ETV Bharat / state

ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ಯಾಂಪಸ್ ನಿರ್ಮಾಣ ಕಾಮಗಾರಿಗೆ ಸಿಎಂ ಬೊಮ್ಮಾಯಿ ಚಾಲನೆ

author img

By

Published : Mar 27, 2023, 9:45 PM IST

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣ ಕಾಮಗಾರಿ ಸೇರಿದಂತೆ ಜಿಲ್ಲೆಯ ವಿವಿಧ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.

cm-bommai-inaugurates-to-rajiv-gandhi-health-university
ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ರಾಮನಗರ: ಅರ್ಚಕರಹಳ್ಳಿ ಬಳಿಯ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕಳೆದ 16 ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಕ್ಯಾಂಪಸ್ ನಿರ್ಮಾಣವವೇ ಗೊಂದಲದ ಗೂಡಾಗಿತ್ತು. ಎಲ್ಲಾ ಸಮಸ್ಯೆಗಳನ್ನು ಎದುರಿಸಿ, ಪರಿಹಾರ ಒದಗಿಸುವ ಕೆಲಸ ಮಾಡಲಾಗಿದೆ. ನೆನೆಗುದಿಗೆ ಬಿದ್ದಿದ್ದ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ರಾಮನಗರ ಹೊಸ ಜಿಲ್ಲೆಯಾಗಿದ್ದು, ಮೆಡಿಕಲ್ ಕಾಲೇಜು ಸಂಕೀರ್ಣದಿಂದ ಎಲ್ಲ ತಾಲೂಕುಗಳಿಗೂ ಅನುಕೂಲ ಆಗಲಿದೆ. ಹಲವು ಯೋಜನೆಗಳು ಸಾಕಾರಗೊಳ್ಳುತ್ತಿವೆ. ಇದರ ಜೊತೆಗೆ ಹೈಟೆಕ್​ ರೇಷ್ಮೆ ಮಾರುಕಟ್ಟೆ ರಾಜ್ಯದಲ್ಲಿಯೇ ದೊಡ್ಡ ಮಾರುಕಟ್ಟೆಯಾಗಿ ಹೊರಹೊಮ್ಮಲಿದೆ. ಮಾರುಕಟ್ಟೆ ನಿಯಂತ್ರಣ ಸಾಧ್ಯವಾಗಲಿದೆ. ಉತ್ತಮ ಬೆಲೆಯೂ ರೈತರಿಗೆ ಸಿಗಲಿದೆ. ಇನ್ನು ಮಾವು ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದ್ದು ಇದರಿಂದ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಹಿಂದಿನ ಸರ್ಕಾರದ ಘೋಷಣೆಗಳು ಬರೀ ಘೋಷಣೆಗಳೇ ಆಗಿದ್ದವು - ಸಿಎಂ: ಹಿಂದಿನ ಸರ್ಕಾರ ಆರಂಭಿಸಿದ್ದ ಹಲವು ಯೋಜನೆಗಳಿಗೆ 650 ಕೋಟಿ ಅನುದಾನ ನೀಡಿದ್ದೇವೆ. ಯಾವುದೇ ತಾರತಮ್ಯ ಮಾಡಿಲ್ಲ. ಇಲ್ಲಿ 1 ಸಾವಿರ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಆಗಲಿದ್ದು, ಚಿಕಿತ್ಸೆ ಹಾಗೂ ಸಂಶೋಧನೆಗೂ ಸಹಕಾರ ಆಗಲಿದೆ. ಭಾರತದಲ್ಲಿಯೇ ಇದು ಬಹುದೊಡ್ಡ ಆರೋಗ್ಯ ಕೇಂದ್ರವಾಗಿ ಬೆಳೆಯಲಿದೆ. ಈ ಭಾಗದ ಸಮಗ್ರ ಅಭಿವೃದ್ಧಿಗೆ ಕಾರಣರಾದ ಕೆಂಗಲ್‌ ಹನುಮಂತಯ್ಯ ಅವರ ಹೆಸರು ನಾಮಕರಣ ಮಾಡಲು ಸಿಂಡಿಕೇಟ್ ಸಮಿತಿ ಮೂಲಕ ಪ್ರಸ್ತಾವ ಸಲ್ಲಿಸಲು ಸೂಚನೆ ನೀಡಲಾಗುವುದು. ಹಿಂದಿನ ಸರ್ಕಾರದ ಘೋಷಣೆಗಳು ಬರೀ ಘೋಷಣೆಗಳೇ ಆಗಿದ್ದವು. ಆದರೆ ಸಮಾಜಕ್ಕೆ ನ್ಯಾಯ ಸಲ್ಲಿಸುವ ಕೆಲಸ ಆಗಿರಲಿಲ್ಲ. ಭಾಷಣಗಳಿಂದ ಜನರ ಹೊಟ್ಟೆ ತುಂಬುವುದಿಲ್ಲ. ಜನರ ಸಮಸ್ಯೆಗೆ ಪರಿಹಾರ ನೀಡುವ ಜನೋಪಯೋಗಿ ನಾಯಕರು ಸಮಾಜಕ್ಕೆ ಬೇಕಿದೆ ಎಂದು ಹೇಳಿದರು.

