ETV Bharat / state

ಭೂ ಅಕ್ರಮ ಪರಿಶೀಲನೆ ವೇಳೆ ಹೆಚ್​ಡಿಕೆ ಹಿಂಬಾಲಕರಿಂದ ನಮ್ಮ ಮೇಲೆ ಹಲ್ಲೆ: ಹಿರೇಮಠ ಆರೋಪ - S.R.hiremth Allegation of land use

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ಬಿಡದಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 200 ಎಕರೆ ಸರ್ಕಾರಿ ಗೋಮಾಳ ಜಮೀನು ಕಬಳಿಕೆ ಮಾಡಿದ್ದಾರೆ. ಇದು ಸಂವಿಧಾನ‌ ವಿರೋಧಿ‌ ಕೆಲಸ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.

S R hiremath
ಎಸ್​.ಆರ್.ಹಿರೇಮಠ
author img

By

Published : Jan 22, 2020, 11:38 AM IST

ರಾಮನಗರ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ಬಿಡದಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 200 ಎಕರೆ ಸರ್ಕಾರಿ ಗೋಮಾಳ ಜಮೀನು ಕಬಳಿಕೆ ಮಾಡಿದ್ದಾರೆ. ಇದು ಸಂವಿಧಾನ‌ ವಿರೋಧಿ‌ ಕೆಲಸ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.

ಎಸ್​.ಆರ್.ಹಿರೇಮಠ

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉಪ ವಿಭಾಗಾಧಿಕಾರಿ ಲೋಕಾಯುಕ್ತ ತನಿಖೆ ವೇಳೆ ಕೋರ್ಟ್​ಗೆ ಸ್ವವಿವರವಾಗಿ ದಾಖಲೆ ನೀಡಿದ್ದಾರೆ. ಇತ್ತಿಚಿಗೆ ಹೈಕೋರ್ಟ್ ಕೂಡ ಮೂರು ತಿಂಗಳ‌ ಕಾಲಾವಕಾಶ ನೀಡಿ ಸಂಪೂರ್ಣವಾಗಿ ಲೋಕಾಯುಕ್ತ ತನಿಖೆಯಲ್ಲಿ ಹೇಳಿರುವಂತೆ ಕ್ರಮ‌ ಕೈಗೊಳ್ಳಬೇಕೆಂದು ಆದೇಶಿಸಲಾಗಿತ್ತು ಎಂದರು.

ಭೂ ಕಬಳಿಕೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ನೈಜ‌ ಸ್ಥಿತಿ‌ ತಿಳಿಯಲು‌ ಹೋಗಿದ್ದ ವೇಳೆ ಕುಮಾರಸ್ವಾಮಿ ಹಿಂಬಾಲಕರು ನಮ್ಮ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ‌ ನಿಂದಿಸಿದ್ದಾರೆ. ನಾನು ಬಳ್ಳಾರಿ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡಿದ್ದೇನೆ. ಅನೇಕ ಅಕ್ರಮ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಎಲ್ಲಿಯೂ ಒಂದು ಬೆದರಿಕೆ‌ ಕರೆ‌ ಕೂಡ ಬಂದಿರಲಿಲ್ಲ. ಆದರೆ, ಬಿಡದಿ ಪ್ರಕರಣ ನೋಡಿದರೆ ಇದು ಪ್ರಜಾಪ್ರಭುತ್ವ ರಾಷ್ಟವೇ ಎಂಬ ಅನುಮಾನ‌ ಹುಟ್ಟುಹಾಕುವಷ್ಟು ಕೆಟ್ಟದಾಗಿ ನಡೆಸಿಕೊಂಡರು ಎಂದು ಹೇಳಿದರು.

