ETV Bharat / state

ಬೇರೆಯವರ ಸಂಕಷ್ಟ ಕಂಡು ಖುಷಿಪಡುವ ವ್ಯಕ್ತಿ ನಾನಲ್ಲ: ಡಿಸಿಎಂ ಕಾರಜೋಳ

author img

By

Published : Sep 3, 2019, 5:13 PM IST

ಬಿಜೆಪಿ ಎಂದಿಗೂ ದ್ವೇಷದ ರಾಜಕೀಯ ಮಾಡುವುದಿಲ್ಲ. ಇಡಿ ಮತ್ತು ಐಟಿ ಸಾಂವಿಧಾನಿಕವಾಗಿ ಕೆಲಸ ಮಾಡುವ ಸಂಸ್ಥೆಗಳು ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎನ್ನುವ ಮೂಲಕ ಡಿಕೆಶಿ ಅವರನ್ನು ಇಡಿ ವಿಚಾರಣೆ ಮಾಡುತ್ತಿರುವುದರಲ್ಲಿ ಬಿಜೆಪಿ ಕೈವಾಡದವಿದೆ ಎಂಬ ಆರೋಪಕ್ಕೆ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆ ನೀಡಿದ್ದಾರೆ.

ಡಿಸಿಎಂ ಕಾರಜೋಳ

ರಾಮನಗರ: ಬಿಜೆಪಿ ಎಂದಿಗೂ ದ್ವೇಷದ ರಾಜಕೀಯ ಮಾಡುವುದಿಲ್ಲ. ಇಡಿ ಮತ್ತು ಐಟಿ ಸಾಂವಿಧಾನಿಕ ಸಂಸ್ಥೆಗಳಾಗಿದ್ದು, ಅಧಿಕಾರಿಗಳು ತಮ್ಮ ಕೆಲಸವನ್ನು ತಾವು ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಡಿಕೆಶಿ ವಿಚಾರಣೆ ಕುರಿತು ಡಿಸಿಎಂ ಹೇಳಿಕೆ

ನಗರದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ ಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅವರೂ ಕೂಡ ಅವರ ತನಿಖೆಗೆ ಸಹಕರಿಸುತ್ತಿದ್ದಾರೆ. ತನಿಖೆ ಬಳಿಕ ತಪ್ಪಿದ್ದರೆ ಶಿಕ್ಷೆಯಾಗುತ್ತೆ. ಇಲ್ಲದಿದ್ದರೆ ಆರೋಪ ಮುಕ್ತರಾಗಿ ಬರುತ್ತಾರೆ. ಆದ್ರೆ ಇದರಲ್ಲಿ ಬಿಜೆಪಿ ಅವರ ಪಾತ್ರ ಏನಿಲ್ಲವೆಂದು ಸ್ಪಷ್ಟಪಡಿಸಿದರು.

ಇನ್ನು, ಬೇರೆಯವರು ಕಷ್ಟದಲ್ಲಿದ್ದಾಗ ನೋಡಿ‌ ಸಂತೋಷ ಪಡುವಷ್ಟು ಕೆಟ್ಟ ಮನುಷ್ಯ ನಾನಲ್ಲ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದರು.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಸಚಿವ ಡಿ.ಕೆ.‌ ಶಿವಕುಮಾರ್​ಗೆ ಕರೆ ಮಾಡಿದ್ದರು ಎಂಬುದು ಶುದ್ಧ ಸುಳ್ಳು. ಕೆಲವರು ಸಾಂದರ್ಭಿಕವಾಗಿ ಮಾತನಾಡುತ್ತಾರೆ. ಇದಕ್ಕೆ ಬೆಲೆ ಕೊಡುವ ಅಗತ್ಯ ಇಲ್ಲವೆಂದು ಎಂಎಲ್​ಸಿ ಸಿ.ಎಂ. ಲಿಂಗಪ್ಪ ಅವರ ಆರೋಪಕ್ಕೆ ಕಾರಜೋಳ ಪ್ರತಿಕ್ರಿಯಿಸಿದರು.

