ETV Bharat / state

ಕ್ಷುಲ್ಲಕವಾಗಿ ಮಾತನಾಡಿದರೆ ಬೀದಿಯಲ್ಲಿ ನಿಲ್ಲಿಸಿ ಕೇಳಬೇಕಾಗುತ್ತದೆ: ಹೆಚ್‌ಡಿಕೆ ವಿರುದ್ಧ ಸಿಪಿವೈ ಗರಂ

author img

By

Published : Aug 12, 2022, 10:14 PM IST

ಟೀಕೆ ಮಾಡುವ ಸಂದರ್ಭದಲ್ಲಿ ಅಂಕಿಅಂಶಗಳ ಸಮೇತ ಮಾತನಾಡುವುದನ್ನು ಬಿಟ್ಟು, ತೀರಾ ಕ್ಷುಲ್ಲಕವಾಗಿ ಮಾತನಾಡಿದರೆ ಬೀದಿಯಲ್ಲಿ ನಿಲ್ಲಿಸಿ ಕೇಳಬೇಕಾಗುತ್ತದೆ ಎಂದು ಯೋಗೇಶ್ವರ್ ಹೆಚ್​ಡಿಕೆಗೆ ಎಚ್ಚರಿಕೆ ನೀಡಿದ್ದಾರೆ.

C P Yogeshwara Pressmeet
ಮಾಜಿ ಸಚಿವ ಸಿ.ಪಿ.ಯೋಗೇಶ್ವರ

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಎದುರಾಳಿಗಳನ್ನು ಟೀಕೆ ಮಾಡುವ ಭರದಲ್ಲಿ ವೈಯಕ್ತಿಕ ತೇಜೋವಧೆ ಮಾಡುವುದನ್ನು ಮೈಗೂಡಿಸಿಕೊಂಡಿದ್ದಾರೆ. ವ್ಯಕ್ತಿಯನ್ನು ವೈಯಕ್ತಿಕವಾಗಿ ಟೀಕಿಸುವುದು ಸರ್ವಶ್ರೇಷ್ಠ ರಾಜಕಾರಣಿ ಎಚ್.ಡಿ.ಕುಮಾರಸ್ವಾಮಿ ಅವರ ಗುಣ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಟಾಂಗ್ ಕೊಟ್ಟರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಟೀಕೆ ಮಾಡುವ ಸಂದರ್ಭದಲ್ಲಿ ಅಂಕಿ ಅಂಶಗಳ ಸಮೇತ ಮಾತನಾಡುವುದನ್ನು ಬಿಟ್ಟು, ತೀರ ಕ್ಷುಲ್ಲಕವಾಗಿ ಮಾತನಾಡಿದರೆ, ಬೀದಿಯಲ್ಲಿ ನಿಲ್ಲಿಸಿ ಕೇಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಡಾನೆ ದಾಳಿಗೆ ತಾಲ್ಲೂಕಿನ ಚನ್ನಿಗನ ಹೊಸಹಳ್ಳಿ ರೈತ ಮಹಿಳೆ ಅಸುನೀಗಿದ್ದನ್ನು ಸ್ಮರಿಸಿ ಅವರು ವಿಷಾದ ವ್ಯಕ್ತಪಡಿಸಿದರು. ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಅರಣ್ಯ ಸಚಿವರು ಹಾಗೂ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಸಿದ್ದು, ಈ ಸಮಸ್ಯೆಗೆ ಒಂದು ತಾರ್ಕಿಕ ಅಂತ್ಯ ಕಾಣಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಇದನ್ನೂ ಓದಿ : 'ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ, 150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರ್ತೇವೆ'

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಎದುರಾಳಿಗಳನ್ನು ಟೀಕೆ ಮಾಡುವ ಭರದಲ್ಲಿ ವೈಯಕ್ತಿಕ ತೇಜೋವಧೆ ಮಾಡುವುದನ್ನು ಮೈಗೂಡಿಸಿಕೊಂಡಿದ್ದಾರೆ. ವ್ಯಕ್ತಿಯನ್ನು ವೈಯಕ್ತಿಕವಾಗಿ ಟೀಕಿಸುವುದು ಸರ್ವಶ್ರೇಷ್ಠ ರಾಜಕಾರಣಿ ಎಚ್.ಡಿ.ಕುಮಾರಸ್ವಾಮಿ ಅವರ ಗುಣ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಟಾಂಗ್ ಕೊಟ್ಟರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಟೀಕೆ ಮಾಡುವ ಸಂದರ್ಭದಲ್ಲಿ ಅಂಕಿ ಅಂಶಗಳ ಸಮೇತ ಮಾತನಾಡುವುದನ್ನು ಬಿಟ್ಟು, ತೀರ ಕ್ಷುಲ್ಲಕವಾಗಿ ಮಾತನಾಡಿದರೆ, ಬೀದಿಯಲ್ಲಿ ನಿಲ್ಲಿಸಿ ಕೇಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಡಾನೆ ದಾಳಿಗೆ ತಾಲ್ಲೂಕಿನ ಚನ್ನಿಗನ ಹೊಸಹಳ್ಳಿ ರೈತ ಮಹಿಳೆ ಅಸುನೀಗಿದ್ದನ್ನು ಸ್ಮರಿಸಿ ಅವರು ವಿಷಾದ ವ್ಯಕ್ತಪಡಿಸಿದರು. ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಅರಣ್ಯ ಸಚಿವರು ಹಾಗೂ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಸಿದ್ದು, ಈ ಸಮಸ್ಯೆಗೆ ಒಂದು ತಾರ್ಕಿಕ ಅಂತ್ಯ ಕಾಣಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಇದನ್ನೂ ಓದಿ : 'ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ, 150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರ್ತೇವೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.