ಬೆಂಗಳೂರು - ಮೈಸೂರು ಹೆದ್ದಾರಿ ನಮ್ಮ ಯೋಜನೆ - ಸಿಎಂ: ಬೆಂ-ಮೈ ಹೆದ್ದಾರಿ ಉದ್ಘಾಟನೆ ನಮ್ಮ ಯೋಜನೆ. ಅದರ ಡಿಪಿಆರ್ ಆಗಿದ್ದೇ 2016ರಲ್ಲಿ. ಆಗ ಪ್ರಧಾನಿ ಇದ್ದವರು ಯಾರು? 2019ರಲ್ಲಿ ಅದಕ್ಕೆ ಅಡಿಗಲ್ಲು ಹಾಕಿದವರು ಯಾರು? ತಾವು ಮಾಡದೇ ಇರುವ ಕೆಲಸವನ್ನು ನಾವು‌ ಮಾಡಿದ್ದೇವೆ ಎನ್ನುವರಿಗೆ ನಾಚಿಕೆ ಆಗಬೇಕು. ಎಂದಿಗೂ ಸತ್ಯಕ್ಕೆ ಜಯವೇ ಸಿಗಲಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ಗೆ ತಿರುಗೇಟು ನೀಡಿ ರಾಮನಗರ ರಾಮರಾಜ್ಯ ಆಗಲು ಜನರು ಆಶೀರ್ವಾದ ನೀಡಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದರು.

ಅಲ್ಲದೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದ 54 ಲಕ್ಷ ರೈತರಿಗೆ ಕಳೆದ ನಾಲ್ಕು ವರ್ಷದಲ್ಲಿ 16 ಸಾವಿರ ಕೋಟಿ ನೀಡಲಾಗಿದೆ. ಜಿಲ್ಲೆಯಲ್ಲಿ 4.26 ಲಕ್ಷ ರೈತರಿಗೆ ಈ ನೆರವು ಸಿಕ್ಕಿದೆ. 3600 ಕೋಟಿ ಆವರ್ತ ನಿಧಿಯನ್ನು ಬೆಂಬಲ ಬೆಲೆ ಯೋಜ‌ನೆ ಅಡಿ ಖರೀದಿಗೆ ಇಡಲಾಗಿದೆ. ಈ ಬಜೆಟ್​​ನಲ್ಲಿ ಹಿರಿಯ ನಾಗರಿಕರಿಗೆ ಮನೆ ಮನೆಗೆ ಔಷಧ ವಿತರಣೆ, ಆ್ಯಸಿಡ್ ದಾಳಿ ಸಂತ್ರಸ್ಥರಿಗೆ ಮಾಸಾಶನವನ್ನು 10 ಸಾವಿರಕ್ಕೆ ಏರಿಸಲಾಗಿದೆ. 12 ಹೊಸ ಕಿಮೋ ಥೆರೆಪಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, 270 ಎಕರೆ ವಿಸ್ತೀರ್ಣದಲ್ಲಿ ಈ ಮಹತ್ವದ ಯೋಜನೆಯು 600 ಕೋಟಿ ವೆಚ್ಚದಲ್ಲಿ ಸಾಕಾರಗೊಳ್ಳುತ್ತಿದೆ. ಬೃಹತ್ ರೇಷ್ಮೆ ಮಾರುಕಟ್ಟೆಯು 14 ಎಕರೆ ಜಮೀನಿನಲ್ಲಿ ಸ್ಥಾಪನೆ ಆಗುತ್ತಿದ್ದು, ಒಟ್ಟು 150 ಕೋಟಿ ಅಂದಾಜಿಸಲಾಗಿದೆ. ಮೊದಲ ಹಂತದಲ್ಲಿ 75 ಕೋಟಿ ವೆಚ್ಚದಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಅನುಕೂಲ ಆಗಲಿದೆ ಎಂದರು.

