ETV Bharat / state

ಬಜರಂಗದಳ ನಿಷೇಧ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಮತ ಕಳೆದುಕೊಳ್ಳಲಿದೆ​: ಆರ್ ಅಶೋಕ್

author img

By

Published : May 4, 2023, 3:38 PM IST

ಕಾಂಗ್ರೆಸ್​​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದಾರೆ, ಇದು ಇಡೀ ಕಾಂಗ್ರೆಸ್ ಅ​​​​ನ್ನು ಸುಟ್ಟು ಸರ್ವನಾಶ ಮಾಡುತ್ತದೆ‌ ಎಂದು ಸಚಿವ ಆರ್​​.ಅಶೋಕ್​​​ ಕನಕಪುರದಲ್ಲಿ ವಾಗ್ದಾಳಿ ನಡೆಸಿದರು.

congress-will-be-annihilated-in-the-country-says-r-ashok
ಕಾಂಗ್ರೆಸ್​​​​ ದೇಶದಲ್ಲಿ ಸರ್ವನಾಶವಾಗುತ್ತದೆ: ಕನಕಪುರದಲ್ಲಿ ಆರ್.ಅಶೋಕ್ ವಾಗ್ದಾಳಿ

ಕನಕಪುರದಲ್ಲಿ ಆರ್.ಅಶೋಕ್ ವಾಗ್ದಾಳಿ

ರಾಮನಗರ: ಈ ಬಾರಿ ಕನಕಪುರದ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ವಿರೋಧಿ ಅಲೆ ಇದೆ. ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ ಎಂದು ಕಂದಾಯ ಸಚಿವ, ಬಿಜೆಪಿ ಅಭ್ಯರ್ಥಿ ಆರ್​​ ಅಶೋಕ್ ಕಾಂಗ್ರೆಸ್​​ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಲ್ಲೆಯ ಕನಕಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ಬಿಜೆಪಿಗೆ ಬೂತ್ ಏಜೆಂಟ್ ಇಲ್ಲ ಎಂದು ಕಾಂಗ್ರೆಸ್​​​​ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಕನಕಪುರ ಡಿ ಕೆ ಶಿವಕುಮಾರ್ ಅವರ ಕಪಿ ಮುಷ್ಠಿಯಲ್ಲಿದೆ. ಅದರಿಂದ ಜನರು ಹೊರಗಡೆ ಬರಲು ತೀರ್ಮಾನ ಮಾಡಿದ್ದಾರೆ. ಎಲ್ಲಾ ಬೂತ್​​​ಗಳಲ್ಲೂ ಕೂಡ ನಮ್ಮ ಏಜೆಂಟ್​​ಗಳು ಇರುತ್ತಾರೆ. ಕಾಂಗ್ರೆಸ್​​​ ಮತಗಳು ಕೂಡ ಬಿಜೆಪಿಗೆ ಬರಲಿದೆ ಎಂದರು.

ಸೂಕ್ಷ್ಮ ಮತಗಟ್ಟೆಗಳಲ್ಲಿ ಬಿಎಸ್​​ಎಫ್ ನಿಯೋಜನೆ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಸೂಕ್ತ ಭದ್ರತೆಯೊಂದಿಗೆ ಚುನಾವಣೆ ನಡೆಯಲಿದೆ ಎಂದರು. ಕನಕಪುರದಲ್ಲಿ 8ನೇ ದಿನ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಸಂಘಟನೆ ಉದ್ದೇಶದಿಂದ ಪಕ್ಷ ಇಲ್ಲಿ ನನ್ನನ್ನು ಕಣಕ್ಕಿಳಿಸಿದೆ. ಇದೇ 8 ರಂದು ಅಮಿತ್ ಶಾ ಅವರು ಕನಕಪುರಕ್ಕೆ ಆಗಮಿಸುವ ಸಾಧ್ಯತೆ ಇದೆ. ನಾಳೆ ಸಂಸದ ತೇಜಸ್ವಿ ಸೂರ್ಯ ಬಂದು ಪ್ರಚಾರ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

ಬಜರಂಗದಳ ಬ್ಯಾನ್ ವಿಚಾರವಾಗಿ ವಾಗ್ದಾಳಿ ನಡೆಸಿದ ಅಶೋಕ್: ಬಜರಂಗದಳ ನಿಷೇಧ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳ್ಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು. ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್​​ ಅವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಎಲ್ಲ ಕಡೆ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಕಡೆ ಹನುಮಾನ್ ಚಾಲೀಸಾ ಪಠಣೆ ಮಾಡಲಾಗುತ್ತದೆ. ಕಾಂಗ್ರೆಸ್​​​​ ದೇಶದಲ್ಲಿ ಸರ್ವನಾಶವಾಗುತ್ತದೆ ಎಂದು ಅಶೋಕ್​ ಭವಿಷ್ಯ ನುಡಿದರು.