ಯಾರು ಎಷ್ಟೇ ಬೆದರಿಕೆ ಹಾಕಿದರೂ ಕೂಡಾ ನಮ್ಮ ಹೋರಾಟ ಮುಂದುವರಿಯುತ್ತದೆ. ಸಾರ್ವಜನಿಕ ಜೀವನದಲ್ಲಿ ಅಕ್ರಮ ಮಾಡುವವರ ವಿರುದ್ಧ ನಿರಂತರವಾಗಿ ಹೋರಾಟ‌ ಮಾಡಿ ನಿಜವಾದ ಫಲಾನುಭವಿಗಳಿಗೆ ನ್ಯಾಯ ದೊರಕಿಸಿಕೊಡುತ್ತೇವೆ. ರಾಜ್ಯವನ್ನಾಳಿದ ಕುಮಾರಸ್ವಾಮಿ ಬಿಡದಿಯ ಕೇತಗಾನಹಳ್ಳಿಯಲ್ಲಿ 22 ಎಕರೆ ಭೂಮಿ ಖರೀದಿ ಮಾಡಿದ್ದಾರೆ. ಆದರೆ, ಗೋಮಾಳ ಜಮೀನನ್ನ ಖರೀದಿ ಮಾಡಲು, ಮಾರಾಟ ಮಾಡಲು ಸಾಧ್ಯವಿಲ್ಲ. ಜೊತೆಗೆ ಕುಮಾರಸ್ವಾಮಿ ಚಿಕ್ಕಮ್ಮ ಸಾವಿತ್ರಮ್ಮ ಎಂಬುವರು 22 ಎಕರೆ ಖರೀದಿ ಮಾಡಿದ್ದಾರೆ. ನಂತರ ಇವರಿಗೆ ದಾನವಾಗಿ ನೀಡಲಾಗುತ್ತದೆ. ಒಟ್ಟು 54 ಎಕರೆ ಭೂಮಿ ಕುಮಾರಸ್ವಾಮಿಯವರ ಹೆಸರಿನಲ್ಲಿದೆ. ಲೋಕಾಯುಕ್ತದ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ ಎಂದರು.

ಕುಮಾರಸ್ವಾಮಿಯವರ ಸಂಬಂಧಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಕುಟುಂಬದವರು 200 ಎಕರೆ ಭೂ ಕಬಳಿಕೆ ಮಾಡಿದ್ದಾರೆ. ಇದನ್ನ ಮಾಜಿ ಸಂಸದ ಜಿ.ಮಾದೇಗೌಡರು ನಮ್ಮ ಗಮನಕ್ಕೆ ತಂದಿದ್ದಾರೆ ಎಂದು ಎಸ್.ಆರ್.ಹಿರೇಮಠ್ ಹೇಳಿದರು. ಕೂಡಲೇ ಅಕ್ರಮ‌ ಭೂ ಕಬಳಿಕೆ ತೆರವುಗೊಳಿಸಿ ಸರ್ಕಾರಕ್ಕೆ ವಾಪಾಸ್ ನೀಡಿ, ಜನತೆ ಬಳಿ‌ ಕ್ಷಮೆ‌ ಕೋರುವಂತೆ ಒತ್ತಾಯಿಸಿದರು.

ರಾಮನಗರ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ಬಿಡದಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 200 ಎಕರೆ ಸರ್ಕಾರಿ ಗೋಮಾಳ ಜಮೀನು ಕಬಳಿಕೆ ಮಾಡಿದ್ದಾರೆ. ಇದು ಸಂವಿಧಾನ‌ ವಿರೋಧಿ‌ ಕೆಲಸ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.

ಎಸ್​.ಆರ್.ಹಿರೇಮಠ

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉಪ ವಿಭಾಗಾಧಿಕಾರಿ ಲೋಕಾಯುಕ್ತ ತನಿಖೆ ವೇಳೆ ಕೋರ್ಟ್​ಗೆ ಸ್ವವಿವರವಾಗಿ ದಾಖಲೆ ನೀಡಿದ್ದಾರೆ. ಇತ್ತಿಚಿಗೆ ಹೈಕೋರ್ಟ್ ಕೂಡ ಮೂರು ತಿಂಗಳ‌ ಕಾಲಾವಕಾಶ ನೀಡಿ ಸಂಪೂರ್ಣವಾಗಿ ಲೋಕಾಯುಕ್ತ ತನಿಖೆಯಲ್ಲಿ ಹೇಳಿರುವಂತೆ ಕ್ರಮ‌ ಕೈಗೊಳ್ಳಬೇಕೆಂದು ಆದೇಶಿಸಲಾಗಿತ್ತು ಎಂದರು.

