ETV Bharat / state

ವಿದ್ಯುತ್ ಕಂಬಕ್ಕೆ ಬೈಕ್​​ ಡಿಕ್ಕಿ: ಓರ್ವ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

author img

By

Published : Mar 4, 2020, 10:00 PM IST

ರಾಮನಗರ ತಾಲೂಕಿನ ಶ್ಯಾನಬೋಗನಹಳ್ಳಿ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದ್ದು, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ramanagara
ನಿಯಂತ್ರಣ ತಪ್ಪಿದ ಬೈಕ್ ಸವಾರ ವಿದ್ಯುತ್ ಕಂಬಕ್ಕೆ ಡಿಕ್ಕಿ

ರಾಮನಗರ: ತಾಲೂಕಿನ ಶ್ಯಾನಬೋಗನಹಳ್ಳಿ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದ್ದು, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್​ ಡಿಕ್ಕಿ

ಶಾನುನೋಗನಹಳ್ಳಿಯಲ್ಲಿನ ತಿರುವಿನಲ್ಲಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಅರ್ಜುನ್‌ (21) ಎಂಬಾತ ಮೃತಪಟ್ಟಿದ್ದಾನೆ. ಬೈಕ್​​ ಮೇಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಶರಣ್‌ (21) ಹಾಗೂ ಕೇಶವ (21) ಎಂದು‌ ಗುರುತಿಸಲಾಗಿದೆ.

ಈ ಮೂವರು ಬೈಕಿನಲ್ಲಿ ರಾಮನಗರದಿಂದ ಶ್ಯಾನಬೋಗನಹಳ್ಳಿಗೆ ಹೊರಟಿದ್ದರು. ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಂಬಕ್ಕೆ ಬೈಕ್​ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ: ತಾಲೂಕಿನ ಶ್ಯಾನಬೋಗನಹಳ್ಳಿ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದ್ದು, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್​ ಡಿಕ್ಕಿ

ಶಾನುನೋಗನಹಳ್ಳಿಯಲ್ಲಿನ ತಿರುವಿನಲ್ಲಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಅರ್ಜುನ್‌ (21) ಎಂಬಾತ ಮೃತಪಟ್ಟಿದ್ದಾನೆ. ಬೈಕ್​​ ಮೇಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಶರಣ್‌ (21) ಹಾಗೂ ಕೇಶವ (21) ಎಂದು‌ ಗುರುತಿಸಲಾಗಿದೆ.

ಈ ಮೂವರು ಬೈಕಿನಲ್ಲಿ ರಾಮನಗರದಿಂದ ಶ್ಯಾನಬೋಗನಹಳ್ಳಿಗೆ ಹೊರಟಿದ್ದರು. ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಂಬಕ್ಕೆ ಬೈಕ್​ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.