ETV Bharat / state

ಕನಕಪುರ: ಬೆಳಗ್ಗೆ ವಾಕಿಂಗ್​ಗೆಂದು ಹೋಗಿದ್ದ ಯುವಕ ಶವವಾಗಿ ಬಂದ - ಕಾಡಾನೆ ದಾಳಿಗೆ ಯುವಕ ಬಲಿ

ಕನಕಪುರ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ- ಕಾಡಾನೆಗಳ ದಾಳಿಯಿಂದ ವಾಕಿಂಗ್​ಗೆಂದು ಗೆರಳಿದ್ದ ಸಾವು- ಚೇತನ ಮೃತ ಯುವಕ.

elephant attack
ಯುವಕ ಚೇತನ್ ಕಾಡಾನೆ ದಾಳಿಗೆ ಬಲಿ
author img

By

Published : Dec 25, 2019, 9:59 AM IST

ರಾಮನಗರ: ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಗೆ ಬಲಿಯಾಗಿದ್ದಾನೆ. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ನಿವಾಸಿ ಚೇತನ್ (25) ಮೃತ ಯುವಕ.

ಜಿಲ್ಲೆಯ ಕನಕಪುರ ತಾಲೂಕಿನ ನಾರಾಯಣಪುರ ಗ್ರಾಮದ ಯುವಕ ಚೇತನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿದಿನದಂತೆ ಇಂದು ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ವಾಕಿಂಗ್ ಹೋಗಿದ್ದರು. ನಾಲ್ವರು ಕೋಡಿಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಪಕ್ಕದಲ್ಲಿದ್ದ ಜಮೀನಿನ ಬೇಲಿಯ ಮರೆಯಲ್ಲಿದ್ದ ಕಾಡಾನೆಗಳು ಏಕಾಏಕಿ ದಾಳಿ ನಡೆಸಿವೆ. ತಪ್ಪಿಸಿಕೊಳ್ಳಲು ನಾಲ್ವರು ಓಡಿದ್ದಾರೆ. ಆದರೆ ಚೇತನ ಆನೆ ತುಳಿತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

elephant attack
ಯುವಕ ಚೇತನ್ ಕಾಡಾನೆ ದಾಳಿಗೆ ಬಲಿ

ನಗರಕ್ಕೆ‌ ಕೇವಲ ಕೂಗಳತೆ‌ ದೂರದಲ್ಲಿರುವ ನಾರಾಯಣಪುರ ಕಾಡಂಚಿನ ಗ್ರಾಮವಾಗಿದ್ದು, ಕಾಡಾನೆಗಳ ಈ ದಾಳಿ ನಗರ ಪ್ರದೇಶದ ವಾಸಿಗಳಲ್ಲೂ ಆತಂಕ‌ ಮೂಡಿಸಿದೆ. ಈ ಭಾಗದಲ್ಲಿ ಪದೇ ಪದೇ ಕಾಡಾನೆಗಳು ದಾಳಿ‌ ನಡೆಸಿ, ರೈತರ ಬೆಳೆ ಹಾಳು ಮಾಡುತ್ತಿವೆ. ಅರಣ್ಯಾಧಿಕಾರಿಗಳು ಆನೆ ಹಾವಳಿ ತಪ್ಪಿಸಲು ಕ್ರಮ ಕೈಗೊಂಡಿಲ್ಲ ಎಂದು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಸಂಬಂಧಿಕರಿಗೆ ಹಿಂತಿರುಗಿಸಲಿದ್ದಾರೆ.

ರಾಮನಗರ: ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಗೆ ಬಲಿಯಾಗಿದ್ದಾನೆ. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ನಿವಾಸಿ ಚೇತನ್ (25) ಮೃತ ಯುವಕ.

ಜಿಲ್ಲೆಯ ಕನಕಪುರ ತಾಲೂಕಿನ ನಾರಾಯಣಪುರ ಗ್ರಾಮದ ಯುವಕ ಚೇತನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿದಿನದಂತೆ ಇಂದು ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ವಾಕಿಂಗ್ ಹೋಗಿದ್ದರು. ನಾಲ್ವರು ಕೋಡಿಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಪಕ್ಕದಲ್ಲಿದ್ದ ಜಮೀನಿನ ಬೇಲಿಯ ಮರೆಯಲ್ಲಿದ್ದ ಕಾಡಾನೆಗಳು ಏಕಾಏಕಿ ದಾಳಿ ನಡೆಸಿವೆ. ತಪ್ಪಿಸಿಕೊಳ್ಳಲು ನಾಲ್ವರು ಓಡಿದ್ದಾರೆ. ಆದರೆ ಚೇತನ ಆನೆ ತುಳಿತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

