ETV Bharat / state

ಹೊಸ ವರ್ಷಾಚರಣೆ: ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬಂದ್

author img

By

Published : Dec 31, 2022, 5:20 PM IST

ಹೊಸ ವರ್ಷಾಚರಣೆ - ಬೆಂಗಳೂರು-ಮೈಸೂರು ಹೆದ್ದಾರಿ ಬಂದ್​- ಸಂಜೆ 5.30ರಿಂದ ನಾಳೆ ಬೆಳಗ್ಗೆ 4 ಗಂಟೆವರೆಗೆ ಸಂಚಾರ ನಿಷೇಧ- ಡ್ರಿಂಕ್​ ಆ್ಯಂಡ್​ ಡ್ರೈವ್​ ತಡೆಯಲು ಕ್ರಮ

bangalore-mysore-highway-closed-due-to-new-year-celebration
ಹೊಸ ವರ್ಷ ಹಿನ್ನಲೆ : ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬಂದ್

ರಾಮನಗರ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಇಂದು ಸಂಜೆ 5.30 ರಿಂದ ನಾಳೆ ಬೆಳಗ್ಗೆ 4 ಗಂಟೆ ವರೆಗೆ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈ ಪಾಸ್ ರಸ್ತೆಯನ್ನು ಬಂದ್ ಮಾಡಲಾಗುವುದು ಎಂದು ರಾಮನಗರ ಎಸ್ಪಿ ಸಂತೋಷ ಬಾಬು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಯಂತೆ ರೆಸಾರ್ಟ್ ಗಳು, ಪಬ್, ರೆಸ್ಟೋರೆಂಟ್, ಬಾರ್ ಮಾಲೀಕರು ನಿಯಮಗಳನ್ನು ಪಾಲಿಸಬೇಕು. ಹೊಸ ವರ್ಷದ ಸಂಭ್ರಮದಲ್ಲಿ ಮದ್ಯ ಸೇವಿಸಿ ಹೆದ್ದಾರಿಯಲ್ಲಿ ವಾಹನ ಚಲಾಯಿಸುತ್ತಾರೆಂದು ಈ ಆದೇಶ ಹೊರಡಿಸಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸುವುದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.

ಮದ್ಯ ಸೇವಿಸಿ ವಾಹನ ಚಲಾವಣೆ ತಡೆಯಲು ಕ್ರಮ : ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯಿಂದ, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಹೊಸದಾಗಿ ನಿರ್ಮಾಣವಾಗಿರುವ ಬೈ ಪಾಸ್ ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತ್ಯುಕೂಪವಾದ ಹೆದ್ದಾರಿ: ನೂತನ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಅತಿ ವೇಗದಿಂದ ನಿತ್ಯ ಒಂದಲ್ಲ ಒಂದು ಕಡೆ ಅಪಘಾತಗಳು ಸಂಭವಿಸಿ, ಸಾವು ನೋವುಗಳು ಉಂಟಾಗುತ್ತಿವೆ. ಹೀಗಾಗಿ ಇದು ಅಪಾಯಕಾರಿ ಹೆದ್ದಾರಿಯಾಗಿ ಮಾರ್ಪಟ್ಟಿದೆ. ಬಹು ಕೋಟಿ ವೆಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣಗೊಂಡಿದೆ. ಹೆದ್ದಾರಿ ಉದ್ಘಾಟನೆಗೂ ಮೊದಲೇ ಮೃತ್ಯುಕೂಪವಾಗಿ ಪರಿಣಮಿಸಿದ್ದು, ದಿನದಿಂದ ದಿನಕ್ಕೆ ಅಪಘಾತಗಳ ಹಾಗೂ ಮೃತಪಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಶೇ.80 ರಷ್ಟು ಕಾಮಗಾರಿ ಪೂರ್ಣ: ಬೆಂಗಳೂರಿನಿಂದ ಮೈಸೂರುವರೆಗೂ ಸುಮಾರು 130 ಕಿಲೋಮೀಟರ್ ದೂರದ ಹೆದ್ದಾರಿ ಕಾಮಗಾರಿ 80ರಷ್ಟು ಮುಗಿದಿದೆ. ಸುಂದರವಾದ ರಸ್ತೆಯಲ್ಲಿ ವಾಹನದ ವೇಗದ ಮಿತಿಗೆ ಇದುವರೆಗೂ ಕಡಿವಾಣ ಬಿದ್ದಿಲ್ಲ. ಹೀಗಾಗಿ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿದೆ.

ಹೆದ್ದಾರಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲಿ ಈ ವರ್ಷ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿರುವ ಅಪಘಾತಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅಂಕಿ - ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ವರ್ಷ 1,262 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 302 ಜನರು ಮೃತಪಟ್ಟಿದ್ದಾರೆ. 1,272 ಮಂದಿ ಗಾಯಗೊಂಡಿದ್ದಾರೆ.

ನೂತನ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಳೆದ ಆರು ತಿಂಗಳಲ್ಲಿ 77 ಅಪಘಾತ ಪ್ರಕರಣಗಳು ಸಂಭವಿಸಿವೆ. ಇದರಲ್ಲಿ 28 ಜನರು ಸಾವಿಗೀಡಾಗಿದ್ದು, 64 ಜನರು ಗಾಯಗೊಂಡಿದ್ದಾರೆ. ನೂತನ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತಗಳು ಕೂಡ ಆತಂಕಕ್ಕೆ ಕಾರಣವಾಗಿದೆ.

