ರಾಮನಗರ : ಡಿಕೆ ಬ್ರದರ್ಸ್ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಮನೆಯಲ್ಲಿನ ರೂಂ ಒಂದರ ಬಾಗಿಲು ತೆರೆಯಲು ಕಬ್ಬಿಣದ ಸಲಾಖೆಗಳನ್ನ ಬಳಸಿ ಅಧಿಕಾರಿಗಳು ಮನೆ ರೂಮ್ ಬಾಗಿಲು ಓಪನ್ ಮಾಡಿದ್ದಾರೆ.
ಸಿಬಿಐ ದಾಳಿ ಬಳಿಕ ಮನೆಯ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದೇ ವೇಳೆ, ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರನ್ನ ಟಾರ್ಗೆಟ್ ಮಾಡಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾರ್ಯಕರ್ತರು ಹಾಗೂ ಡಿಕೆ ಬ್ರದರ್ಸ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.