ಭೂ ಕಬಳಿಕೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ನೈಜ‌ ಸ್ಥಿತಿ‌ ತಿಳಿಯಲು‌ ಹೋಗಿದ್ದ ವೇಳೆ ಕುಮಾರಸ್ವಾಮಿ ಹಿಂಬಾಲಕರು ನಮ್ಮ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ‌ ನಿಂದಿಸಿದ್ದಾರೆ. ನಾನು ಬಳ್ಳಾರಿ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡಿದ್ದೇನೆ. ಅನೇಕ ಅಕ್ರಮ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಎಲ್ಲಿಯೂ ಒಂದು ಬೆದರಿಕೆ‌ ಕರೆ‌ ಕೂಡ ಬಂದಿರಲಿಲ್ಲ. ಆದರೆ, ಬಿಡದಿ ಪ್ರಕರಣ ನೋಡಿದರೆ ಇದು ಪ್ರಜಾಪ್ರಭುತ್ವ ರಾಷ್ಟವೇ ಎಂಬ ಅನುಮಾನ‌ ಹುಟ್ಟುಹಾಕುವಷ್ಟು ಕೆಟ್ಟದಾಗಿ ನಡೆಸಿಕೊಂಡರು ಎಂದು ಹೇಳಿದರು.

ಯಾರು ಎಷ್ಟೇ ಬೆದರಿಕೆ ಹಾಕಿದರೂ ಕೂಡಾ ನಮ್ಮ ಹೋರಾಟ ಮುಂದುವರಿಯುತ್ತದೆ. ಸಾರ್ವಜನಿಕ ಜೀವನದಲ್ಲಿ ಅಕ್ರಮ ಮಾಡುವವರ ವಿರುದ್ಧ ನಿರಂತರವಾಗಿ ಹೋರಾಟ‌ ಮಾಡಿ ನಿಜವಾದ ಫಲಾನುಭವಿಗಳಿಗೆ ನ್ಯಾಯ ದೊರಕಿಸಿಕೊಡುತ್ತೇವೆ. ರಾಜ್ಯವನ್ನಾಳಿದ ಕುಮಾರಸ್ವಾಮಿ ಬಿಡದಿಯ ಕೇತಗಾನಹಳ್ಳಿಯಲ್ಲಿ 22 ಎಕರೆ ಭೂಮಿ ಖರೀದಿ ಮಾಡಿದ್ದಾರೆ. ಆದರೆ, ಗೋಮಾಳ ಜಮೀನನ್ನ ಖರೀದಿ ಮಾಡಲು, ಮಾರಾಟ ಮಾಡಲು ಸಾಧ್ಯವಿಲ್ಲ. ಜೊತೆಗೆ ಕುಮಾರಸ್ವಾಮಿ ಚಿಕ್ಕಮ್ಮ ಸಾವಿತ್ರಮ್ಮ ಎಂಬುವರು 22 ಎಕರೆ ಖರೀದಿ ಮಾಡಿದ್ದಾರೆ. ನಂತರ ಇವರಿಗೆ ದಾನವಾಗಿ ನೀಡಲಾಗುತ್ತದೆ. ಒಟ್ಟು 54 ಎಕರೆ ಭೂಮಿ ಕುಮಾರಸ್ವಾಮಿಯವರ ಹೆಸರಿನಲ್ಲಿದೆ. ಲೋಕಾಯುಕ್ತದ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ ಎಂದರು.

ಕುಮಾರಸ್ವಾಮಿಯವರ ಸಂಬಂಧಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಕುಟುಂಬದವರು 200 ಎಕರೆ ಭೂ ಕಬಳಿಕೆ ಮಾಡಿದ್ದಾರೆ. ಇದನ್ನ ಮಾಜಿ ಸಂಸದ ಜಿ.ಮಾದೇಗೌಡರು ನಮ್ಮ ಗಮನಕ್ಕೆ ತಂದಿದ್ದಾರೆ ಎಂದು ಎಸ್.ಆರ್.ಹಿರೇಮಠ್ ಹೇಳಿದರು. ಕೂಡಲೇ ಅಕ್ರಮ‌ ಭೂ ಕಬಳಿಕೆ ತೆರವುಗೊಳಿಸಿ ಸರ್ಕಾರಕ್ಕೆ ವಾಪಾಸ್ ನೀಡಿ, ಜನತೆ ಬಳಿ‌ ಕ್ಷಮೆ‌ ಕೋರುವಂತೆ ಒತ್ತಾಯಿಸಿದರು.