ಈ ಭಾಗದಲ್ಲಿ ಅಂತರ್ಜಲ 1500 ಅಡಿಗಳಿಗೆ ಹೋಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜಲಜೀವನ್ ಮಿಷನ್ ಯೋಜನೆಯನ್ನು 1400 ಕೋಟಿ ವೆಚ್ಚದಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಇದರಿಂದ 1500 ಗ್ರಾಮಗಳ 2 ಲಕ್ಷ ಕುಟುಂಬಗಳಿಗೆ ಅನುಕೂಲ ಆಗಲಿದೆ. ಅಲ್ಲದೆ ವಿವಿಧ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಮುಕ್ತಾಯದ ಹಂತದಲ್ಲಿವೆ. ಶ್ರೀರಂಗ, ಸತ್ತೇಗಾಲ ಯೋಜನೆ ಮುಗಿಯುತ್ತಿದೆ ಎಂದು ತಿಳಿಸಿದರು.

ಅಲ್ಲದೆ ಬೆಂಗಳೂರು ಸುತ್ತ ನಾಲ್ಕು ನವನಗರಗಳ ನಿರ್ಮಾಣಕ್ಕೆ ಸರ್ಕಾರ ಯೋಜಿಸಿದ್ದು, ಬಿಡದಿ ಬಳಿ ಸಹ ಟೌನ್ ಶಿಪ್​ ಮಾಡಲಾಗುವುದು. ಬಿಡದಿ ಹಾಗೂ ಮಾಗಡಿಗೆ ಮೆಟ್ರೊ ವಿಸ್ತರಿಸಲಾಗುವುದು. ಬೈರಾಪಟ್ಟಣದಲ್ಲಿ 10 ಕೋಟಿ ವೆಚ್ಚದಲ್ಲಿ‌ ಮಾವು ಸಂಸ್ಕರಣಾ ಘಟಕಕ್ಕೆ ಚಾಲನೆ ದೊರೆಯಲಿದೆ‌. ಮಾವು ಮೌಲ್ಯವರ್ಧನೆಯಿಂದ ಬೆಳೆಗಾರರಿಗೆ ಅನುಕೂಲ ಆಗುತ್ತಿದೆ. 284 ಕೋಟಿ ಹಣವನ್ನು 1.05 ಲಕ್ಷ ರೈತರಿಗೆ ವರ್ಷಕ್ಕೆ 10 ಸಾವಿರದಂತೆ ನೀಡಲಾಗುತ್ತಿದೆ. 1.25 ಲಕ್ಷ ಜನರಿಗೆ ಮಾಸಾಶನ ನೀಡಲಾಗುತ್ತಿದೆ. ಕೆಂಗಲ್ ಹನುಮಂತಯ್ಯ ಹೆಸರನ್ನು ಇಲ್ಲಿನ ಮೆಡಿಕಲ್ ಕಾಲೇಜಿಗೆ ಇಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:93.40 ಕೋಟಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ.. ಕಾಮಗಾರಿಗೆ ಸಿಎಂ, ಸಚಿವರಿಂದ ಚಾಲನೆ

ರಾಮನಗರ: ಅರ್ಚಕರಹಳ್ಳಿ ಬಳಿಯ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕಳೆದ 16 ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಕ್ಯಾಂಪಸ್ ನಿರ್ಮಾಣವವೇ ಗೊಂದಲದ ಗೂಡಾಗಿತ್ತು. ಎಲ್ಲಾ ಸಮಸ್ಯೆಗಳನ್ನು ಎದುರಿಸಿ, ಪರಿಹಾರ ಒದಗಿಸುವ ಕೆಲಸ ಮಾಡಲಾಗಿದೆ. ನೆನೆಗುದಿಗೆ ಬಿದ್ದಿದ್ದ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ರಾಮನಗರ ಹೊಸ ಜಿಲ್ಲೆಯಾಗಿದ್ದು, ಮೆಡಿಕಲ್ ಕಾಲೇಜು ಸಂಕೀರ್ಣದಿಂದ ಎಲ್ಲ ತಾಲೂಕುಗಳಿಗೂ ಅನುಕೂಲ ಆಗಲಿದೆ. ಹಲವು ಯೋಜನೆಗಳು ಸಾಕಾರಗೊಳ್ಳುತ್ತಿವೆ. ಇದರ ಜೊತೆಗೆ ಹೈಟೆಕ್​ ರೇಷ್ಮೆ ಮಾರುಕಟ್ಟೆ ರಾಜ್ಯದಲ್ಲಿಯೇ ದೊಡ್ಡ ಮಾರುಕಟ್ಟೆಯಾಗಿ ಹೊರಹೊಮ್ಮಲಿದೆ. ಮಾರುಕಟ್ಟೆ ನಿಯಂತ್ರಣ ಸಾಧ್ಯವಾಗಲಿದೆ. ಉತ್ತಮ ಬೆಲೆಯೂ ರೈತರಿಗೆ ಸಿಗಲಿದೆ. ಇನ್ನು ಮಾವು ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದ್ದು ಇದರಿಂದ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಹಿಂದಿನ ಸರ್ಕಾರದ ಘೋಷಣೆಗಳು ಬರೀ ಘೋಷಣೆಗಳೇ ಆಗಿದ್ದವು - ಸಿಎಂ: ಹಿಂದಿನ ಸರ್ಕಾರ ಆರಂಭಿಸಿದ್ದ ಹಲವು ಯೋಜನೆಗಳಿಗೆ 650 ಕೋಟಿ ಅನುದಾನ ನೀಡಿದ್ದೇವೆ. ಯಾವುದೇ ತಾರತಮ್ಯ ಮಾಡಿಲ್ಲ. ಇಲ್ಲಿ 1 ಸಾವಿರ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಆಗಲಿದ್ದು, ಚಿಕಿತ್ಸೆ ಹಾಗೂ ಸಂಶೋಧನೆಗೂ ಸಹಕಾರ ಆಗಲಿದೆ. ಭಾರತದಲ್ಲಿಯೇ ಇದು ಬಹುದೊಡ್ಡ ಆರೋಗ್ಯ ಕೇಂದ್ರವಾಗಿ ಬೆಳೆಯಲಿದೆ. ಈ ಭಾಗದ ಸಮಗ್ರ ಅಭಿವೃದ್ಧಿಗೆ ಕಾರಣರಾದ ಕೆಂಗಲ್‌ ಹನುಮಂತಯ್ಯ ಅವರ ಹೆಸರು ನಾಮಕರಣ ಮಾಡಲು ಸಿಂಡಿಕೇಟ್ ಸಮಿತಿ ಮೂಲಕ ಪ್ರಸ್ತಾವ ಸಲ್ಲಿಸಲು ಸೂಚನೆ ನೀಡಲಾಗುವುದು. ಹಿಂದಿನ ಸರ್ಕಾರದ ಘೋಷಣೆಗಳು ಬರೀ ಘೋಷಣೆಗಳೇ ಆಗಿದ್ದವು. ಆದರೆ ಸಮಾಜಕ್ಕೆ ನ್ಯಾಯ ಸಲ್ಲಿಸುವ ಕೆಲಸ ಆಗಿರಲಿಲ್ಲ. ಭಾಷಣಗಳಿಂದ ಜನರ ಹೊಟ್ಟೆ ತುಂಬುವುದಿಲ್ಲ. ಜನರ ಸಮಸ್ಯೆಗೆ ಪರಿಹಾರ ನೀಡುವ ಜನೋಪಯೋಗಿ ನಾಯಕರು ಸಮಾಜಕ್ಕೆ ಬೇಕಿದೆ ಎಂದು ಹೇಳಿದರು.