ಪೊಲೀಸ್ ಇಲಾಖೆ ಕೂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ವಹಿಸುವುದಾಗಿ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ ಬಾಬು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು...

ರಾಮನಗರ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಇಂದು ಸಂಜೆ 5.30 ರಿಂದ ನಾಳೆ ಬೆಳಗ್ಗೆ 4 ಗಂಟೆ ವರೆಗೆ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈ ಪಾಸ್ ರಸ್ತೆಯನ್ನು ಬಂದ್ ಮಾಡಲಾಗುವುದು ಎಂದು ರಾಮನಗರ ಎಸ್ಪಿ ಸಂತೋಷ ಬಾಬು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಯಂತೆ ರೆಸಾರ್ಟ್ ಗಳು, ಪಬ್, ರೆಸ್ಟೋರೆಂಟ್, ಬಾರ್ ಮಾಲೀಕರು ನಿಯಮಗಳನ್ನು ಪಾಲಿಸಬೇಕು. ಹೊಸ ವರ್ಷದ ಸಂಭ್ರಮದಲ್ಲಿ ಮದ್ಯ ಸೇವಿಸಿ ಹೆದ್ದಾರಿಯಲ್ಲಿ ವಾಹನ ಚಲಾಯಿಸುತ್ತಾರೆಂದು ಈ ಆದೇಶ ಹೊರಡಿಸಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸುವುದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.

ಮದ್ಯ ಸೇವಿಸಿ ವಾಹನ ಚಲಾವಣೆ ತಡೆಯಲು ಕ್ರಮ : ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯಿಂದ, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಹೊಸದಾಗಿ ನಿರ್ಮಾಣವಾಗಿರುವ ಬೈ ಪಾಸ್ ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತ್ಯುಕೂಪವಾದ ಹೆದ್ದಾರಿ: ನೂತನ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಅತಿ ವೇಗದಿಂದ ನಿತ್ಯ ಒಂದಲ್ಲ ಒಂದು ಕಡೆ ಅಪಘಾತಗಳು ಸಂಭವಿಸಿ, ಸಾವು ನೋವುಗಳು ಉಂಟಾಗುತ್ತಿವೆ. ಹೀಗಾಗಿ ಇದು ಅಪಾಯಕಾರಿ ಹೆದ್ದಾರಿಯಾಗಿ ಮಾರ್ಪಟ್ಟಿದೆ. ಬಹು ಕೋಟಿ ವೆಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣಗೊಂಡಿದೆ. ಹೆದ್ದಾರಿ ಉದ್ಘಾಟನೆಗೂ ಮೊದಲೇ ಮೃತ್ಯುಕೂಪವಾಗಿ ಪರಿಣಮಿಸಿದ್ದು, ದಿನದಿಂದ ದಿನಕ್ಕೆ ಅಪಘಾತಗಳ ಹಾಗೂ ಮೃತಪಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಶೇ.80 ರಷ್ಟು ಕಾಮಗಾರಿ ಪೂರ್ಣ: ಬೆಂಗಳೂರಿನಿಂದ ಮೈಸೂರುವರೆಗೂ ಸುಮಾರು 130 ಕಿಲೋಮೀಟರ್ ದೂರದ ಹೆದ್ದಾರಿ ಕಾಮಗಾರಿ 80ರಷ್ಟು ಮುಗಿದಿದೆ. ಸುಂದರವಾದ ರಸ್ತೆಯಲ್ಲಿ ವಾಹನದ ವೇಗದ ಮಿತಿಗೆ ಇದುವರೆಗೂ ಕಡಿವಾಣ ಬಿದ್ದಿಲ್ಲ. ಹೀಗಾಗಿ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿದೆ.

ಹೆದ್ದಾರಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲಿ ಈ ವರ್ಷ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿರುವ ಅಪಘಾತಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅಂಕಿ - ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ವರ್ಷ 1,262 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 302 ಜನರು ಮೃತಪಟ್ಟಿದ್ದಾರೆ. 1,272 ಮಂದಿ ಗಾಯಗೊಂಡಿದ್ದಾರೆ.

ನೂತನ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಳೆದ ಆರು ತಿಂಗಳಲ್ಲಿ 77 ಅಪಘಾತ ಪ್ರಕರಣಗಳು ಸಂಭವಿಸಿವೆ. ಇದರಲ್ಲಿ 28 ಜನರು ಸಾವಿಗೀಡಾಗಿದ್ದು, 64 ಜನರು ಗಾಯಗೊಂಡಿದ್ದಾರೆ. ನೂತನ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತಗಳು ಕೂಡ ಆತಂಕಕ್ಕೆ ಕಾರಣವಾಗಿದೆ.

ಪೊಲೀಸ್ ಇಲಾಖೆ ಕೂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ವಹಿಸುವುದಾಗಿ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ ಬಾಬು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು...

ETV Bharat Logo

Copyright © 2024 Ushodaya Enterprises Pvt. Ltd., All Rights Reserved.