elephant attack
ಯುವಕ ಚೇತನ್ ಕಾಡಾನೆ ದಾಳಿಗೆ ಬಲಿ

ನಗರಕ್ಕೆ‌ ಕೇವಲ ಕೂಗಳತೆ‌ ದೂರದಲ್ಲಿರುವ ನಾರಾಯಣಪುರ ಕಾಡಂಚಿನ ಗ್ರಾಮವಾಗಿದ್ದು, ಕಾಡಾನೆಗಳ ಈ ದಾಳಿ ನಗರ ಪ್ರದೇಶದ ವಾಸಿಗಳಲ್ಲೂ ಆತಂಕ‌ ಮೂಡಿಸಿದೆ. ಈ ಭಾಗದಲ್ಲಿ ಪದೇ ಪದೇ ಕಾಡಾನೆಗಳು ದಾಳಿ‌ ನಡೆಸಿ, ರೈತರ ಬೆಳೆ ಹಾಳು ಮಾಡುತ್ತಿವೆ. ಅರಣ್ಯಾಧಿಕಾರಿಗಳು ಆನೆ ಹಾವಳಿ ತಪ್ಪಿಸಲು ಕ್ರಮ ಕೈಗೊಂಡಿಲ್ಲ ಎಂದು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಸಂಬಂಧಿಕರಿಗೆ ಹಿಂತಿರುಗಿಸಲಿದ್ದಾರೆ.

Intro:Body:ರಾಮನಗರ : ಬೆಳಂಬೆಳಿಗ್ಗೆ ಕಾಡಾನೆ ತುಳಿತಕ್ಕೆ ವಾಯುವಿಹಾರಕ್ಕೆ ತೆರಳಿದ್ದ ಯುವಕನೊರ್ವ ಬಲಿಯಾಗಿದ್ದಾನೆ .ಕನಕಪುರ ತಾಲ್ಲೂಕಿನ ಟಿ.ಬೇಕುಪ್ಪೆ ನಿವಾಸಿ ಚೇತನ್ ( 25) ಮೃತಪಟ್ಟ ಯುವಕ ಎಂದು‌ ಗುರುತಿಸಲಾಗಿದೆ.
ಜಿಲ್ಲೆಯ ಕನಕಪುರ ತಾಲ್ಲೂಕಿನ ನಾರಾಯಣಪುರ ಗ್ರಾಮದ ಯುವಕ ಚೇತನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ, ಪ್ರತಿದಿನದಂತೆ ಇಂದು ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ವಾಕಿಂಗ್ ಹೋಗಿದ್ದ. ನಾಲ್ವರು ಕೋಡಿಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿದ್ದ ಜಮೀನಿನ ಬೇಲಿಯ ಮರೆಯಲ್ಲಿದ್ದ ಕಾಡಾನೆಗಳು ಏಕಾಏಕಿ ದಾಳಿ ನಡೆಸಿವೆ. ಆಕಸ್ಮಿಕ ಆನೆದಾಳಿಯಿಂದ ತಪ್ಪಿಸಿಕೊಳ್ಳಲು ನಾಲ್ವರು ಓಡಿದ್ದಾರೆ ಅದರೆ ಚೇತನ ಆನೆ ತುಳಿತಕ್ಕೆ ಸಿಕ್ಕು ಸ್ಥಳದಲ್ಲೆ ಮೃತಪಟ್ಟಿದಾನೆ.
ನಗರಕ್ಕೆ‌ಕೇವಲ ಕೂಗಳತೆ‌ ದೂರದಲ್ಲಿರುವ ನಾರಾಯಣ ಪುರ ಕಾಂಡಚಿನ ಗ್ರಾಮವಾಗಿದ್ದು , ಕಾಡಾನೆಗಳ ಈ ದಾಳಿ ನಗರ ಪ್ರದೇಶದ ವಾಸಿಗಳಲ್ಲೂ ಆತಂಕ‌ ಮೂಡಿಸಿದೆ. ಈ ಬಾಗದಲ್ಲಿ ಪದೇ ಪದೇ ಕಾಡಾನೆಗಳು ದಾಳಿ‌ನಡೆಸಿ ರೈತರ ಪಲಸನ್ನು ಹಾಳು ಮಾಡುತ್ತಿದ್ದರು ಅರಣ್ಯ ಅಧಿಕಾರಿಗಳು ಆನೆ ಹಾವಳಿ ತಪ್ಪಿಸಲು ಕ್ರಮ ಕೈಗೊಂಡಿಲ್ಲ, ಮುಂದುವರಿದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇಂದು ಯುವಕ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಾರೆ..
ಘಟನೆ ಸಂಬಂಧ ಕನಕಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಮೃತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಮೃತ ಚೇತನ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರಿಕ್ಷೇ ನಡೆಸಿ ಸಿದ್ದತೆ ನಡೆಸಿ ನಂತರ ವಾರಸುದಾರರಿಗೆ ಹಿಂತಿರುಗಿಸಲಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.