ಬೆಂಗಳೂರು - ಮೈಸೂರು ಹೆದ್ದಾರಿ ನಮ್ಮ ಯೋಜನೆ - ಸಿಎಂ: ಬೆಂ-ಮೈ ಹೆದ್ದಾರಿ ಉದ್ಘಾಟನೆ ನಮ್ಮ ಯೋಜನೆ. ಅದರ ಡಿಪಿಆರ್ ಆಗಿದ್ದೇ 2016ರಲ್ಲಿ. ಆಗ ಪ್ರಧಾನಿ ಇದ್ದವರು ಯಾರು? 2019ರಲ್ಲಿ ಅದಕ್ಕೆ ಅಡಿಗಲ್ಲು ಹಾಕಿದವರು ಯಾರು? ತಾವು ಮಾಡದೇ ಇರುವ ಕೆಲಸವನ್ನು ನಾವು‌ ಮಾಡಿದ್ದೇವೆ ಎನ್ನುವರಿಗೆ ನಾಚಿಕೆ ಆಗಬೇಕು. ಎಂದಿಗೂ ಸತ್ಯಕ್ಕೆ ಜಯವೇ ಸಿಗಲಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ಗೆ ತಿರುಗೇಟು ನೀಡಿ ರಾಮನಗರ ರಾಮರಾಜ್ಯ ಆಗಲು ಜನರು ಆಶೀರ್ವಾದ ನೀಡಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದರು.

ಅಲ್ಲದೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದ 54 ಲಕ್ಷ ರೈತರಿಗೆ ಕಳೆದ ನಾಲ್ಕು ವರ್ಷದಲ್ಲಿ 16 ಸಾವಿರ ಕೋಟಿ ನೀಡಲಾಗಿದೆ. ಜಿಲ್ಲೆಯಲ್ಲಿ 4.26 ಲಕ್ಷ ರೈತರಿಗೆ ಈ ನೆರವು ಸಿಕ್ಕಿದೆ. 3600 ಕೋಟಿ ಆವರ್ತ ನಿಧಿಯನ್ನು ಬೆಂಬಲ ಬೆಲೆ ಯೋಜ‌ನೆ ಅಡಿ ಖರೀದಿಗೆ ಇಡಲಾಗಿದೆ. ಈ ಬಜೆಟ್​​ನಲ್ಲಿ ಹಿರಿಯ ನಾಗರಿಕರಿಗೆ ಮನೆ ಮನೆಗೆ ಔಷಧ ವಿತರಣೆ, ಆ್ಯಸಿಡ್ ದಾಳಿ ಸಂತ್ರಸ್ಥರಿಗೆ ಮಾಸಾಶನವನ್ನು 10 ಸಾವಿರಕ್ಕೆ ಏರಿಸಲಾಗಿದೆ. 12 ಹೊಸ ಕಿಮೋ ಥೆರೆಪಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, 270 ಎಕರೆ ವಿಸ್ತೀರ್ಣದಲ್ಲಿ ಈ ಮಹತ್ವದ ಯೋಜನೆಯು 600 ಕೋಟಿ ವೆಚ್ಚದಲ್ಲಿ ಸಾಕಾರಗೊಳ್ಳುತ್ತಿದೆ. ಬೃಹತ್ ರೇಷ್ಮೆ ಮಾರುಕಟ್ಟೆಯು 14 ಎಕರೆ ಜಮೀನಿನಲ್ಲಿ ಸ್ಥಾಪನೆ ಆಗುತ್ತಿದ್ದು, ಒಟ್ಟು 150 ಕೋಟಿ ಅಂದಾಜಿಸಲಾಗಿದೆ. ಮೊದಲ ಹಂತದಲ್ಲಿ 75 ಕೋಟಿ ವೆಚ್ಚದಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಅನುಕೂಲ ಆಗಲಿದೆ ಎಂದರು.