Intro:Body:ರಾಮನಗರ: ಬಿಡದಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 200 ಎಕರೆ ಸರ್ಕಾರಿ ಗೋಮಾಳ ಜಮೀನು ಭೂ ಕಬಳಿಕೆಯಾಗಿದೆ ಇದು ಸಂವಿಧಾನ‌ ವಿರೋಧಿ‌ ನಿಲುವು ಇದರಲ್ಲಿ ಪ್ರಮುಖವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದ್ದಾರೆ ಅಲ್ಲದೆ ಸಂಬಂಧಪಟ್ಟ ದಾಖಲೆಗಳಾವುವೂ ಇಲಾಖೆಯಲ್ಲಿ ಲಭ್ಯವಿಲ್ಲವಂತೆ ಎಂದು ಎಸ್.ಆರ್. ಹಿರೇಮಠ್ ಸುದ್ದಿಗೋಷ್ಟಿ ನಡೆಸಿ ಗಂಬೀರ ಆರೋಪ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹಿರೇಮಠ್ ಬಿಡದಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 200 ಎಕರೆ ಸರ್ಕಾರಿ ಗೋಮಾಳ ಭೂ ಕಬಳಿಕೆಯಾಗಿದೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದ ಅವರು ಅಷ್ಟೇ ಅಲ್ಲದೆ ಮಾಜಿ‌ ಮಂತ್ರಿ ಡಿ.ಸಿ ತಮ್ಮಣ್ಣ ಕೂಡ ಇದರಲ್ಲಿ ಪಾಲುದಾರರಾಗಿದ್ದಾರೆ. ಈ ಬಗ್ಗೆ ಈಗಾಗಲೇ ಉಪವಿಭಾಗಾಧಿಕಾರಿ ಲೋಕಾಯುಕ್ತ‌ ತನಿಖೆ ವೇಳೆ ಕೋರ್ಟ್ ಗೆ ಸವಿವರವಾಗಿ ದಾಖಲೆ ನೀಡಿದ್ದಾರೆ. ಇತ್ತಿಚಿಗೆ ಹೈ ಕೋರ್ಟ್ ಕೂಡ ಮೂರು ತಿಂಗಳ‌ ಕಾಲಾವಕಾಶ ನೀಡಿ ಸಂಪೂರ್ಣವಾಗಿ ಲೋಕಾಯುಕ್ತ ತನಿಖೆಯಲ್ಲಿ ಹೇಳಿರುವಂತೆ ಕ್ರಮ‌ಕೈಗೊಳ್ಳಬೇಕೆಂದು ಆದೇಶಿಸಿದೆ ಎಂದರು.
ಭೂ ಕಬಳಿಕೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ನೈಜ‌ ಸ್ಥಿತಿ‌ ತಿಳಿಯಲು‌ ಹೋಗಿದ್ದ ವೇಳೆ ಕುಮಾರಸ್ವಾಮಿ ಹಿಂಬಾಲಕರು ನಮ್ಮ‌ಮೇಲೆ ದೌರ್ಜನ್ಯ ಎಸಗಿದ್ದಾರೆ, ಅವಾಚ್ಯ ಶಬ್ದಗಳಿಂದ‌ ನಿಂದಿಸಿ ಹಲ್ಲೆ ಮಾಡಿದ್ದಾರೆ, ನಾನು ಬಳ್ಳಾರಿ ಸೇರಿದಂತೆ ಹಲವಾರು ಹೋರಾಟಗಳನ್ನ ಮಾಡಿದ್ದೇನೆ ಸ್ಥಳಕ್ಕೆ ಬೇಟಿ ನೀಡಿದ್ದ ವೇಳೆ ನಮ್ಮ‌ಮೇಲೆ‌ ಹಲ್ಲೆಗೆ ಮುಂದಾಗಲಿಲ್ಲ ಒಂದು ಬೆದರಿಕೆ‌ ಕರೆ‌ ಕೂಡ ಬಂದಿರಲಿಲ್ಲ ಆದರೆ ಬಿಡದಿ ಪ್ರಕರಣ ನಿಜಕ್ಕು ನಾವು ಪ್ರಜಾಪ್ರಭುತ್ವ ರಾಷ್ಟದಲ್ಲಿದ್ದೇವೆಯಾ ಎಂಬ ಅನುಮಾನ‌ ಹುಟ್ಟು ಹಾಕಿದೆ ಎಂದರು.
ಯಾರು ಎಷ್ಟೇ ಬೆದರಿಕೆ ಹಾಕಿದರೂ ಕೂಡ ನಮ್ಮ‌ಹೋರಾಟ ಮುಂದುವರಿಯುತ್ತದೆ ಸಾರ್ವಜನಿಕ ಜೀವನದಲ್ಲಿದ್ಧುಕೊಂಡು ಅಕ್ರಮ ಮಾಡುವವರ ವಿರುದ್ದ ನಿರಂತರವಾಗಿ ಹೋರಾಟ‌ ಮಾಡಿ ನಿಜವಾದ ಫಲಾನುಭವಿಗಳಿಗೆ ನ್ಯಾಯ ದೊರಕಿಸಿಕೊಡುತ್ತೇವೆ ಎಂದರು.
ರಾಜ್ಯವನ್ನಾಳಿದ ಕುಮಾರಸ್ವಾಮಿ ಬಿಡದಿಯ ಕೇತಗಾನಹಳ್ಳಿಯಲ್ಲಿ 22 ಎಕರೆ ಭೂಮಿಯನ್ನ ಖರೀದಿ ಮಾಡಿದ್ದಾರೆ. ಆದರೆ ಗೋಮಾಳ ಜಮೀನನ್ನ ಖರೀದಿ ಮಾಡಲು, ಮಾರಾಟ ಮಾಡಲು ಸಾಧ್ಯವಿಲ್ಲ
ಜೊತೆಗೆ ಕುಮಾರಸ್ವಾಮಿ ಚಿಕ್ಕಮ್ಮ ಸಾವಿತ್ರಮ್ಮ ಎಂಬುವರು 22 ಎಕರೆ ಖರೀದಿ ಮಾಡ್ತಾರೆ, ನಂತರ ಇವರಿಗೆ ದಾನ ಮಾಡ್ತಾರೆ, ಒಟ್ಟು 54 ಎಕರೆ ಭೂಮಿ ಕುಮಾರಸ್ವಾಮಿಯವರ ಹೆಸರಿನಲ್ಲಿದೆ
ಲೋಕಾಯುಕ್ತದ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ
ಕುಮಾರಸ್ವಾಮಿಯವರ ಸಂಬಂಧಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಕುಟುಂಬದವರು 200 ಎಕರೆ ಭೂ ಕಬಳಿಕೆ ಮಾಡಿದ್ದಾರೆ ಇದನ್ನ ಮಾಜಿ ಸಂಸದ ಜಿ.ಮಾದೇಗೌಡರು ನಮ್ಮ ಗಮನಕ್ಕೆ ತಂದಿದ್ದಾರೆ ಎಂದು ರಾಮನಗರ ಪ್ರವಾಸಿಮಂದಿರದಲ್ಲಿ ಎಸ್.ಆರ್.ಹಿರೇಮಠ್ ತಿಳಿಸಿದರು.
ಕೂಡಲೆ ಅಕ್ರಮ‌ ಭೂ ಕಬಳಿಕೆ ತೆರವುಗೊಳಿಸಿ ಸರ್ಕಾರಕ್ಕೆ ವಾಪಾಸ್ ನೀಡಿ ,ಜನತೆ ಬಳಿ‌ ಕ್ಷಮೆ‌ ಕೋರುವಂತೆ ಒತ್ತಾಯಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.