ರಾಜಕೀಯಕ್ಕೆ ಬರುವ ಮೊದಲು ನಾನು ಬಜರಂಗದಳದ ಕಾರ್ಯಕರ್ತ.‌ ಈಗಲೂ ಕೂಡ ನಾನು ಬಜರಂಗದಳದಲ್ಲಿ ಇದ್ದೇನೆ. ಎಲ್ಲರೂ ಕೂಡ ಆರ್​​ಎಸ್​​ಎಸ್ ಬಜರಂಗದಳದಿಂದ ಬಂದಿರೋದು. ನಿಮಗೆ ತಾಕತ್ತು, ಧಮ್ ಇದೆಯಾ ಬಜರಂಗದಳ ಬ್ಯಾನ್ ಮಾಡೋಕೆ.?, ಕಾಂಗ್ರೆಸ್ ಸಂಸ್ಕೃತಿ ಪಾಕಿಸ್ತಾನಕ್ಕೆ ಜೈ ಅನ್ನುವ ಸಂಸ್ಕಾರ ನಮ್ಮದಲ್ಲ. ಹಾಗೆಯೇ ಕಾಂಗ್ರೆಸ್​​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸ್ ಅ​​​​ನ್ನು ಸುಟ್ಟು ಸರ್ವನಾಶ ಮಾಡುತ್ತದೆ‌. ಕನಕಪುರದಲ್ಲಿ‌ ಮುನೇಶ್ವರ ಬೆಟ್ಟವನ್ನು ಏಸು ಶಿಲುಬೆ ಮಾಡೋಕೆ ಹೊರಟಿದ್ದರು. ಇದೀಗ ಆಂಜನೇಯನ ಸುದ್ದಿಗೆ ಬಂದಿದ್ದೀರಿ. ಮುಂದಿನ ದಿನಗಳಲ್ಲಿ ಮಹಿಳೆಯರು ಕುಂಕುಮ ಇಡೋದಕ್ಕೂ ಇವರು ಬಿಡೊಲ್ಲ ಎಂದು ಸಚಿವ ಅಶೋಕ್​ ಕಿಡಿಕಾರಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ವಿಷ ಸರ್ಪ ಎಂದಿದ್ದಾರೆ. ಒಬ್ಬ ಪ್ರಧಾನಿ ಬಗ್ಗೆ ಮಾತನಾಡಬೇಕಾದರೆ ಯೋಚನೆ ಮಾಡಬೇಕು. ಇಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಬಾರದು‌. ಈ ಎಲ್ಲಾ ಕಾಂಗ್ರೆಸ್​​​ ನಾಯಕರ ಹೇಳಿಕೆಯಿಂದ ಕಾಂಗ್ರೆಸ್ ಅದೋಗತಿಗೆ ಬಂದಿದೆ. ದೇಶ ಕಾಂಗ್ರೆಸ್​​​ ಮುಕ್ತ ಭಾರತ ಆಗಲಿದೆ ಎಂದು ಆರ್​​.ಅಶೋಕ್ ಹೇಳಿದ್ರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಎಸ್​​ಡಿಪಿಐ ಮತ್ತು ಪಿಎಫ್ಐ ಕಪಿ ಮುಷ್ಟಿಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ

ಕನಕಪುರದಲ್ಲಿ ಆರ್.ಅಶೋಕ್ ವಾಗ್ದಾಳಿ

ರಾಮನಗರ: ಈ ಬಾರಿ ಕನಕಪುರದ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ವಿರೋಧಿ ಅಲೆ ಇದೆ. ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ ಎಂದು ಕಂದಾಯ ಸಚಿವ, ಬಿಜೆಪಿ ಅಭ್ಯರ್ಥಿ ಆರ್​​ ಅಶೋಕ್ ಕಾಂಗ್ರೆಸ್​​ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಲ್ಲೆಯ ಕನಕಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ಬಿಜೆಪಿಗೆ ಬೂತ್ ಏಜೆಂಟ್ ಇಲ್ಲ ಎಂದು ಕಾಂಗ್ರೆಸ್​​​​ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಕನಕಪುರ ಡಿ ಕೆ ಶಿವಕುಮಾರ್ ಅವರ ಕಪಿ ಮುಷ್ಠಿಯಲ್ಲಿದೆ. ಅದರಿಂದ ಜನರು ಹೊರಗಡೆ ಬರಲು ತೀರ್ಮಾನ ಮಾಡಿದ್ದಾರೆ. ಎಲ್ಲಾ ಬೂತ್​​​ಗಳಲ್ಲೂ ಕೂಡ ನಮ್ಮ ಏಜೆಂಟ್​​ಗಳು ಇರುತ್ತಾರೆ. ಕಾಂಗ್ರೆಸ್​​​ ಮತಗಳು ಕೂಡ ಬಿಜೆಪಿಗೆ ಬರಲಿದೆ ಎಂದರು.