ಈ ಭಾಗದಲ್ಲಿ ಅಂತರ್ಜಲ 1500 ಅಡಿಗಳಿಗೆ ಹೋಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜಲಜೀವನ್ ಮಿಷನ್ ಯೋಜನೆಯನ್ನು 1400 ಕೋಟಿ ವೆಚ್ಚದಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಇದರಿಂದ 1500 ಗ್ರಾಮಗಳ 2 ಲಕ್ಷ ಕುಟುಂಬಗಳಿಗೆ ಅನುಕೂಲ ಆಗಲಿದೆ. ಅಲ್ಲದೆ ವಿವಿಧ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಮುಕ್ತಾಯದ ಹಂತದಲ್ಲಿವೆ. ಶ್ರೀರಂಗ, ಸತ್ತೇಗಾಲ ಯೋಜನೆ ಮುಗಿಯುತ್ತಿದೆ ಎಂದು ತಿಳಿಸಿದರು.

ಅಲ್ಲದೆ ಬೆಂಗಳೂರು ಸುತ್ತ ನಾಲ್ಕು ನವನಗರಗಳ ನಿರ್ಮಾಣಕ್ಕೆ ಸರ್ಕಾರ ಯೋಜಿಸಿದ್ದು, ಬಿಡದಿ ಬಳಿ ಸಹ ಟೌನ್ ಶಿಪ್​ ಮಾಡಲಾಗುವುದು. ಬಿಡದಿ ಹಾಗೂ ಮಾಗಡಿಗೆ ಮೆಟ್ರೊ ವಿಸ್ತರಿಸಲಾಗುವುದು. ಬೈರಾಪಟ್ಟಣದಲ್ಲಿ 10 ಕೋಟಿ ವೆಚ್ಚದಲ್ಲಿ‌ ಮಾವು ಸಂಸ್ಕರಣಾ ಘಟಕಕ್ಕೆ ಚಾಲನೆ ದೊರೆಯಲಿದೆ‌. ಮಾವು ಮೌಲ್ಯವರ್ಧನೆಯಿಂದ ಬೆಳೆಗಾರರಿಗೆ ಅನುಕೂಲ ಆಗುತ್ತಿದೆ. 284 ಕೋಟಿ ಹಣವನ್ನು 1.05 ಲಕ್ಷ ರೈತರಿಗೆ ವರ್ಷಕ್ಕೆ 10 ಸಾವಿರದಂತೆ ನೀಡಲಾಗುತ್ತಿದೆ. 1.25 ಲಕ್ಷ ಜನರಿಗೆ ಮಾಸಾಶನ ನೀಡಲಾಗುತ್ತಿದೆ. ಕೆಂಗಲ್ ಹನುಮಂತಯ್ಯ ಹೆಸರನ್ನು ಇಲ್ಲಿನ ಮೆಡಿಕಲ್ ಕಾಲೇಜಿಗೆ ಇಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:93.40 ಕೋಟಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ.. ಕಾಮಗಾರಿಗೆ ಸಿಎಂ, ಸಚಿವರಿಂದ ಚಾಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.