ರಾಮನಗರ: ಚನ್ನಪಟ್ಟಣ ಗೊಂಬೆಗಳ ಉದ್ಯಮ ನಶಿಸುತ್ತಿರುವ ಹಿನ್ನೆಲೆ ರಾಮನಗರ - ಚನ್ನಪಟ್ಟಣ ಮಧ್ಯೆ ಆರ್ಟ್ ಅಂಡ್ ಕ್ರಾಫ್ಟ್ ವಿಲೇಜ್ ಮಾಡಬೇಕಿದ್ದು, ಅದರಿಂದಾಗಿ ಉದ್ಯೋಗಗಳು ಸೃಷ್ಟಿಯಾಗುತ್ತೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.
ರಾಮನಗರ ಜಿಲ್ಲೆಯ ಕಲಾ ಕೌಶಲ್ಯತೆ ಉಳಿಯಬೇಕಿದೆ. ಜೂನ್ 1 ರಂದು ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಬೆಳ್ಳಿಹಬ್ಬ ನಡೆಯಲಿದೆ. ಆ ದಿನ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕ್ಯಾಂಪಸ್ಗೆ ಶಂಕು ಸ್ಥಾಪನೆ ನೆರವೇರಲಿದೆ. ಜೊತೆಗೆ ವೈದ್ಯಕೀಯ ಕಾಲೇಜಿನ ಶಂಕುಸ್ಥಾಪನೆ ನಡೆಸುವ ಗುರಿ ಇದೆ. ವಿಶ್ವವಿದ್ಯಾಲಯದ ಜಮೀನಿನ ವಿಚಾರವಾಗಿ ಕೆಲ ಸಮಸ್ಯೆಗಳಿವೆ ಅದನ್ನು ಬಗೆಹರಿಸುವ ವಿಶ್ವಾಸವಿದೆ ಎಂದರು.
ಈ ಭಾಗದ ಜನರ ಬಹುದಿನದ ಕನಸು ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕ್ಯಾಂಪಸ್. ಇದರಿಂದ ಸಾವಿರಾರು ಜನರಿಗೆ ಉದ್ಯೋಗ, ಶಿಕ್ಷಣ ಸಿಗಲಿದೆ. ಈ ಜಿಲ್ಲೆಯ ಜನರೇ ಉದ್ಯೋಗಗಳನ್ನು ಪಡೆಯಬೇಕು ಎಂದರು.