ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಆರೋಪಿಗಳಲ್ಲಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ರಾಮನಗರದ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಜೋನ್ ಎಂದು ಪರಿಗಣಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಪೂರೈಕೆ ಹೊರತು ಇತರೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಮನಗರ ನಗರ ವ್ಯಾಪ್ತಿ ಹೊರತುಪಡಿಸಿ ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರ ವ್ಯಾಪ್ತಿಯಲ್ಲಿ ಮಾಲ್‌ಗಳು ಮತ್ತು ದೊಡ್ಡ ಮಳಿಗೆಗಳು ಹೊರತುಪಡಿಸಿ, ಶಾಪ್ ಆ್ಯಂಡ್​ ಎಸ್ಟಾಬ್ಲಿಶ್​ಮೆಂಟ್​ ಕಾಯ್ದೆಯಡಿ ನೋಂದಾಯಿಸಲಾದ ನೆರೆಹೊರೆ ಅಂಗಡಿಗಳು, ಒಂಟಿ ಅಂಗಡಿಗಳು ಮತ್ತು ವಸತಿ ಸಮುಚ್ಛಯದಲ್ಲಿರುವ ಅಂಗಡಿಗಳನ್ನು ತೆರೆಯಬಹುದಾಗಿದೆ. ಈ ಅಂಗಡಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು ಮತ್ತು ಸಿಬ್ಬಂದಿ ಹಾಗೂ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬಹುದಾಗಿದೆ.

ಗ್ರಾಮೀಣ ಭಾಗದಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಏ. 28 ರಂದು ನೀಡಿರುವ ಆದೇಶವನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಮನಗರ: ಕೇಂದ್ರದ ನಿರ್ದೇಶನ ಅನುಸರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ ಜಿಲ್ಲೆಯಾದ್ಯಂತ ಯಾವುದೇ ಕೈಗಾರಿಕೆಗಳನ್ನು ಪುನರಾರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್ 19 ರಂದು ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಆರೋಪಿಗಳಲ್ಲಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ರಾಮನಗರದ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಜೋನ್ ಎಂದು ಪರಿಗಣಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಪೂರೈಕೆ ಹೊರತು ಇತರೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಮನಗರ ನಗರ ವ್ಯಾಪ್ತಿ ಹೊರತುಪಡಿಸಿ ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರ ವ್ಯಾಪ್ತಿಯಲ್ಲಿ ಮಾಲ್‌ಗಳು ಮತ್ತು ದೊಡ್ಡ ಮಳಿಗೆಗಳು ಹೊರತುಪಡಿಸಿ, ಶಾಪ್ ಆ್ಯಂಡ್​ ಎಸ್ಟಾಬ್ಲಿಶ್​ಮೆಂಟ್​ ಕಾಯ್ದೆಯಡಿ ನೋಂದಾಯಿಸಲಾದ ನೆರೆಹೊರೆ ಅಂಗಡಿಗಳು, ಒಂಟಿ ಅಂಗಡಿಗಳು ಮತ್ತು ವಸತಿ ಸಮುಚ್ಛಯದಲ್ಲಿರುವ ಅಂಗಡಿಗಳನ್ನು ತೆರೆಯಬಹುದಾಗಿದೆ. ಈ ಅಂಗಡಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು ಮತ್ತು ಸಿಬ್ಬಂದಿ ಹಾಗೂ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬಹುದಾಗಿದೆ.

ಗ್ರಾಮೀಣ ಭಾಗದಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಏ. 28 ರಂದು ನೀಡಿರುವ ಆದೇಶವನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.