ಸೂಕ್ಷ್ಮ ಮತಗಟ್ಟೆಗಳಲ್ಲಿ ಬಿಎಸ್​​ಎಫ್ ನಿಯೋಜನೆ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಸೂಕ್ತ ಭದ್ರತೆಯೊಂದಿಗೆ ಚುನಾವಣೆ ನಡೆಯಲಿದೆ ಎಂದರು. ಕನಕಪುರದಲ್ಲಿ 8ನೇ ದಿನ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಸಂಘಟನೆ ಉದ್ದೇಶದಿಂದ ಪಕ್ಷ ಇಲ್ಲಿ ನನ್ನನ್ನು ಕಣಕ್ಕಿಳಿಸಿದೆ. ಇದೇ 8 ರಂದು ಅಮಿತ್ ಶಾ ಅವರು ಕನಕಪುರಕ್ಕೆ ಆಗಮಿಸುವ ಸಾಧ್ಯತೆ ಇದೆ. ನಾಳೆ ಸಂಸದ ತೇಜಸ್ವಿ ಸೂರ್ಯ ಬಂದು ಪ್ರಚಾರ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

ಬಜರಂಗದಳ ಬ್ಯಾನ್ ವಿಚಾರವಾಗಿ ವಾಗ್ದಾಳಿ ನಡೆಸಿದ ಅಶೋಕ್: ಬಜರಂಗದಳ ನಿಷೇಧ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳ್ಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು. ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್​​ ಅವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಎಲ್ಲ ಕಡೆ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಕಡೆ ಹನುಮಾನ್ ಚಾಲೀಸಾ ಪಠಣೆ ಮಾಡಲಾಗುತ್ತದೆ. ಕಾಂಗ್ರೆಸ್​​​​ ದೇಶದಲ್ಲಿ ಸರ್ವನಾಶವಾಗುತ್ತದೆ ಎಂದು ಅಶೋಕ್​ ಭವಿಷ್ಯ ನುಡಿದರು.

ರಾಜಕೀಯಕ್ಕೆ ಬರುವ ಮೊದಲು ನಾನು ಬಜರಂಗದಳದ ಕಾರ್ಯಕರ್ತ.‌ ಈಗಲೂ ಕೂಡ ನಾನು ಬಜರಂಗದಳದಲ್ಲಿ ಇದ್ದೇನೆ. ಎಲ್ಲರೂ ಕೂಡ ಆರ್​​ಎಸ್​​ಎಸ್ ಬಜರಂಗದಳದಿಂದ ಬಂದಿರೋದು. ನಿಮಗೆ ತಾಕತ್ತು, ಧಮ್ ಇದೆಯಾ ಬಜರಂಗದಳ ಬ್ಯಾನ್ ಮಾಡೋಕೆ.?, ಕಾಂಗ್ರೆಸ್ ಸಂಸ್ಕೃತಿ ಪಾಕಿಸ್ತಾನಕ್ಕೆ ಜೈ ಅನ್ನುವ ಸಂಸ್ಕಾರ ನಮ್ಮದಲ್ಲ. ಹಾಗೆಯೇ ಕಾಂಗ್ರೆಸ್​​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸ್ ಅ​​​​ನ್ನು ಸುಟ್ಟು ಸರ್ವನಾಶ ಮಾಡುತ್ತದೆ‌. ಕನಕಪುರದಲ್ಲಿ‌ ಮುನೇಶ್ವರ ಬೆಟ್ಟವನ್ನು ಏಸು ಶಿಲುಬೆ ಮಾಡೋಕೆ ಹೊರಟಿದ್ದರು. ಇದೀಗ ಆಂಜನೇಯನ ಸುದ್ದಿಗೆ ಬಂದಿದ್ದೀರಿ. ಮುಂದಿನ ದಿನಗಳಲ್ಲಿ ಮಹಿಳೆಯರು ಕುಂಕುಮ ಇಡೋದಕ್ಕೂ ಇವರು ಬಿಡೊಲ್ಲ ಎಂದು ಸಚಿವ ಅಶೋಕ್​ ಕಿಡಿಕಾರಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ವಿಷ ಸರ್ಪ ಎಂದಿದ್ದಾರೆ. ಒಬ್ಬ ಪ್ರಧಾನಿ ಬಗ್ಗೆ ಮಾತನಾಡಬೇಕಾದರೆ ಯೋಚನೆ ಮಾಡಬೇಕು. ಇಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಬಾರದು‌. ಈ ಎಲ್ಲಾ ಕಾಂಗ್ರೆಸ್​​​ ನಾಯಕರ ಹೇಳಿಕೆಯಿಂದ ಕಾಂಗ್ರೆಸ್ ಅದೋಗತಿಗೆ ಬಂದಿದೆ. ದೇಶ ಕಾಂಗ್ರೆಸ್​​​ ಮುಕ್ತ ಭಾರತ ಆಗಲಿದೆ ಎಂದು ಆರ್​​.ಅಶೋಕ್ ಹೇಳಿದ್ರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಎಸ್​​ಡಿಪಿಐ ಮತ್ತು ಪಿಎಫ್ಐ ಕಪಿ ಮುಷ್ಟಿಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.