ಬಿಜೆಪಿಯ ಕೆಲ ಶಾಸಕರ ಬಳಿ ಹಣದ ಬೇಡಿಕೆ ಇಟ್ಟಿದ್ದರು‌ ಎಂಬ ಆರೋಪದ ಬಗ್ಗೆ ಸದನದಲ್ಲಿ ಚರ್ಚೆಯಾಗಿತ್ತು. ಈ ವಿಷಯದ ಬಗ್ಗೆ ತನಿಖೆಯಾಗಲಿ ಎಂದು ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದರು. ಅದಕ್ಕೆ ಸಾಕ್ಷಿ ಇದ್ದರೆ ನೀಡಲಿ. ಅಗತ್ಯ ಬಿದ್ದರೆ, ಅದರ ಬಗ್ಗೆಯೂ ತನಿಖೆ ಆಗಲಿ. ಆದ್ರೆ ಡಿಕೆಶಿ ಅವರು ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಹೇಳಿದ್ರು.

ರಾಮನಗರ: ಬಿಜೆಪಿ ಎಂದಿಗೂ ದ್ವೇಷದ ರಾಜಕೀಯ ಮಾಡುವುದಿಲ್ಲ. ಇಡಿ ಮತ್ತು ಐಟಿ ಸಾಂವಿಧಾನಿಕ ಸಂಸ್ಥೆಗಳಾಗಿದ್ದು, ಅಧಿಕಾರಿಗಳು ತಮ್ಮ ಕೆಲಸವನ್ನು ತಾವು ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಡಿಕೆಶಿ ವಿಚಾರಣೆ ಕುರಿತು ಡಿಸಿಎಂ ಹೇಳಿಕೆ

ನಗರದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ ಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅವರೂ ಕೂಡ ಅವರ ತನಿಖೆಗೆ ಸಹಕರಿಸುತ್ತಿದ್ದಾರೆ. ತನಿಖೆ ಬಳಿಕ ತಪ್ಪಿದ್ದರೆ ಶಿಕ್ಷೆಯಾಗುತ್ತೆ. ಇಲ್ಲದಿದ್ದರೆ ಆರೋಪ ಮುಕ್ತರಾಗಿ ಬರುತ್ತಾರೆ. ಆದ್ರೆ ಇದರಲ್ಲಿ ಬಿಜೆಪಿ ಅವರ ಪಾತ್ರ ಏನಿಲ್ಲವೆಂದು ಸ್ಪಷ್ಟಪಡಿಸಿದರು.

ಇನ್ನು, ಬೇರೆಯವರು ಕಷ್ಟದಲ್ಲಿದ್ದಾಗ ನೋಡಿ‌ ಸಂತೋಷ ಪಡುವಷ್ಟು ಕೆಟ್ಟ ಮನುಷ್ಯ ನಾನಲ್ಲ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದರು.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಸಚಿವ ಡಿ.ಕೆ.‌ ಶಿವಕುಮಾರ್​ಗೆ ಕರೆ ಮಾಡಿದ್ದರು ಎಂಬುದು ಶುದ್ಧ ಸುಳ್ಳು. ಕೆಲವರು ಸಾಂದರ್ಭಿಕವಾಗಿ ಮಾತನಾಡುತ್ತಾರೆ. ಇದಕ್ಕೆ ಬೆಲೆ ಕೊಡುವ ಅಗತ್ಯ ಇಲ್ಲವೆಂದು ಎಂಎಲ್​ಸಿ ಸಿ.ಎಂ. ಲಿಂಗಪ್ಪ ಅವರ ಆರೋಪಕ್ಕೆ ಕಾರಜೋಳ ಪ್ರತಿಕ್ರಿಯಿಸಿದರು.

ಬಿಜೆಪಿಯ ಕೆಲ ಶಾಸಕರ ಬಳಿ ಹಣದ ಬೇಡಿಕೆ ಇಟ್ಟಿದ್ದರು‌ ಎಂಬ ಆರೋಪದ ಬಗ್ಗೆ ಸದನದಲ್ಲಿ ಚರ್ಚೆಯಾಗಿತ್ತು. ಈ ವಿಷಯದ ಬಗ್ಗೆ ತನಿಖೆಯಾಗಲಿ ಎಂದು ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದರು. ಅದಕ್ಕೆ ಸಾಕ್ಷಿ ಇದ್ದರೆ ನೀಡಲಿ. ಅಗತ್ಯ ಬಿದ್ದರೆ, ಅದರ ಬಗ್ಗೆಯೂ ತನಿಖೆ ಆಗಲಿ. ಆದ್ರೆ ಡಿಕೆಶಿ ಅವರು ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಹೇಳಿದ್ರು.

Intro:Body:ರಾಮನಗರ: ಬಿಜೆಪಿ ಎಂದಿಗೂ ದ್ವೇಷದ ರಾಜಕೀಯ ಮಾಡುವುದಿಲ್ಲ ಇಡಿ ಮತ್ತು ಐಡಿ‌ ಸಂವಿಧಾನಿಕವಾಗಿ ಕೆಲಸ ಮಾಡುವ ಸಂಸ್ಥೆಗಳು ಅವರ ಕೆಲಸ ಅವರು ಮಾಡುತ್ತಿದ್ದಾರೆ.
ಅದರಲ್ಲಿ ಬಿಜೆಪಿ ಅವರ ಪಾತ್ರ ಏನಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶ್ನಿಸಿದರು.
ನಗರದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಡಿಕೆಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿತ್ತಿದ್ದಾರೆ ಅವರೂ ಕೂಡ ಅವರ ತನಿಖೆಗೆ ಸಹಕರಿಸುತ್ತಿದ್ದಾರೆ ತನಿಖೆ ಬಳಿಕ ತಪ್ಪಿದ್ದರೆ ಶಿಕ್ಷೆಯಾಗುತ್ತೆ ಅಷ್ಟೇ ಎಂದಬಾವರು ಬೇರೆಯವರು ಕಷ್ಟದಲ್ಲಿದ್ದಾಗ ನಾನು ನೋಡಿ‌ ಸಂತೋಷ ಪಡುವಷ್ಟು ಕೆಟ್ಟ ಮನುಷ್ಯ ಅಲ್ಲ . ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರುತ್ತದೆ ಎಂದು ತಿಳಿಸಿದರು.
ಅಮಿತ್ ಶಾ ಡಿ.ಕೆ.‌ಶಿವಕುಮಾರ್ ಗೆ ಕರೆ ಮಾಡಿದ್ದರು ಎಂಬುದು ಶುದ್ದಸುಳ್ಳು ಕೆಲವರು ಸಾಂದರ್ಭಿಕವಾಗಿ ಮಾತನಾಡುತ್ತಾರೆ. ಇದಕ್ಕೆ ಬೆಲೆ ಕೊಡುವ ಅಗತ್ಯ ಇಲ್ಲ ಎಂದು ಎಂಎಲ್ಸಿ ಸಿ.ಎಂ.ಲಿಂಗಪ್ಪ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.
ಬಿಜೆಪಿ ಅವರು ಕೆಲ ಶಾಸಕರ ಬಳಿ ಹಣದ ಬೇಡಿಕೆ ಇಟ್ಟಿದ್ದರು‌ ಎಂಬ ಆರೋಪ ಈ ಬಗ್ಗೆ ಸದನದಲ್ಲಿ ಚರ್ಚೆಯಾಗಿದ್ದ ವಿಷಯ
ಇದರ ಬಗ್ಗೆ ತನಿಖೆಯಾಗಲಿ ಎಂದು ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದರು, ಅದಕ್ಕೆ ಸಾಕ್ಷಿ ಇದ್ದರೆ ನೀಡಲಿ ಅಗತ್ಯ ಬಿದ್ದರೆ, ಅದರ ಬಗ್ಗೆಯೂ ತನಿಖೆ ಆಗಲಿ ಎಂದ ಅವರು ರಾಜಕೀಯ ಉಪಯೋಗಕ್ಕೆ ಮಾತನಾಡುವ ಅವಶ್ಯಕತೆ ಇಲ್ಲ ಎಂದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.